<p><strong>ಹೊಸಕೋಟೆ</strong>: ‘ಕಳೆದ 40 ವರ್ಷಗಳಿಂದ ತಾಲ್ಲೂಕಿನಲ್ಲಿ ಆಗದಷ್ಟು ಅಭಿವೃದ್ಧಿ ಕಾರ್ಯಗಳು ಈಗ ಆಗುತ್ತಿವೆ. ಅಭಿವೃದ್ಧಿ ವಿಚಾರದಲ್ಲಿ ಯಾರೊಬ್ಬರೂ ರಾಜಕೀಯ ಬೆರೆಸಬಾರದು’ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಟಿ.ಬಿ ನಾಗರಾಜ್ ಹೇಳಿದರು.</p>.<p>ತಾಲ್ಲೂಕಿನ ಮುತ್ಸಂದ್ರ ಗ್ರಾಮ ಪಂಚಾಯಿತಿಯ ಹಾರೋಹಳ್ಳಿ ಮೇಲುಸೇತುವೆ ಕಾಮಗಾರಿ ವೀಕ್ಷಿಸಿ ಅವರು ಮಾತನಾಡಿದರು.</p>.<p>ವರ್ತೂರಿನಿಂದ ಹೊಸೂರಿಗೆ ಹೋಗುವ ಬೆಂಗಳೂರಿನ ನೀರಿನ ಕಾಲುವೆಗೆ ಮೇಲುಸೇತುವೆ ನಿರ್ಮಿಸಲಾಗುತ್ತಿದೆ. ಇದರಿಂದ ಈ ಭಾಗದ ಜನತೆಯು ಬೆಂಗಳೂರಿನ ವೈಟ್ಫೀಲ್ಡ್ ಸೇರಿದಂತೆ ಇತರೇ ಪ್ರದೇಶಗಳಿಗೆ ಹೋಗಲು ಅನುಕೂಲವಾಗುತ್ತದೆ. ಸುಮಾರು ಆರು ಕಿಲೋಮೀಟರ್ನಷ್ಟು ದೂರ ಕಡಿಮೆಯಾಗುತ್ತದೆ ಎಂದು ಹೇಳಿದರು.</p>.<p>ಸಂಸದ ಬಚ್ಚೇಗೌಡ ಅವರು ಶಾಸಕರಾಗಿದ್ದಾಗ ಈ ಸೇತುವೆ ನಿರ್ಮಾಣಕ್ಕೆ ಮೂರು ಬಾರಿ ಗುದ್ದಲಿಪೂಜೆ ಮಾಡಿದ್ದರೂ ಕಾಮಗಾರಿ ಪ್ರಾರಂಭಿಸಿರಲಿಲ್ಲ. ತಾವು 2015ರಲ್ಲಿ ಶಾಸಕರಾದಾಗ ಸರ್ಕಾರದಿಂದ ₹ 4 ಕೋಟಿ ಅನುದಾನ ತಂದು ಕಾಮಗಾರಿ ಪ್ರಾರಂಭಿಸಿದ್ದು, ಇನ್ನು ಕೆಲವೇ ದಿನಗಳಲ್ಲಿ ಲೋಕಾರ್ಪಣೆಯಾಗುತ್ತದೆ. ಇದರಿಂದ ಈ ಭಾಗದ ರೈತರಿಗೂ ಹೆಚ್ಚಿನ ಅನುಕೂಲವಾಗಲಿದೆ ಎಂದು<br />ಹೇಳಿದರು.</p>.<p>ಸೇತುವೆ ಪಕ್ಕದಲ್ಲಿರುವ ಜಮೀನಿನ ಮಾಲೀಕರು ರಸ್ತೆ ಮಾಡಲು ರಾಜಕೀಯವಾಗಿ ಅಡ್ಡಿಪಡಿಸುತ್ತಿದ್ದಾರೆ. ಈ ಸಮಸ್ಯೆ ಶೀಘ್ರವೇ ಪರಿಹಾರವಾಗಲಿದೆ. ಜನರಿಗೆ ಅವಶ್ಯವಾಗಿರುವ ಕೆಲಸ ಮಾಡುವಾಗ ವಿರೋಧ ಪಕ್ಷದವರು ರಾಜಕೀಯ ಕಾರಣಗಳಿಗಾಗಿ ಅಡ್ಡಿಪಡಿಸುವುದು ಸರಿಯಲ್ಲ ಎಂದುಹೇಳಿದರು.