ನಾಮಪತ್ರ ಸಲ್ಲಿಕೆಗೆ ಅಭ್ಯರ್ಥಿಗಳು ತಮ್ಮ ಬೆಂಬಲಿಗರೊಂದಿಗೆ ಬರುವುದ ರಿಂದ ಸಲ್ಲಿಕೆ ಕೇಂದ್ರದ ಮುಂದೆ ನೂಕುನುಗ್ಗಲು ಉಂಟಾಗುವ ಸಾಧ್ಯತೆ ಹೆಚ್ಚಾಗಿದೆ. ಈ ನಡುವೆಯೇ ರಾಜ್ಯ ಚುನಾವಣಾ ಆಯೋಗ ಬುಧವಾರ ಚುನಾವಣಾ ಮಾರ್ಗಸೂಚಿ ಪ್ರಕಟಿಸಿದೆ. ಅಭ್ಯರ್ಥಿಗಳು ಮತಯಾಚನೆಗೆ ಮನೆಗಳಿಗೆ ಭೇಟಿ ನೀಡುವ ಸಂದರ್ಭ ದಲ್ಲಿ ಅಭ್ಯರ್ಥಿ ಸೇರಿದಂತೆ ಐದು ಜನರಿಗಿಂತಲೂ ಹೆಚ್ಚು ಇರಬಾರದು. ಪ್ರಚಾರದ ವೇಳೆ ಜನರು ಗುಂಪು ಸೇರಿಸುವುದು, ಯಾವುದೇ ರೀತಿಯ ವಾಹನಗಳನ್ನು ಬಳಸುವುದನ್ನು ನಿಷೇಧಿಸಿದೆ. ಪ್ರಚಾರ ಸೇರಿದಂತೆ ಎಲ್ಲಾ ಸಂದರ್ಭದಲ್ಲೂ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಿದೆ.