ಕೆರೆ, ಕುಂಟೆ, ಕ್ವಾರಿಯಲ್ಲಿ ಶೇಖರಣೆಗೊಂಡಿರುವ ನೀರಿಗೆ ವಲಸೆ ಹಕ್ಕಿಗಳು ಬರುವ ಸಾಧ್ಯತೆ ಇರುವುದರಿಂದ ನಿಗಾ ಇಡುವಂತೆಯೂ ಸೂಚಿಸಲಾಗಿದೆ. ಜಿಲ್ಲಾ ಮಟ್ಟದಲ್ಲಿ ಹಕ್ಕಿ ಜ್ವರದ ಬಗ್ಗೆ ನಿಗಾ ಇಡಲು ಪಶು ಅಧಿಕಾರಿಗಳ ತಜ್ಞರ ಸಮಿತಿ ರಚಿಸಲಾಗಿದೆ ಎಂದು ಪಶುವೈದ್ಯಕೀಯ ಇಲಾಖೆ ಜಿಲ್ಲಾ ಉಪನಿರ್ದೇಶಕ ನಾಗರಾಜ್ ಗೌಡ ತಿಳಿಸಿದರು.