ಅಧಿಕಾರ ಸ್ವೀಕರಿಸಿದ ಬಳಿಕ ಪತ್ರಕರ್ತರ ಜತೆ ಮಾತನಾಡಿದ ಗೀತಾ ಅವರು, ‘2014ರ ಬ್ಯಾಚ್ ನಲ್ಲಿ ಆಯ್ಕೆಯಾಗಿದ್ದು ಇದು ನನ್ನ ಎರಡನೆ ಕಾರ್ಯಕ್ಷೇತ್ರವಾಗಿದೆ. ಹಿಂದೆ ಮದ್ದೂರಿನಲ್ಲಿ ಕೆಲಸ ಮಾಡಿದ್ದೇನೆ. ಸರ್ಕಾರಿ ಜಮೀನುಗಳನ್ನು ಉಳಿಸುವುದು ಹಾಗೂ ಸಾರ್ವಜನಿಕರ ಕೆಲಸಗಳನ್ನು ತ್ವರಿತವಾಗಿ ಮಾಡಿಕೊಡುವುದು ನನ್ನ ಆದ್ಯತೆ. ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸುವೆ’ ಎಂದು ತಿಳಿಸಿದರು.