ಮಜರಾಹೊಸಹಳ್ಳಿ, ಚಿಕ್ಕತುಮಕೂರು, ತಿಪ್ಪಾಪುರ ಮತ್ತು ವೀರಾಪುರ ಗ್ರಾಮಗಳ ನಡುವೆ ಇರುವ ಕೆರೆಯಲ್ಲಿ ತ್ಯಾಜ್ಯ ನೀರು ಹರಿದು ಬರುತ್ತಿರುವುದರಿಂದ ಕೆರೆ ಕಲುಷಿತಗೊಂಡಿದೆ. ಸೊಳ್ಳೆಗಳ ಆವಾಸ ಸ್ಥಾನವಾಗಿದೆ. ಇದಲ್ಲದೇ ಕೈಗಾರಿಕಾ ಪ್ರದೇಶದ ತ್ಯಾಜ್ಯ ನೀರು ಕೆರೆಗೆ ಸೇರುತ್ತಿದೆ. ವಾಸನೆ ಹೆಚ್ಚಾಗಿದ್ದು ಸುತ್ತಲಿನ ಗ್ರಾಮಸ್ಥರು ಡೆಂಗಿ, ಚಿಕುನ್ ಗುನ್ಯಾ ರೋಗಗಳಿಂದ ನರಳುವಂತಾಗಿದೆ. ಕೆರೆಯ ಕಲುಷಿತ ನೀರು ಕುಡಿದು ಜಾನುವಾರುಗಳು ಮೃತಪಟ್ಟಿವೆ. ಈ ಭಾಗದಲ್ಲಿನ ಬಾವಿ ನೀರು ಕುಡಿಯಲು ಯೋಗ್ಯ ಇಲ್ಲದಾಗಿದೆ ಎಂದು ತಿಳಿಸಿದರು.