<p><strong>ಆನೇಕಲ್: </strong>ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ–44ರ ಕಾಮಗಾರಿಯು ಆಮೆಗತಿಯಲ್ಲಿ ಸಾಗುತ್ತಿದ್ದು, ಪ್ರತಿನಿತ್ಯ ವಾಹನ ಸವಾರರು ಗಂಟೆಗಟ್ಟಲೇ ಕಾದು ಸಂಚರಿಸಿಬೇಕಿದೆ.</p>.<p>ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಿಂದಾಗಿ ಚಂದಾಪುರ-ಅತ್ತಿಬೆಲೆ ರಸ್ತೆಯಲ್ಲಿ ಪ್ರಯಾಣಿಸುವುದು ಅತ್ಯಂತ ಕಷ್ಟವಾಗಿದೆ. ಐದಾರು ಕಿ.ಮೀ ಸಾಗಲು 40-50 ನಿಮಿಷವಾಗುತ್ತಿದೆ. ವಾಹನ ದಟ್ಟಣೆ, ಧೂಳಿನಿಂದಾಗಿ ಈ ರಸ್ತೆಯಲ್ಲಿ ಸಂಚರಿಸಲು ಪರದಾಡಬೇಕಾಗಿದೆ.</p>.<p>ಶುಕ್ರವಾರ ರಾಷ್ಟ್ರೀಯ ಹೆದ್ದಾರಿ 44ರ ನೆರಳೂರು ಸಮೀಪ ಆಂಬುಲೆನ್ಸ್ ಸಿಲುಕಿ ಪರದಾಡಿದ ಘಟನೆ ನಿರ್ಮಾಣವಾಗಿತ್ತು. ಈ ರಸ್ತೆಯಲ್ಲಿ ಹಲವಾರು ಪ್ರತಿಷ್ಠಿತ ಆಸ್ಪತ್ರೆಗಳಿವೆ. ತುರ್ತು ಪರಿಸ್ಥಿತಿಯಲ್ಲಿ ರಸ್ತೆ ದಟ್ಟಣೆಯಿಂದ ರೋಗಿಗಳು ನರಳಾಟ ಅನುಭವಿಸಬೇಕಾಗಿದೆ. ಬೆಳಗ್ಗೆ, ಸಂಜೆ ಈ ರಸ್ತೆಯಲ್ಲಿ ಸಾಗುವ ವಿದ್ಯಾರ್ಥಿಗಳಿಗೂ ಹೆಚ್ಚು ತೊಂದರೆಯಾಗಿದೆ. ಚಂದಾಪುರದಿಂದ ಅತ್ತಿಬೆಲೆವರೆಗೂ ಸಾಗಲು ಸಾಹಸ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.</p>.<p>‘ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗಿದರೆ ಸುಗಮ ಸಂಚಾರದಲ್ಲಿ ಸಾಗಬಹುದು ಎಂಬ ನಂಬಿಕೆಯಿಂದ ರಾಷ್ಟ್ರೀಯ ಹೆದ್ದಾರಿಗೆ ಬರುತ್ತೇವೆ. ಆದರೆ ರಾಷ್ಟ್ರೀಯ ಹೆದ್ದಾರಿ 44ರ ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿರುವುದರಿಂದ ಈ ರಸ್ತೆಗೆ ಬರುವುದೇ ಬೇಡ ಎಂಬ ಮನಸ್ಥಿತಿಗೆ ಬಂದಿದ್ದೇವೆ. ಮಕ್ಕಳನ್ನು ಶಾಲಾ ಕಾಲೇಜಿಗೆ ಬಿಡಲು ಪರ್ಯಾಯ ಮಾರ್ಗಗಳನ್ನು ಹುಡುಕಿಕೊಂಡಿದ್ದೇವೆ. ತುರ್ತು ಪರಿಸ್ಥಿತಿಯಲ್ಲಿರುವವರು ಈ ರಸ್ತೆಗೆ ಬರಲೇ ಬಾರದು’ ಎಂದು ಸ್ಥಳೀಯರಾದ ಮಹದೇಶ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ರಾಷ್ಟ್ರೀಯ ಹೆದ್ದಾರಿ 44ರ ಅಭಿವೃದ್ಧಿ, ರಸ್ತೆ ವಿಸ್ತರಣೆ, ವಿಭಜಕಗಳ ನಿರ್ಮಾಣ ಕಾಮಗಾರಿಗೆ ವೇಗ ನೀಡಿ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂಬುದು ವಾಹನ ಸವಾರರ ಆಗ್ರಹ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆನೇಕಲ್: </strong>ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ–44ರ ಕಾಮಗಾರಿಯು ಆಮೆಗತಿಯಲ್ಲಿ ಸಾಗುತ್ತಿದ್ದು, ಪ್ರತಿನಿತ್ಯ ವಾಹನ ಸವಾರರು ಗಂಟೆಗಟ್ಟಲೇ ಕಾದು ಸಂಚರಿಸಿಬೇಕಿದೆ.