ಜಿಲ್ಲಾ ಪಂಚಾಯಿತಿ ಸದಸ್ಯ ಕೆ.ಸಿ.ಮಂಜುನಾಥ್ ಮಾತನಾಡಿ, ‘ಈ ಹಿಂದಿನ ವರ್ಷದಲ್ಲಿ 10ನೇ ತರಗತಿಯ ವಾರ್ಷಿಕ ಫಲಿತಾಂಶ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಲು ಸಹಕರಿಸಿದ ಶಿಕ್ಷಕರನ್ನು ಗುರುತಿಸುವ ಕೆಲಸ ಆಗಬೇಕಿತ್ತು. ಪ್ರತಿ ಶನಿವಾರ, ಭಾನುವಾರ ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳನ್ನು ಆರಂಭದಲ್ಲಿ ಗುರುತಿಸಿ ವಿಶೇಷ ಬೋಧನೆಗೆ ಒತ್ತು ನೀಡುವಂತೆ ಜಿಲ್ಲಾ ಪಂಚಾಯಿತಿ ಸಭೆಯಲ್ಲಿ ಚರ್ಚಿಸಲಾಗಿದೆ. ಈ ಹಿಂದಿನ 10ನೇ ತರಗತಿ ವಾರ್ಷಿಕ ಫಲಿತಾಂಶ ಗುಣಮಟ್ಟದಲ್ಲಿ ರಾಜ್ಯಕ್ಕೆ ಐದನೇ ಸ್ಥಾನ ಬಂದಿರುವುದು ಶ್ಲಾಘನೀಯವಾದರೂ ಮುಂದಿನ ಸಾಲಿನಲ್ಲಿ ಮೊದಲ ಸ್ಥಾನಕ್ಕೆ ಪ್ರಯತ್ನ ಪಡಬೇಕು’ ಎಂದು ಹೇಳಿದರು.