ನಿವೃತ್ತ ದೈಹಿಕ ಶಿಕ್ಷಕ ಅಶ್ವಥನಾರಾಯಣ ಮಾತನಾಡಿ, ಗ್ರಾಮೀಣ ಭಾಗದಲ್ಲಿನ ಮಕ್ಕಳಿಗೆ ಹಾಕಿ ಮತ್ತು ಬ್ಯಾಸ್ಕೆಟ್ ಬಾಲ್, ಥ್ರೋಬಾಲ್ ಆಟಗಳ ಬಗ್ಗೆ ಮಾಹಿತಿ ಇರಲಿಲ್ಲ. ಗ್ರಾಮಾಂತರ ಪ್ರದೇಶಗಳಲ್ಲಿನ ಮಕ್ಕಳಿಗೂ ಎಲ್ಲ ಆಟಗಳ ಪರಿಚಯವಾಗಬೇಕು. ಪ್ರತಿಯೊಂದು ಕ್ರೀಡೆಯಲ್ಲಿನ ಮಹತ್ವ ಅವರು ಅರಿತುಕೊಳ್ಳಬೇಕು ಎನ್ನುವ ಉದ್ದೇಶದಿಂದ ಗ್ರಾಮಾಂತರ ಪ್ರದೇಶಗಳಲ್ಲಿ ಕ್ರೀಡಾಕೂಟಗಳನ್ನು ಆಯೋಜನೆ ಮಾಡಲಾಗುತ್ತದೆ ಎಂದರು.