<p><strong>ನೆಲಮಂಗಲ:</strong> ‘ಮಾದಕ ವ್ಯಸನದಿಂದ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿದ್ದು, ಮಾದಕ ವಸ್ತುಗಳ ಸರಬರಾಜು ಜಾಲ ಮತ್ತು ಅದರ ಕಿಂಗ್ಪಿನ್ಗಳನ್ನು ಪತ್ತೆಹಚ್ಚಲು ಆದ್ಯತೆ ನೀಡಲಾಗುವುದು’ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಅಧೀಕ್ಷಕ ಕೋನ ವಂಶಿ ಕೃಷ್ಣ ತಿಳಿಸಿದರು.</p>.<p>ನೆಲಮಂಗಲ ಉಪವಿಭಾಗದ ಪೊಲೀಸರು ಪತ್ತೆ ಹಚ್ಚಿದ ವಿವಿಧ ಅಪರಾಧ ಪ್ರಕರಣಗಳ ಸಂಬಂಧಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.</p>.<p>‘ಶೀಘ್ರದಲ್ಲೇ ಕಾಲ್ನಡಿಗೆ ಗಸ್ತನ್ನು ಪ್ರಾರಂಭಿಸಲಾಗುವುದು. ಸಾರ್ವಜನಿಕರ ಸುರಕ್ಷತೆಗಾಗಿ ಹೆಚ್ಚು ಜನ ಸಂದಣಿಯಾಗುವ ಮಳಿಗೆಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸುವುದು ಕಡ್ಡಾಯ. ಸದಾ ಒತ್ತಡದಲ್ಲಿ ಕರ್ತವ್ಯ ನಿರ್ವಹಿಸುವ ಪೊಲೀಸರಿಗೆ ಸಾರ್ವಜನಿಕರೊಂದಿಗೆ ಮೃದುವಾಗಿ ಮಾತನಾಡಲು ಕೌಶಲ ತರಬೇತಿ ನೀಡಲಾಗುತ್ತಿದೆ’ ಎಂದರು.</p>.<p>‘ಒಂದು ತಿಂಗಳಲ್ಲಿ 10 ಅಪರಾಧ ಪ್ರಕರಣಗಳಿಂದ ಅಂತರರಾಜ್ಯ ಆರೋಪಿಗಳು ಸೇರಿದಂತೆ 14 ಮಂದಿಯನ್ನು ಬಂಧಿಸಲಾಗಿದೆ. ₹19.13 ಲಕ್ಷ ಬೆಲೆ ಬಾಳುವ 490 ಗ್ರಾಂ ಚಿನ್ನಾಭರಣ, ಮೀನು ಪೆಟ್ಟಿಗೆಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ₹3 ಲಕ್ಷ ಮೌಲ್ಯದ 12 ಕೆ.ಜಿ. ಗಾಂಜಾ, ₹4.61 ಲಕ್ಷ ನಗದು ಸೇರಿದಂತೆ ಒಟ್ಟು ₹26.74 ಲಕ್ಷ ಮೌಲ್ಯದ ಮಾಲು ಜಪ್ತಿ ಮಾಡಲಾಗಿದೆ’ ಎಂದರು.</p>.<p>ಪೊಲೀಸ್ ಅಧಿಕಾರಿಗಳಾದ ಜಗದೀಶ್, ಎ.ವಿ.ಕುಮಾರ್, ಹರೀಶ್, ಮಂಜುನಾಥ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನೆಲಮಂಗಲ:</strong> ‘ಮಾದಕ ವ್ಯಸನದಿಂದ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿದ್ದು, ಮಾದಕ ವಸ್ತುಗಳ ಸರಬರಾಜು ಜಾಲ ಮತ್ತು ಅದರ ಕಿಂಗ್ಪಿನ್ಗಳನ್ನು ಪತ್ತೆಹಚ್ಚಲು ಆದ್ಯತೆ ನೀಡಲಾಗುವುದು’ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಅಧೀಕ್ಷಕ ಕೋನ ವಂಶಿ ಕೃಷ್ಣ ತಿಳಿಸಿದರು.</p>.<p>ನೆಲಮಂಗಲ ಉಪವಿಭಾಗದ ಪೊಲೀಸರು ಪತ್ತೆ ಹಚ್ಚಿದ ವಿವಿಧ ಅಪರಾಧ ಪ್ರಕರಣಗಳ ಸಂಬಂಧಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.</p>.<p>‘ಶೀಘ್ರದಲ್ಲೇ ಕಾಲ್ನಡಿಗೆ ಗಸ್ತನ್ನು ಪ್ರಾರಂಭಿಸಲಾಗುವುದು. ಸಾರ್ವಜನಿಕರ ಸುರಕ್ಷತೆಗಾಗಿ ಹೆಚ್ಚು ಜನ ಸಂದಣಿಯಾಗುವ ಮಳಿಗೆಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸುವುದು ಕಡ್ಡಾಯ. ಸದಾ ಒತ್ತಡದಲ್ಲಿ ಕರ್ತವ್ಯ ನಿರ್ವಹಿಸುವ ಪೊಲೀಸರಿಗೆ ಸಾರ್ವಜನಿಕರೊಂದಿಗೆ ಮೃದುವಾಗಿ ಮಾತನಾಡಲು ಕೌಶಲ ತರಬೇತಿ ನೀಡಲಾಗುತ್ತಿದೆ’ ಎಂದರು.</p>.<p>‘ಒಂದು ತಿಂಗಳಲ್ಲಿ 10 ಅಪರಾಧ ಪ್ರಕರಣಗಳಿಂದ ಅಂತರರಾಜ್ಯ ಆರೋಪಿಗಳು ಸೇರಿದಂತೆ 14 ಮಂದಿಯನ್ನು ಬಂಧಿಸಲಾಗಿದೆ. ₹19.13 ಲಕ್ಷ ಬೆಲೆ ಬಾಳುವ 490 ಗ್ರಾಂ ಚಿನ್ನಾಭರಣ, ಮೀನು ಪೆಟ್ಟಿಗೆಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ₹3 ಲಕ್ಷ ಮೌಲ್ಯದ 12 ಕೆ.ಜಿ. ಗಾಂಜಾ, ₹4.61 ಲಕ್ಷ ನಗದು ಸೇರಿದಂತೆ ಒಟ್ಟು ₹26.74 ಲಕ್ಷ ಮೌಲ್ಯದ ಮಾಲು ಜಪ್ತಿ ಮಾಡಲಾಗಿದೆ’ ಎಂದರು.</p>.<p>ಪೊಲೀಸ್ ಅಧಿಕಾರಿಗಳಾದ ಜಗದೀಶ್, ಎ.ವಿ.ಕುಮಾರ್, ಹರೀಶ್, ಮಂಜುನಾಥ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>