<p><strong>ಸೂಲಿಬೆಲೆ:</strong> ಗ್ರಾಮೀಣ ಪ್ರದೇಶದ ಯುವಕರನ್ನು ಸಮಾಜದ ಮುಖ್ಯವಾಹಿನಿಗೆ ಕರೆತಂದರೆ ಸಾಮಾಜಿಕ ಬದಲಾವಣೆ ಸಾಧ್ಯ. ಯುವಕರಲ್ಲಿ ನಾಯಕತ್ವ ಗುಣವನ್ನು ಬೆಳೆಸಲು ಅಗತ್ಯ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂದು ಜಿಲ್ಲಾ ಯುವಜನ ಕೇಂದ್ರದ ಸಮನ್ವಯಾಧಿಕಾರಿ ಶ್ರೀವಾಣಿ ಕೋನರೆಡ್ಡಿ ತಿಳಿಸಿದರು.</p>.<p>ಜಿಲ್ಲೆಯ ನೆಹರೂ ಯುವ ಕೇಂದ್ರ, ಕರ್ನಾಟಕ ಗಾಂಧಿ ಸ್ಮಾರಕ ನಿಧಿ, ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಹಾಗೂ ಜೈ ಜವಾನ್ ಜೈ ಕಿಸಾನ್ ಯುವಕರ ಸಂಘದ ವತಿಯಿಂದಸೂಲಿಬೆಲೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ‘ನೆರೆಹೊರೆಯ ಯುವ ಸಂಸತ್ತು’ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.</p>.<p>ನೆಹರೂ ಯುವಜನ ಕೇಂದ್ರ ಕಳೆದ 48 ವರ್ಷಗಳಿಂದ ನಿರಂತರವಾಗಿ ಸೇವೆಯಲ್ಲಿ ತೊಡಗಿಸಿಕೊಂಡಿದೆ. ಯುವ ಸಮುದಾಯವನ್ನು ಸಂಘಟಿಸಿವುದು ಮತ್ತು ಸಬಲೀಕರಣಗೊಳಿಸುವುದು ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಬದ್ಧತೆಯನ್ನು ಸಾಕಾರಗೊಳಿಸುತ್ತಿದೆ ಎಂದು ವಿವರಿಸಿದರು.</p>.<p>ಡಾ.ನಾಗರಾಜ್ ಮಾತನಾಡಿ, ಪ್ರತಿಯೊಬ್ಬರಲ್ಲೂ ನಾಯಕತ್ವದ ಗುಣ ಇರುತ್ತದೆ. ಭಾರತ ದೇಶವು ಅಭಿವೃದ್ಧಿ ಪಥದಲ್ಲಿ ಸಾಗಬೇಕಾದರೆ ಯುವಕರು ರಾಜಕೀಯ ಕ್ಷೇತ್ರಕ್ಕೆ ಪ್ರವೇಶಿಸಬೇಕು. ರಾಜಕೀಯ ಕ್ಷೇತ್ರಕ್ಕೆ ಯುವಕರು ಬರುವುದರಿಂದ ವ್ಯವಸ್ಥೆಯು ಪಾರದರ್ಶಕವಾಗುತ್ತದೆ. ಅಲ್ಲದೆ ಚಲನಶೀಲವಾಗುತ್ತದೆ ಎಂದು ವಿಶ್ಲೇಷಿಸಿದರು.</p>.<p>ಸ್ವಾತಂತ್ರ್ಯ ಹೋರಾಟಗಾರ ಸೂ.ರಂ.ರಾಮಯ್ಯ ಕಾರ್ಯಕ್ರಮ ಉದ್ಘಾಟಿಸಿದರು.ಪ್ರಾಂಶುಪಾಲ ಪ್ರೊ. ನಾರಾಯಣ ಸ್ವಾಮಿ, ರಾಷ್ಟ್ರೀಯ ಸೇವಾ ಯೋಜನೆ ಸಂಯೋಜನಾಧಿಕಾರಿ ಡಾ.ಎನ್.ಎ.ಆದಿನಾರಾಯಣಪ್ಪ, ವಿವೇಕಾನಂದ ವಿದ್ಯಾಭಿವೃದ್ಧಿ ಸಂಘದ ಅಧ್ಯಕ್ಷ ಎಸ್.ಆರ್.ರಂಗನಾಥ್, ಮುಖ್ಯ ಶಿಕ್ಷಕ ಕೆ.ಸುರೇಶ್ ಹಾಗೂ ಉಪನ್ಯಾಸಕ ವರ್ಗ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸೂಲಿಬೆಲೆ:</strong> ಗ್ರಾಮೀಣ ಪ್ರದೇಶದ ಯುವಕರನ್ನು ಸಮಾಜದ ಮುಖ್ಯವಾಹಿನಿಗೆ ಕರೆತಂದರೆ ಸಾಮಾಜಿಕ ಬದಲಾವಣೆ ಸಾಧ್ಯ. ಯುವಕರಲ್ಲಿ ನಾಯಕತ್ವ ಗುಣವನ್ನು ಬೆಳೆಸಲು ಅಗತ್ಯ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂದು ಜಿಲ್ಲಾ ಯುವಜನ ಕೇಂದ್ರದ ಸಮನ್ವಯಾಧಿಕಾರಿ ಶ್ರೀವಾಣಿ ಕೋನರೆಡ್ಡಿ ತಿಳಿಸಿದರು.</p>.<p>ಜಿಲ್ಲೆಯ ನೆಹರೂ ಯುವ ಕೇಂದ್ರ, ಕರ್ನಾಟಕ ಗಾಂಧಿ ಸ್ಮಾರಕ ನಿಧಿ, ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಹಾಗೂ ಜೈ ಜವಾನ್ ಜೈ ಕಿಸಾನ್ ಯುವಕರ ಸಂಘದ ವತಿಯಿಂದಸೂಲಿಬೆಲೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ‘ನೆರೆಹೊರೆಯ ಯುವ ಸಂಸತ್ತು’ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.</p>.<p>ನೆಹರೂ ಯುವಜನ ಕೇಂದ್ರ ಕಳೆದ 48 ವರ್ಷಗಳಿಂದ ನಿರಂತರವಾಗಿ ಸೇವೆಯಲ್ಲಿ ತೊಡಗಿಸಿಕೊಂಡಿದೆ. ಯುವ ಸಮುದಾಯವನ್ನು ಸಂಘಟಿಸಿವುದು ಮತ್ತು ಸಬಲೀಕರಣಗೊಳಿಸುವುದು ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಬದ್ಧತೆಯನ್ನು ಸಾಕಾರಗೊಳಿಸುತ್ತಿದೆ ಎಂದು ವಿವರಿಸಿದರು.</p>.<p>ಡಾ.ನಾಗರಾಜ್ ಮಾತನಾಡಿ, ಪ್ರತಿಯೊಬ್ಬರಲ್ಲೂ ನಾಯಕತ್ವದ ಗುಣ ಇರುತ್ತದೆ. ಭಾರತ ದೇಶವು ಅಭಿವೃದ್ಧಿ ಪಥದಲ್ಲಿ ಸಾಗಬೇಕಾದರೆ ಯುವಕರು ರಾಜಕೀಯ ಕ್ಷೇತ್ರಕ್ಕೆ ಪ್ರವೇಶಿಸಬೇಕು. ರಾಜಕೀಯ ಕ್ಷೇತ್ರಕ್ಕೆ ಯುವಕರು ಬರುವುದರಿಂದ ವ್ಯವಸ್ಥೆಯು ಪಾರದರ್ಶಕವಾಗುತ್ತದೆ. ಅಲ್ಲದೆ ಚಲನಶೀಲವಾಗುತ್ತದೆ ಎಂದು ವಿಶ್ಲೇಷಿಸಿದರು.</p>.<p>ಸ್ವಾತಂತ್ರ್ಯ ಹೋರಾಟಗಾರ ಸೂ.ರಂ.ರಾಮಯ್ಯ ಕಾರ್ಯಕ್ರಮ ಉದ್ಘಾಟಿಸಿದರು.ಪ್ರಾಂಶುಪಾಲ ಪ್ರೊ. ನಾರಾಯಣ ಸ್ವಾಮಿ, ರಾಷ್ಟ್ರೀಯ ಸೇವಾ ಯೋಜನೆ ಸಂಯೋಜನಾಧಿಕಾರಿ ಡಾ.ಎನ್.ಎ.ಆದಿನಾರಾಯಣಪ್ಪ, ವಿವೇಕಾನಂದ ವಿದ್ಯಾಭಿವೃದ್ಧಿ ಸಂಘದ ಅಧ್ಯಕ್ಷ ಎಸ್.ಆರ್.ರಂಗನಾಥ್, ಮುಖ್ಯ ಶಿಕ್ಷಕ ಕೆ.ಸುರೇಶ್ ಹಾಗೂ ಉಪನ್ಯಾಸಕ ವರ್ಗ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>