ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದುರಾಸೆಯಿಂದಾಗಿ ಪ್ರಕೃತಿಗೆ ಆಪತ್ತು: ಡಾ.ರವಿ

Last Updated 22 ಡಿಸೆಂಬರ್ 2019, 13:19 IST
ಅಕ್ಷರ ಗಾತ್ರ

ಆನೇಕಲ್: ಭವಿಷ್ಯದ ದಿನಗಳಲ್ಲಿನ ಕರಾಳ ದಿನಗಳಿಂದ ಮುಕ್ತವಾಗಲು ಪರಿಸರ ಸಂರಕ್ಷಣೆ ಅತ್ಯಂತ ಜರೂರು ಅವಶ್ಯಕತೆಯಾಗಿದೆ. ಹಾಗಾಗಿ ಯುವಕರು ಪರಿಸರ ಸಂರಕ್ಷಣೆ ಕಾರ್ಯಗಳಿಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಕಾವೇರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಡಾ.ರವಿ ತಿಳಿಸಿದರು.

ಅವರು ಪಟ್ಟಣದಲ್ಲಿ ಕಾವೇರಿ ಪದವಿ ಪೂರ್ವ ಕಾಲೇಜು ಮತ್ತು ಲಯನ್ಸ್‌ ಕ್ಲಬ್‌ ವತಿಯಿಂದ ಆಯೋಜಿಸಿದ್ದ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಮನುಷ್ಯನ ದುರಾಸೆಯಿಂದಾಗಿ ಪ್ರಕೃತಿ ಆಪತ್ತಿಗೆ ಸಿಲುಕಿದೆ. ಇದರ ಪರಿಣಾಮವಾಗಿ ಅತಿವೃಷ್ಠಿ, ಅನಾವೃಷ್ಠಿ, ಭೂತಾಪ ಏರಿಕೆ, ಹವಾಮಾನ ವೈಪರಿತ್ಯ ಸೇರಿದಂತೆ ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದೇವೆ. ಮುಂದಿನ ಭವಿಷ್ಯದ ದೃಷ್ಠಿಯಿಂದ ನದಿ, ಕೆರೆ, ಅರಣ್ಯ, ಸುತ್ತಮುತ್ತಲಿನ ಪರಿಸರದ ಸಂರಕ್ಷಣೆ ಮತ್ತು ಗಿಡ ಮರಗಳನ್ನು ಬೆಳೆಸುವುದಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದರು.

ಮಹಿಳಾ ಹೋರಾಟಗಾರ್ತಿ ಮಮತಾ ಮಾತನಾಡಿ, ಆಧುನಿಕತೆಯ ಫಲವಾಗಿ ಹಲವು ಸೌಲಭ್ಯಗಳು ದೊರೆತಿದ್ದರೂ ಪರಿಸರ ನಾಶವಾಗುತ್ತಿದೆ. ಜೀವ ವೈವಿಧ್ಯ ಸಮಸ್ಯೆಗೆ ಸಿಲುಕಿದೆ. ಹಾಗಾಗಿ ಶಾಲಾ ಕಾಲೇಜುಗಳಲ್ಲಿ ಪರಿಸರ ಸಂರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸುವ ಅವಶ್ಯಕತೆಯಿದೆ ಎಂದರು.

ಮುಖಂಡರಾದ ಸುಶೀಲಾ ಜಿಂಗಾಡೆ, ಲಕ್ಷ್ಮೀನಾರಾಯಣ್‌ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT