ಅವರು ಈ ಬಗ್ಗೆ ಮಾಹಿತಿ ನೀಡಿ, ಲಾಕ್ಡೌನ್ ನಂತರ ಗ್ರಾಮೀಣ ಭಾಗದ ರೈತರು ಸೇರಿದಂತೆ ಬಹುತೇಕ ಕಾರ್ಮಿಕರ ಆರ್ಥಿಕ ಸ್ಥಿತಿ ಅತ್ಯಂತ ಗಂಭೀರವಾಗಿದೆ. ಇಂತಹ ಸಂದರ್ಭದಲ್ಲಿಯೇ ಗ್ರಾಮೀಣ ಭಾಗದಲ್ಲಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸಾಮಾನ್ಯ ದಿನ ಬಳಕೆಯ ಮಾತ್ರೆಗಳು ಸೇರಿದಂತೆ ಎಲ್ಲಾ ರೀತಿಯ ಔಷಧಿಗಳಿಗೆ ಖಾಸಗಿಯವರನ್ನೇ ಅವಲಂಭಿಸುವಂತಾಗಿದೆ. ಕೊರೊನಾ ವೈರಸ್ ಸೋಂಕಿನ ಭೀತಿಯಲ್ಲಿ ಕಾಲಕಳೆಯುತ್ತಿರುವ ಗ್ರಾಮೀಣ ಭಾಗದಲ್ಲಿ ಜನ ಸರ್ಕಾರಿ ಆಸ್ಪತ್ರೆಗಳ ಮೇಲೆ ಹೆಚ್ಚು ಅವಲಂಭಿತರಾಗಿದ್ದಾರೆ. ಸರ್ಕಾರ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಸೂಕ್ತ ಔಷಧಿ, ಮಾತ್ರೆಗಳನ್ನು ಸರಬರಾಜು ಮಾಡದೇ ಇರುವುದು ಖಂಡನೀಯ ಎಂದು ತಿಳಿಸಿದ್ದಾರೆ.