<p><strong>ವಿಜಯಪುರ (ದೇವನಹಳ್ಳಿ): </strong>ಗಡ್ಡದನಾಯಕನಹಳ್ಳಿ ದುರ್ಗಾ ಮಹೇಶ್ವರಿ ಅಮ್ಮನವರ ದೇವಾಲಯದಲ್ಲಿ ನವರಾತ್ರಿ ಪ್ರಯುಕ್ತ ದುರ್ಗಾಷ್ಟಮಿ ಮಹೋತ್ಸವ ಮೊದಲ ದಿನ ಮಂಗಳವಾರ ಆನೆ ಅಂಬಾರಿ ಉತ್ಸವಕ್ಕೆ ಜನಸಾಗರ ಹರಿದು ಬಂದಿತ್ತು.</p>.<p>ದೇವಾಲಯದಲ್ಲಿ ಬೆಳಗ್ಗೆ ಗಣಪತಿ ಪೂಜೆ, ಕಲಶಾರಾದನೆ, ಸ್ವಸ್ತಿ ಪುಣ್ಯಾಹವಾಚನ, ಪಂಚಗವ್ಯ ರಕ್ಷಾಬಂಧನ, ಕಲಶಾರಾಧನೆ, ಚಂಡಿ ಸಪ್ತಶತಿ ಪಾರಾಯಣ, ಗಣಪತಿ ಹೋಮ, ನವಗ್ರಹ ಹೋಮ, ಚಂಡಿಕಾ ಹೋಮ, ಮಹಾ ಪೂರ್ಣಾಹುತಿ ಸೇರಿದಂತೆ ಕುಂಬಾಭಿಷೇಕ, ವಿಶೇಷ ಅಲಂಕಾರ, ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ ನಡೆಯಿತು.</p>.<p>ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಹಾಗೂ ಪತ್ನಿ ನಯನಾ ಪ್ರದೀಪ್ ಈಶ್ವರ್ ಅವರು ಹೋಮ, ಕಳಶ ಹೊತ್ತು ವಿವಿಧ ಪೂಜಾ ಕೈಂಕರ್ಯಗಳಲ್ಲಿ ಪಾಲ್ಗೊಂಡು ದುರ್ಗಾ ಮಹೇಶ್ವರಿ ಅಮ್ಮನವರ ಆಶೀರ್ವಾದ ಪಡೆದರು.</p>.<p>ಮಧ್ಯಾಹ್ನ 1ಕ್ಕೆ ಆನೆ ಅಂಬಾರಿ ಉತ್ಸವಕ್ಕೆ ವಿವಿಧ ಗಣ್ಯರಿಂದ ಚಾಲನೆ ದೊರೆಯಿತು. ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಯಿತು.</p>.<p><strong>ಕಲಾತಂಡಗಳ ಮೆರಗು: </strong>ಮೆರವಣಿಗೆ ಉದ್ದಕ್ಕೂ ವೀರಭದ್ರ ಕುಣಿತ, ಡೊಳ್ಳು ಕುಣಿತ, ನವದುರ್ಗಿ ಕುಣಿತ, ಗಾರುಡಿ ಗೊಂಬೆ, ಕೀಲು ಕುಣಿತ ಮೆರಗು ನೀಡದವು. ಬೆಂಗಳೂರಿನ ಶೀಲಾನಾಯ್ಡು ಅವರಿಂದ ಆಯೋಜಿಸಿದ್ದ ಕಥಾಕಾಲಕ್ಷೇಪ, ಭರತ ನಾಟ್ಯ, ಸಂಜೆ ಮಂಗಳೂರಿನ ಪ್ರಸಿದ್ಧ ಕಲಾವಿದರಿಂದ ನಡೆದ ಯಕ್ಷಗಾನ ಭಕ್ತರನ್ನು ಮನಸೊರೆಗೊಳಿಸಿತು.</p>.<p>ವಿವಿಧೆಡೆಯಿಂದ ಭಕ್ತರ ಆಗಮನ: ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಸರತಿ ಸಾಲಿನಲ್ಲಿ ನಿಂತು ದರ್ಶನ ಪಡೆದರು.<br /><br /><br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ (ದೇವನಹಳ್ಳಿ): </strong>ಗಡ್ಡದನಾಯಕನಹಳ್ಳಿ ದುರ್ಗಾ ಮಹೇಶ್ವರಿ ಅಮ್ಮನವರ ದೇವಾಲಯದಲ್ಲಿ ನವರಾತ್ರಿ ಪ್ರಯುಕ್ತ ದುರ್ಗಾಷ್ಟಮಿ ಮಹೋತ್ಸವ ಮೊದಲ ದಿನ ಮಂಗಳವಾರ ಆನೆ ಅಂಬಾರಿ ಉತ್ಸವಕ್ಕೆ ಜನಸಾಗರ ಹರಿದು ಬಂದಿತ್ತು.</p>.<p>ದೇವಾಲಯದಲ್ಲಿ ಬೆಳಗ್ಗೆ ಗಣಪತಿ ಪೂಜೆ, ಕಲಶಾರಾದನೆ, ಸ್ವಸ್ತಿ ಪುಣ್ಯಾಹವಾಚನ, ಪಂಚಗವ್ಯ ರಕ್ಷಾಬಂಧನ, ಕಲಶಾರಾಧನೆ, ಚಂಡಿ ಸಪ್ತಶತಿ ಪಾರಾಯಣ, ಗಣಪತಿ ಹೋಮ, ನವಗ್ರಹ ಹೋಮ, ಚಂಡಿಕಾ ಹೋಮ, ಮಹಾ ಪೂರ್ಣಾಹುತಿ ಸೇರಿದಂತೆ ಕುಂಬಾಭಿಷೇಕ, ವಿಶೇಷ ಅಲಂಕಾರ, ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ ನಡೆಯಿತು.</p>.<p>ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಹಾಗೂ ಪತ್ನಿ ನಯನಾ ಪ್ರದೀಪ್ ಈಶ್ವರ್ ಅವರು ಹೋಮ, ಕಳಶ ಹೊತ್ತು ವಿವಿಧ ಪೂಜಾ ಕೈಂಕರ್ಯಗಳಲ್ಲಿ ಪಾಲ್ಗೊಂಡು ದುರ್ಗಾ ಮಹೇಶ್ವರಿ ಅಮ್ಮನವರ ಆಶೀರ್ವಾದ ಪಡೆದರು.</p>.<p>ಮಧ್ಯಾಹ್ನ 1ಕ್ಕೆ ಆನೆ ಅಂಬಾರಿ ಉತ್ಸವಕ್ಕೆ ವಿವಿಧ ಗಣ್ಯರಿಂದ ಚಾಲನೆ ದೊರೆಯಿತು. ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಯಿತು.</p>.<p><strong>ಕಲಾತಂಡಗಳ ಮೆರಗು: </strong>ಮೆರವಣಿಗೆ ಉದ್ದಕ್ಕೂ ವೀರಭದ್ರ ಕುಣಿತ, ಡೊಳ್ಳು ಕುಣಿತ, ನವದುರ್ಗಿ ಕುಣಿತ, ಗಾರುಡಿ ಗೊಂಬೆ, ಕೀಲು ಕುಣಿತ ಮೆರಗು ನೀಡದವು. ಬೆಂಗಳೂರಿನ ಶೀಲಾನಾಯ್ಡು ಅವರಿಂದ ಆಯೋಜಿಸಿದ್ದ ಕಥಾಕಾಲಕ್ಷೇಪ, ಭರತ ನಾಟ್ಯ, ಸಂಜೆ ಮಂಗಳೂರಿನ ಪ್ರಸಿದ್ಧ ಕಲಾವಿದರಿಂದ ನಡೆದ ಯಕ್ಷಗಾನ ಭಕ್ತರನ್ನು ಮನಸೊರೆಗೊಳಿಸಿತು.</p>.<p>ವಿವಿಧೆಡೆಯಿಂದ ಭಕ್ತರ ಆಗಮನ: ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಸರತಿ ಸಾಲಿನಲ್ಲಿ ನಿಂತು ದರ್ಶನ ಪಡೆದರು.<br /><br /><br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>