‘ವಿದ್ಯಾಭ್ಯಾಸ, ತಾಂತ್ರಿಕತೆ, ಕೈಗಾರಿಕೆ, ಸಣ್ಣ ಉದ್ದಿಮೆ ಸ್ಥಾಪನೆ ಸೇರಿದಂತೆ ಯೋಜನಾ ವರದಿ ತಯಾರಿಕೆಗೆ ಸರ್ಕಾರದ ಸವಲತ್ತುಗಳು, ರಿಯಾಯಿತಿಗಳು, ಸಹಾಯಧನ, ಲೆಕ್ಕಪತ್ರ ನಿರ್ವಹಣೆ ಹಾಗೂ ಸ್ವಯಂ ಉದ್ಯೋಗಕ್ಕೆ ಬೇಕಾದ ಎಲ್ಲ ರೀತಿಯ ಮಾಹಿತಿಯನ್ನು ನೀಡಲಾಗುತ್ತದೆ. ಪ್ರಧಾನಮಂತ್ರಿ ಮುದ್ರಾ ಯೋಜನೆ ಅಡಿಯಲ್ಲಿ ಉದ್ಯೋಗ ಸೃಷ್ಟಿಸಲಾಗುವುದು. ಫಲಾನುಭವಿಗಳು ಮುಂದೆ ಬಂದರೆ ಅಂತಹವರಿಗೆ ಮಾರ್ಗದರ್ಶನ ನೀಡಿ ಸರ್ಕಾರದ ಸೌಲಭ್ಯಗಳನ್ನು ಪಡೆಯಲು ಉತ್ತೇಜಿಸಲಾಗುತ್ತದೆ’ ಎಂದು ತಿಳಿಸಿದರು.