</p>.<p>ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಿಂದಾಗಿ ಚಂದಾಪುರ-ಅತ್ತಿಬೆಲೆ ರಸ್ತೆಯಲ್ಲಿ ಪ್ರಯಾಣಿಸುವುದು ಅತ್ಯಂತ ಕಷ್ಟವಾಗಿದೆ. ಐದಾರು ಕಿ.ಮೀ ಸಾಗಲು 40-50 ನಿಮಿಷವಾಗುತ್ತಿದೆ. ವಾಹನ ದಟ್ಟಣೆ, ಧೂಳಿನಿಂದಾಗಿ ಈ ರಸ್ತೆಯಲ್ಲಿ ಸಂಚರಿಸಲು ಪರದಾಡಬೇಕಾಗಿದೆ.</p>.<p>ಶುಕ್ರವಾರ ರಾಷ್ಟ್ರೀಯ ಹೆದ್ದಾರಿ 44ರ ನೆರಳೂರು ಸಮೀಪ ಆಂಬುಲೆನ್ಸ್ ಸಿಲುಕಿ ಪರದಾಡಿದ ಘಟನೆ ನಿರ್ಮಾಣವಾಗಿತ್ತು. ಈ ರಸ್ತೆಯಲ್ಲಿ ಹಲವಾರು ಪ್ರತಿಷ್ಠಿತ ಆಸ್ಪತ್ರೆಗಳಿವೆ. ತುರ್ತು ಪರಿಸ್ಥಿತಿಯಲ್ಲಿ ರಸ್ತೆ ದಟ್ಟಣೆಯಿಂದ ರೋಗಿಗಳು ನರಳಾಟ ಅನುಭವಿಸಬೇಕಾಗಿದೆ. ಬೆಳಗ್ಗೆ, ಸಂಜೆ ಈ ರಸ್ತೆಯಲ್ಲಿ ಸಾಗುವ ವಿದ್ಯಾರ್ಥಿಗಳಿಗೂ ಹೆಚ್ಚು ತೊಂದರೆಯಾಗಿದೆ. ಚಂದಾಪುರದಿಂದ ಅತ್ತಿಬೆಲೆವರೆಗೂ ಸಾಗಲು ಸಾಹಸ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.</p>.<p>‘ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗಿದರೆ ಸುಗಮ ಸಂಚಾರದಲ್ಲಿ ಸಾಗಬಹುದು ಎಂಬ ನಂಬಿಕೆಯಿಂದ ರಾಷ್ಟ್ರೀಯ ಹೆದ್ದಾರಿಗೆ ಬರುತ್ತೇವೆ. ಆದರೆ ರಾಷ್ಟ್ರೀಯ ಹೆದ್ದಾರಿ 44ರ ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿರುವುದರಿಂದ ಈ ರಸ್ತೆಗೆ ಬರುವುದೇ ಬೇಡ ಎಂಬ ಮನಸ್ಥಿತಿಗೆ ಬಂದಿದ್ದೇವೆ. ಮಕ್ಕಳನ್ನು ಶಾಲಾ ಕಾಲೇಜಿಗೆ ಬಿಡಲು ಪರ್ಯಾಯ ಮಾರ್ಗಗಳನ್ನು ಹುಡುಕಿಕೊಂಡಿದ್ದೇವೆ. ತುರ್ತು ಪರಿಸ್ಥಿತಿಯಲ್ಲಿರುವವರು ಈ ರಸ್ತೆಗೆ ಬರಲೇ ಬಾರದು’ ಎಂದು ಸ್ಥಳೀಯರಾದ ಮಹದೇಶ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ರಾಷ್ಟ್ರೀಯ ಹೆದ್ದಾರಿ 44ರ ಅಭಿವೃದ್ಧಿ, ರಸ್ತೆ ವಿಸ್ತರಣೆ, ವಿಭಜಕಗಳ ನಿರ್ಮಾಣ ಕಾಮಗಾರಿಗೆ ವೇಗ ನೀಡಿ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂಬುದು ವಾಹನ ಸವಾರರ ಆಗ್ರಹ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>