<p><strong>ದೊಡ್ಡಬಳ್ಳಾಪುರ: </strong>ಹೊಸ ವರ್ಷಾಚರಣೆ ಸಮಯದಲ್ಲಿ ರಾತ್ರಿ ಹೆಚ್ಚಿನ ಸಮಯದವರೆಗೆ ಸಂಭ್ರಮಾಚರಣೆ ಸೇರಿದಂತೆ ಸಾರ್ವಜನಿಕರಿಗೆ ತೊಂದರೆ ಉಂಟು ಮಾಡಿದರೆ ಸಹಿಸಲು ಸಾಧ್ಯವಿಲ್ಲ. ಪೊಲೀಸರ ಅನುಮತಿ ಇಲ್ಲದೆ ದೊಡ್ಡಮಟ್ಟದ ಸಂಭ್ರಮಚರಣೆ ಆಯೋಜಿಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಡಿವೈಎಸ್ಪಿ ಪಾಂಡುರಂಗ ಎಚ್ಚರಿಕೆ ನೀಡಿದ್ದಾರೆ.</p>.<p>ಸಂಚಾರ ಸುರಕ್ಷತಾ ಸಪ್ತಾಹ ಪ್ರಯುಕ್ತ ಜಿಲ್ಲಾ ಪೊಲೀಸ್ ವತಿಯಿಂದ ಶನಿವಾರ ನಗರದಲ್ಲಿ ನಡೆದ ಹೆಲ್ಮೆಟ್ ಅರಿವು ಮತ್ತು ಉಚಿತ ಹೆಲ್ಮೆಟ್ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಹೊಸ ವರ್ಷಾಚರಣೆ ವೇಳೆ ಎಲ್ಲಾ ಪೊಲೀಸ್ ಠಾಣೆ ವ್ಯಾಪ್ತಿಗಳಲ್ಲೂ ಡಿ.31ರವರೆಗೆ ಬೈಕ್, ಕಾರು ಸೇರಿದಂತೆ ವಾಹನಗಳ ತಪಾಸಣೆ ಆರಂಭಿಸಲಾಗಿದೆ. ಕುಡಿದು ವಾಹನಗಳ ಚಾಲನೆ ಮಾಡುವುದು, ವೀಲ್ಹೇ ಮಾಡುವವರಿಗೆ ದಂಡ ವಿಧಿಸುವುದು ಸೇರಿದಂತೆ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಎಚ್ಚರಿಕೆ ನೀಡಿದರು.</p>.<p>ಹೆಲ್ಮೆಟ್ ಧರಿಸದ ಕಾರಣದಿಂದಲೇ ಅಪಘಾತಗಳಲ್ಲಿ ಹೆಚ್ಚಿನ ಸಾವುಗಳು ಸಂಭವಿಸುತ್ತಲೇ ಇವೆ. ಇತ್ತೀಚಿನ ದಿನಗಳಲ್ಲಿ ಯುವ ಸಮುದಾಯ ಸಂಚಾರ ನಿಯಮ ಪಾಲನೆ ಮಾಡದಿರುವುದರಿಂದ ಅಪಘಾತ ಹಾಗೂ ಸಾವುಗಳ ಸಂಖ್ಯೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ವಾಹನಗಳ ತಪಾಸಣೆಯ ಹೊಸ ವರ್ಷಾಚರಣೆಗೆ ಮಾತ್ರ ಸೀಮಿತವಾಗದೆ ನಿರಂತರವಾಗಿ ನಡೆಯಲಿದೆ. ಬೈಕ್ ಸೇರಿದಂತೆ ಇತರೆ ವಾಹನಗಳವರು ಅಗತ್ಯ ದಾಖಲೆ, ಚಾಲನ ಪರವಾನಗಿಯನ್ನು ಕಡ್ಡಾಯವಾಗಿ ಹೊಂದರಬೇಕು ಎಂದು ತಿಳಿಸಿದರು.</p>.<p>ಪೊಲೀಸರು ಹೆಲ್ಮೆಟ್ ಧರಿಸಿ ನಗರದ ಪ್ರಮುಖ ರಸ್ತೆ, ವೃತ್ತಗಳಲ್ಲಿ ಬೈಕ್ನಲ್ಲಿ ಸಂಚರಿಸಿ ಜನರಲ್ಲಿ ಹೆಲ್ಮೆಟ್ ಬಗ್ಗೆ ಅರಿವು ಮೂಡಿಸಿದರು. ನಗರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಅಮರೇಶ್ಗೌಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೊಡ್ಡಬಳ್ಳಾಪುರ: </strong>ಹೊಸ ವರ್ಷಾಚರಣೆ ಸಮಯದಲ್ಲಿ ರಾತ್ರಿ ಹೆಚ್ಚಿನ ಸಮಯದವರೆಗೆ ಸಂಭ್ರಮಾಚರಣೆ ಸೇರಿದಂತೆ ಸಾರ್ವಜನಿಕರಿಗೆ ತೊಂದರೆ ಉಂಟು ಮಾಡಿದರೆ ಸಹಿಸಲು ಸಾಧ್ಯವಿಲ್ಲ. ಪೊಲೀಸರ ಅನುಮತಿ ಇಲ್ಲದೆ ದೊಡ್ಡಮಟ್ಟದ ಸಂಭ್ರಮಚರಣೆ ಆಯೋಜಿಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಡಿವೈಎಸ್ಪಿ ಪಾಂಡುರಂಗ ಎಚ್ಚರಿಕೆ ನೀಡಿದ್ದಾರೆ.</p>.<p>ಸಂಚಾರ ಸುರಕ್ಷತಾ ಸಪ್ತಾಹ ಪ್ರಯುಕ್ತ ಜಿಲ್ಲಾ ಪೊಲೀಸ್ ವತಿಯಿಂದ ಶನಿವಾರ ನಗರದಲ್ಲಿ ನಡೆದ ಹೆಲ್ಮೆಟ್ ಅರಿವು ಮತ್ತು ಉಚಿತ ಹೆಲ್ಮೆಟ್ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಹೊಸ ವರ್ಷಾಚರಣೆ ವೇಳೆ ಎಲ್ಲಾ ಪೊಲೀಸ್ ಠಾಣೆ ವ್ಯಾಪ್ತಿಗಳಲ್ಲೂ ಡಿ.31ರವರೆಗೆ ಬೈಕ್, ಕಾರು ಸೇರಿದಂತೆ ವಾಹನಗಳ ತಪಾಸಣೆ ಆರಂಭಿಸಲಾಗಿದೆ. ಕುಡಿದು ವಾಹನಗಳ ಚಾಲನೆ ಮಾಡುವುದು, ವೀಲ್ಹೇ ಮಾಡುವವರಿಗೆ ದಂಡ ವಿಧಿಸುವುದು ಸೇರಿದಂತೆ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಎಚ್ಚರಿಕೆ ನೀಡಿದರು.</p>.<p>ಹೆಲ್ಮೆಟ್ ಧರಿಸದ ಕಾರಣದಿಂದಲೇ ಅಪಘಾತಗಳಲ್ಲಿ ಹೆಚ್ಚಿನ ಸಾವುಗಳು ಸಂಭವಿಸುತ್ತಲೇ ಇವೆ. ಇತ್ತೀಚಿನ ದಿನಗಳಲ್ಲಿ ಯುವ ಸಮುದಾಯ ಸಂಚಾರ ನಿಯಮ ಪಾಲನೆ ಮಾಡದಿರುವುದರಿಂದ ಅಪಘಾತ ಹಾಗೂ ಸಾವುಗಳ ಸಂಖ್ಯೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ವಾಹನಗಳ ತಪಾಸಣೆಯ ಹೊಸ ವರ್ಷಾಚರಣೆಗೆ ಮಾತ್ರ ಸೀಮಿತವಾಗದೆ ನಿರಂತರವಾಗಿ ನಡೆಯಲಿದೆ. ಬೈಕ್ ಸೇರಿದಂತೆ ಇತರೆ ವಾಹನಗಳವರು ಅಗತ್ಯ ದಾಖಲೆ, ಚಾಲನ ಪರವಾನಗಿಯನ್ನು ಕಡ್ಡಾಯವಾಗಿ ಹೊಂದರಬೇಕು ಎಂದು ತಿಳಿಸಿದರು.</p>.<p>ಪೊಲೀಸರು ಹೆಲ್ಮೆಟ್ ಧರಿಸಿ ನಗರದ ಪ್ರಮುಖ ರಸ್ತೆ, ವೃತ್ತಗಳಲ್ಲಿ ಬೈಕ್ನಲ್ಲಿ ಸಂಚರಿಸಿ ಜನರಲ್ಲಿ ಹೆಲ್ಮೆಟ್ ಬಗ್ಗೆ ಅರಿವು ಮೂಡಿಸಿದರು. ನಗರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಅಮರೇಶ್ಗೌಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>