<p><strong>ದೇವನಹಳ್ಳಿ</strong>: ₹30 ಲಕ್ಷ ನಗದು ತಂದುಕೊಟ್ಟರೆ ₹90 ಲಕ್ಷ ನೀಡುವುದಾಗಿ ಹೇಳಿ ಆಮಿಷವೊಡ್ಡಿದ ಗುಂಪೊಂದು ದೇವನಹಳ್ಳಿಯಲ್ಲಿ ನಗದು ಕಿತ್ತುಕೊಂಡು ಪರಾರಿಯಾದ ಘಟನೆ ನಡೆದಿದ್ದು, ಈ ಕುರಿತು ಕೆ. ಶಂಕರಪ್ಪ (50) ದೇವನಹಳ್ಳಿ ಪೊಲೀಸರಿಗೆ ದೂರು ನೀಡಿದ್ದಾರೆ.</p>.<p>ಹೊಸಕೋಟೆಯ ಶರೀಪ್ ಎಂಬಾತ ‘ಗೋದಾಮಿನಲ್ಲಿ ಹಣ ಇದೆ, ₹30 ಲಕ್ಷ ಹೂಡಿದರೆ 10 ತಿಂಗಳಲ್ಲಿ ₹90 ಲಕ್ಷವಾಗಿ ಖಾತೆಗೆ ಜಮಾ ಮಾಡುತ್ತೇವೆ’ ಎಂದು ನಂಬಿಸಿ, ದೇವನಹಳ್ಳಿಯ ಆಕಾಶ್ ಆಸ್ಪತ್ರೆ ಸಮೀಪಕ್ಕೆ ಕರೆಸಿಕೊಂಡಿದ್ದಾನೆ.</p>.<p>ಹಣದ ವ್ಯವಸ್ಥೆಗಾಗಿ ಶಂಕರಪ್ಪ ತಮ್ಮ ಹಾಗೂ ಪತ್ನಿಯ ಚಿನ್ನಾಭರಣಗಳನ್ನು ಅಡಮಾನ ಇಟ್ಟು, ಸ್ನೇಹಿತರ ಸಹಾಯದಿಂದ ₹30 ಲಕ್ಷ ಒಗ್ಗೂಡಿಸಿದ್ದಾರೆ. ಫೆ. 13ರಂದು ಬೆಳಿಗ್ಗೆ ಕಾರಿನಲ್ಲಿ ನಗದು ತೆಗೆದುಕೊಂಡು ಬಂದ ವೇಳೆ ಶರೀಪ್, ಕೃಷ್ಣರೆಡ್ಡಿ, ಇಮ್ರಾನ್ ಸೇರಿದಂತೆ ಕೆಲವರು ಹಣ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.</p>.<p>ಇದೇ ಸಂದರ್ಭದಲ್ಲಿ ಖಾಸಗಿ ಕಾರಿನಲ್ಲಿ ಬಂದ ಮೂವರು ಅಪರಿಚಿತರು ‘ಏನು ನಡೆಯುತ್ತಿದೆ?’ ಎಂದು ಪ್ರಶ್ನಿಸಿ, ನಗದು ಇದ್ದ ಬ್ಯಾಗ್ ಕಿತ್ತುಕೊಂಡು ಕೃಷ್ಣರೆಡ್ಡಿಯನ್ನು ತಮ್ಮ ಕಾರಿನಲ್ಲಿ ಕೂರಿಸಿಕೊಂಡು ಪರಾರಿಯಾಗಿದ್ದಾರೆ.</p>.<p>ಘಟನೆ ಸಂಬಂಧ ಒಟ್ಟು 12 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದ್ದು, ಇದುವರೆಗೆ 9 ಮಂದಿಯನ್ನು ಬಂಧಿಸಿ ಪೊಲೀಸರು ವಿಚಾರಣೆ ಮುಂದುವರೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೇವನಹಳ್ಳಿ</strong>: ₹30 ಲಕ್ಷ ನಗದು ತಂದುಕೊಟ್ಟರೆ ₹90 ಲಕ್ಷ ನೀಡುವುದಾಗಿ ಹೇಳಿ ಆಮಿಷವೊಡ್ಡಿದ ಗುಂಪೊಂದು ದೇವನಹಳ್ಳಿಯಲ್ಲಿ ನಗದು ಕಿತ್ತುಕೊಂಡು ಪರಾರಿಯಾದ ಘಟನೆ ನಡೆದಿದ್ದು, ಈ ಕುರಿತು ಕೆ. ಶಂಕರಪ್ಪ (50) ದೇವನಹಳ್ಳಿ ಪೊಲೀಸರಿಗೆ ದೂರು ನೀಡಿದ್ದಾರೆ.</p>.<p>ಹೊಸಕೋಟೆಯ ಶರೀಪ್ ಎಂಬಾತ ‘ಗೋದಾಮಿನಲ್ಲಿ ಹಣ ಇದೆ, ₹30 ಲಕ್ಷ ಹೂಡಿದರೆ 10 ತಿಂಗಳಲ್ಲಿ ₹90 ಲಕ್ಷವಾಗಿ ಖಾತೆಗೆ ಜಮಾ ಮಾಡುತ್ತೇವೆ’ ಎಂದು ನಂಬಿಸಿ, ದೇವನಹಳ್ಳಿಯ ಆಕಾಶ್ ಆಸ್ಪತ್ರೆ ಸಮೀಪಕ್ಕೆ ಕರೆಸಿಕೊಂಡಿದ್ದಾನೆ.</p>.<p>ಹಣದ ವ್ಯವಸ್ಥೆಗಾಗಿ ಶಂಕರಪ್ಪ ತಮ್ಮ ಹಾಗೂ ಪತ್ನಿಯ ಚಿನ್ನಾಭರಣಗಳನ್ನು ಅಡಮಾನ ಇಟ್ಟು, ಸ್ನೇಹಿತರ ಸಹಾಯದಿಂದ ₹30 ಲಕ್ಷ ಒಗ್ಗೂಡಿಸಿದ್ದಾರೆ. ಫೆ. 13ರಂದು ಬೆಳಿಗ್ಗೆ ಕಾರಿನಲ್ಲಿ ನಗದು ತೆಗೆದುಕೊಂಡು ಬಂದ ವೇಳೆ ಶರೀಪ್, ಕೃಷ್ಣರೆಡ್ಡಿ, ಇಮ್ರಾನ್ ಸೇರಿದಂತೆ ಕೆಲವರು ಹಣ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.</p>.<p>ಇದೇ ಸಂದರ್ಭದಲ್ಲಿ ಖಾಸಗಿ ಕಾರಿನಲ್ಲಿ ಬಂದ ಮೂವರು ಅಪರಿಚಿತರು ‘ಏನು ನಡೆಯುತ್ತಿದೆ?’ ಎಂದು ಪ್ರಶ್ನಿಸಿ, ನಗದು ಇದ್ದ ಬ್ಯಾಗ್ ಕಿತ್ತುಕೊಂಡು ಕೃಷ್ಣರೆಡ್ಡಿಯನ್ನು ತಮ್ಮ ಕಾರಿನಲ್ಲಿ ಕೂರಿಸಿಕೊಂಡು ಪರಾರಿಯಾಗಿದ್ದಾರೆ.</p>.<p>ಘಟನೆ ಸಂಬಂಧ ಒಟ್ಟು 12 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದ್ದು, ಇದುವರೆಗೆ 9 ಮಂದಿಯನ್ನು ಬಂಧಿಸಿ ಪೊಲೀಸರು ವಿಚಾರಣೆ ಮುಂದುವರೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>