</p>.<p>ತಾಲ್ಲೂಕಿನಲ್ಲಿ ಎಲ್ಲಾ ಅಭಿವೃದ್ಧಿ ಕಾಮಗಾರಿಗಳು ತಮ್ಮ ಅವಧಿಯಲ್ಲಿಯೇ ನಡೆದಿದೆ ಎಂಬಂತೆ ಬಿಂಬಿಸುವ ವಿರೋಧ ಪಕ್ಷದವರು ಇಂತಹ ಜನೋಪಕಾರಿ ಕಾಮಗಾರಿಗಳನ್ನು ಏಕೆ ಮಾಡಿಸಲಿಲ್ಲ ಎಂದು ಪ್ರಶ್ನಿಸಿದರು.</p>.<p>ಈ ಮೇಲುಸೇತುವೆ ನಿರ್ಮಾಣವಾದರೆ ಚಿಕ್ಕತಿರುಪತಿ ಮತ್ತು ಹೊಸೂರಿಗೆ ಹೋಗಲು ಹಾಗೂ ತಮ್ಮ ಗ್ರಾಮದೇವತೆ ಹೊನ್ನಮ್ಮ ಚೆನ್ನಮ್ಮ ದೇವರಿಗೆ ಪೂಜೆ ಸಲ್ಲಿಸಲು ಅನುಕೂಲವಾಗುತ್ತದೆ ಎಂದು ಸ್ಥಳೀಯರು ಹರ್ಷ ವ್ಯಕ್ತಪಡಿಸಿದರು.</p>.<p>ಮುಖಂಡರಾದ ಬಾಬುರೆಡ್ಡಿ, ಶಂಕರೇಗೌಡ, ವಿನೋದ್ ರೆಡ್ಡಿ, ಕುಮಾರ ಕಂಠೀರವ, ಮುರಳಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಕೋಟೆ</strong>: ‘ಕಳೆದ 40 ವರ್ಷಗಳಿಂದ ತಾಲ್ಲೂಕಿನಲ್ಲಿ ಆಗದಷ್ಟು ಅಭಿವೃದ್ಧಿ ಕಾರ್ಯಗಳು ಈಗ ಆಗುತ್ತಿವೆ. ಅಭಿವೃದ್ಧಿ ವಿಚಾರದಲ್ಲಿ ಯಾರೊಬ್ಬರೂ ರಾಜಕೀಯ ಬೆರೆಸಬಾರದು’ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಟಿ.ಬಿ ನಾಗರಾಜ್ ಹೇಳಿದರು.</p>.<p>ತಾಲ್ಲೂಕಿನ ಮುತ್ಸಂದ್ರ ಗ್ರಾಮ ಪಂಚಾಯಿತಿಯ ಹಾರೋಹಳ್ಳಿ ಮೇಲುಸೇತುವೆ ಕಾಮಗಾರಿ ವೀಕ್ಷಿಸಿ ಅವರು ಮಾತನಾಡಿದರು.</p>.<p>ವರ್ತೂರಿನಿಂದ ಹೊಸೂರಿಗೆ ಹೋಗುವ ಬೆಂಗಳೂರಿನ ನೀರಿನ ಕಾಲುವೆಗೆ ಮೇಲುಸೇತುವೆ ನಿರ್ಮಿಸಲಾಗುತ್ತಿದೆ. ಇದರಿಂದ ಈ ಭಾಗದ ಜನತೆಯು ಬೆಂಗಳೂರಿನ ವೈಟ್ಫೀಲ್ಡ್ ಸೇರಿದಂತೆ ಇತರೇ ಪ್ರದೇಶಗಳಿಗೆ ಹೋಗಲು ಅನುಕೂಲವಾಗುತ್ತದೆ. ಸುಮಾರು ಆರು ಕಿಲೋಮೀಟರ್ನಷ್ಟು ದೂರ ಕಡಿಮೆಯಾಗುತ್ತದೆ ಎಂದು ಹೇಳಿದರು.</p>.<p>ಸಂಸದ ಬಚ್ಚೇಗೌಡ ಅವರು ಶಾಸಕರಾಗಿದ್ದಾಗ ಈ ಸೇತುವೆ ನಿರ್ಮಾಣಕ್ಕೆ ಮೂರು ಬಾರಿ ಗುದ್ದಲಿಪೂಜೆ ಮಾಡಿದ್ದರೂ ಕಾಮಗಾರಿ ಪ್ರಾರಂಭಿಸಿರಲಿಲ್ಲ. ತಾವು 2015ರಲ್ಲಿ ಶಾಸಕರಾದಾಗ ಸರ್ಕಾರದಿಂದ ₹ 4 ಕೋಟಿ ಅನುದಾನ ತಂದು ಕಾಮಗಾರಿ ಪ್ರಾರಂಭಿಸಿದ್ದು, ಇನ್ನು ಕೆಲವೇ ದಿನಗಳಲ್ಲಿ ಲೋಕಾರ್ಪಣೆಯಾಗುತ್ತದೆ. ಇದರಿಂದ ಈ ಭಾಗದ ರೈತರಿಗೂ ಹೆಚ್ಚಿನ ಅನುಕೂಲವಾಗಲಿದೆ ಎಂದು<br />ಹೇಳಿದರು.</p>.<p>ಸೇತುವೆ ಪಕ್ಕದಲ್ಲಿರುವ ಜಮೀನಿನ ಮಾಲೀಕರು ರಸ್ತೆ ಮಾಡಲು ರಾಜಕೀಯವಾಗಿ ಅಡ್ಡಿಪಡಿಸುತ್ತಿದ್ದಾರೆ. ಈ ಸಮಸ್ಯೆ ಶೀಘ್ರವೇ ಪರಿಹಾರವಾಗಲಿದೆ. ಜನರಿಗೆ ಅವಶ್ಯವಾಗಿರುವ ಕೆಲಸ ಮಾಡುವಾಗ ವಿರೋಧ ಪಕ್ಷದವರು ರಾಜಕೀಯ ಕಾರಣಗಳಿಗಾಗಿ ಅಡ್ಡಿಪಡಿಸುವುದು ಸರಿಯಲ್ಲ ಎಂದುಹೇಳಿದರು.</p>.<p>ತಾಲ್ಲೂಕಿನಲ್ಲಿ ಎಲ್ಲಾ ಅಭಿವೃದ್ಧಿ ಕಾಮಗಾರಿಗಳು ತಮ್ಮ ಅವಧಿಯಲ್ಲಿಯೇ ನಡೆದಿದೆ ಎಂಬಂತೆ ಬಿಂಬಿಸುವ ವಿರೋಧ ಪಕ್ಷದವರು ಇಂತಹ ಜನೋಪಕಾರಿ ಕಾಮಗಾರಿಗಳನ್ನು ಏಕೆ ಮಾಡಿಸಲಿಲ್ಲ ಎಂದು ಪ್ರಶ್ನಿಸಿದರು.</p>.<p>ಈ ಮೇಲುಸೇತುವೆ ನಿರ್ಮಾಣವಾದರೆ ಚಿಕ್ಕತಿರುಪತಿ ಮತ್ತು ಹೊಸೂರಿಗೆ ಹೋಗಲು ಹಾಗೂ ತಮ್ಮ ಗ್ರಾಮದೇವತೆ ಹೊನ್ನಮ್ಮ ಚೆನ್ನಮ್ಮ ದೇವರಿಗೆ ಪೂಜೆ ಸಲ್ಲಿಸಲು ಅನುಕೂಲವಾಗುತ್ತದೆ ಎಂದು ಸ್ಥಳೀಯರು ಹರ್ಷ ವ್ಯಕ್ತಪಡಿಸಿದರು.</p>.<p>ಮುಖಂಡರಾದ ಬಾಬುರೆಡ್ಡಿ, ಶಂಕರೇಗೌಡ, ವಿನೋದ್ ರೆಡ್ಡಿ, ಕುಮಾರ ಕಂಠೀರವ, ಮುರಳಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>