<p><strong>ದೇವನಹಳ್ಳಿ:</strong> ನರೇಗಾ ಹೆಸರು ಮರುನಾಮಕರಣದ ವಿರುದ್ಧ ಕಾನೂನು ಹೋರಾಟ ನಡೆಸಲು ರಾಜ್ಯ ಸರ್ಕಾರ ಸಚಿವ ಸಂಪುಟದಲ್ಲಿ ತೀರ್ಮಾನಿಸಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್. ಮುನಿಯಪ್ಪ ಹೇಳಿದರು.</p>.<p>ಮಸೂದೆ ಹಿಂಪಡೆಯುವಂತೆ ಒತ್ತಾಯಿಸಿ 5 ಕಿ.ಮೀ ಪಾದಯಾತ್ರೆ ನಡೆಸಿ ಸುಮಾರು 10 ಸಾವಿರ ಜನರನ್ನು ಸೇರಿಸಲಾಗುವುದು. ಈ ಹೋರಾಟ ಬೆಂಗಳೂರು ಗ್ರಾಮಾಂತರ ಜಿಲ್ಲೆಯಿಂದ ಆರಂಭವಾಗಲಿದೆ ಎಂದು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>ಡಿಸೆಂಬರ್ 17ರಂದು ಕೇಂದ್ರ ಸರ್ಕಾರ ನರೇಗಾ ಹೆಸರನ್ನು ಬದಲಿಸಿದ್ದು, ರಾಷ್ಟ್ರಪಿತ ಮಹಾತ್ಮ ಗಾಂಧಿಯವರಿಗೆ ಮಾಡಿದ ಅವಮಾನ. ಬಡವರು, ಭೂಮಿರಹಿತರು ಹಾಗೂ ಕೂಲಿಕಾರ್ಮಿಕರಿಗೆ ಕೆಲಸ ನೀಡಿದ ಈ ಯೋಜನೆಯನ್ನು ದುರ್ಬಲಗೊಳಿಸಲಾಗುತ್ತಿದೆ ಎಂದು ಆರೋಪಿಸಿದರು.</p>.<p>ನರೇಗಾ ಮೂಲಕ ಕೆರೆ, ಬದುಗಳು, ಚೆಕ್ಡ್ಯಾಂಗಳು, ನೀರು ಹಿಂಗುವ ಗುಂಡಿಗಳ ನಿರ್ಮಾಣ ಸೇರಿದಂತೆ ಗ್ರಾಮೀಣ ಅಭಿವೃದ್ಧಿ ಕಾರ್ಯಗಳು ನಡೆದಿವೆ. ಆದರೆ, ಹೊಸ ಮಸೂದೆ ರಾಜ್ಯಗಳ ಮೇಲೆ ಶೇ 40ರಷ್ಟು ಹಣದ ಹೊರೆಯಾಗಿ, ಅನುದಾನ ಹಾಗೂ ಕಾಮಗಾರಿಗಳಿಗೆ ಅಡ್ಡಿಯಾಗಲಿದೆ ಎಂದರು.</p>.<p>ರಾಜ್ಯದಿಂದ ಕೇಂದ್ರಕ್ಕೆ ತೆರಿಗೆ ನೀಡುವ ಪ್ರಮಾಣ ಹೆಚ್ಚಿದ್ದರೂ, ವಿತರಣೆಯಲ್ಲಿ ಅನ್ಯಾಯವಾಗುತ್ತಿದೆ ಎಂದು ಹೇಳಿದರು.</p>.<p>ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಬಿ. ರಾಜಣ್ಣ, ತಾಲ್ಲೂಕು ಕಾಂಗ್ರೆಸ್ ಅಧ್ಯಕ್ಷ ಸಿ. ಜಗನ್ನಾಥ್, ದೇವನಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಸಿ. ಮಂಜುನಾಥ್ ಉಪಸ್ಥಿತರಿದ್ದರು.</p>.<p><strong>ಗಾಂಧೀಜಿಗೆ ಅವಮಾನ; ಜನಪರ ಯೋಜನೆ ದುರ್ಬಲ</strong></p><p> ನರೇಗಾ ಯೋಜನೆ ಹೆಸರನ್ನು ‘ವಿ.ಬಿ. ಜಿ ರಾಮ್ ಜೀ’ ಎಂದು ಮರುನಾಮಕರಣ ಮಾಡುವ ಕೇಂದ್ರ ಸರ್ಕಾರದ ಕ್ರಮಕ್ಕೆ ವಿರೋಧವಾಗಿ ಕಾಂಗ್ರೆಸ್ ಪಕ್ಷ ರಾಜ್ಯದಾದ್ಯಂತ ಹೋರಾಟ ಆರಂಭಿಸಲಿದೆ ಎಂದು ಎಐಸಿಸಿ ಕಾರ್ಯದರ್ಶಿ ಅಭಿಷೇಕ್ ದತ್ತ ತಿಳಿಸಿದರು. </p><p>ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಬಿಜೆಪಿಯ ಸಾಧನೆ ಎಂದರೆ ಕಾಂಗ್ರೆಸ್ ಜಾರಿಗೆ ತಂದ ಜನಪರ ಯೋಜನೆಗಳ ಹೆಸರನ್ನು ಬದಲಿಸುವುದಷ್ಟೇ. ರೈತರು ಕಾರ್ಮಿಕರ ಹಿತಕ್ಕೆ ರೂಪಿಸಿದ್ದ ನರೇಗಾ ಯೋಜನೆಯ ಸ್ವರೂಪ ಬದಲಿಸಿ ಗಾಂಧೀಜಿಯ ಹೆಸರಿಗೆ ಅವಮಾನ ಮಾಡಲಾಗಿದೆ. ಇದನ್ನು ಕಾಂಗ್ರೆಸ್ ಸಹಿಸುವುದಿಲ್ಲ ಎಂದು ಹೇಳಿದರು.</p>.<div><blockquote>ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡಿ ಜನರನ್ನು ಮೋಸಗೊಳಿಸಲಾಗುತ್ತಿದೆ. ರಾಮನ ಹೆಸರನ್ನು ಬಳಸಿಕೊಂಡು ಜನಪರ ಯೋಜನೆಗಳನ್ನು ದುರ್ಬಲಗೊಳಿಸುವುದು ಕ್ಷಮಾರ್ಹವಲ್ಲ. </blockquote><span class="attribution">–ಅಭಿಷೇಕ್ ದತ್ತ, ಎಐಸಿಸಿ ಕಾರ್ಯದರ್ಶಿ</span></div>.<div><blockquote>10 ಸಾವಿರ ಜನರೊಂದಿಗೆ 5 ಕಿ.ಮೀ ಪಾದಯಾತ್ರೆ ನಡೆಯಲಿದ್ದು ಮಸೂದೆ ಹಿಂಪಡೆಯುವವರೆಗೂ ಹೋರಾಟ ನಿಲ್ಲದು; ಗಾಂಧೀಜಿಯ ಹೆಸರಿಗೆ ಅವಮಾನ ಸಹಿಸುವುದಿಲ್ಲ. </blockquote><span class="attribution">–ಕೆ.ಎಚ್. ಮುನಿಯಪ್ಪ ಸಚಿವ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೇವನಹಳ್ಳಿ:</strong> ನರೇಗಾ ಹೆಸರು ಮರುನಾಮಕರಣದ ವಿರುದ್ಧ ಕಾನೂನು ಹೋರಾಟ ನಡೆಸಲು ರಾಜ್ಯ ಸರ್ಕಾರ ಸಚಿವ ಸಂಪುಟದಲ್ಲಿ ತೀರ್ಮಾನಿಸಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್. ಮುನಿಯಪ್ಪ ಹೇಳಿದರು.</p>.<p>ಮಸೂದೆ ಹಿಂಪಡೆಯುವಂತೆ ಒತ್ತಾಯಿಸಿ 5 ಕಿ.ಮೀ ಪಾದಯಾತ್ರೆ ನಡೆಸಿ ಸುಮಾರು 10 ಸಾವಿರ ಜನರನ್ನು ಸೇರಿಸಲಾಗುವುದು. ಈ ಹೋರಾಟ ಬೆಂಗಳೂರು ಗ್ರಾಮಾಂತರ ಜಿಲ್ಲೆಯಿಂದ ಆರಂಭವಾಗಲಿದೆ ಎಂದು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>ಡಿಸೆಂಬರ್ 17ರಂದು ಕೇಂದ್ರ ಸರ್ಕಾರ ನರೇಗಾ ಹೆಸರನ್ನು ಬದಲಿಸಿದ್ದು, ರಾಷ್ಟ್ರಪಿತ ಮಹಾತ್ಮ ಗಾಂಧಿಯವರಿಗೆ ಮಾಡಿದ ಅವಮಾನ. ಬಡವರು, ಭೂಮಿರಹಿತರು ಹಾಗೂ ಕೂಲಿಕಾರ್ಮಿಕರಿಗೆ ಕೆಲಸ ನೀಡಿದ ಈ ಯೋಜನೆಯನ್ನು ದುರ್ಬಲಗೊಳಿಸಲಾಗುತ್ತಿದೆ ಎಂದು ಆರೋಪಿಸಿದರು.</p>.<p>ನರೇಗಾ ಮೂಲಕ ಕೆರೆ, ಬದುಗಳು, ಚೆಕ್ಡ್ಯಾಂಗಳು, ನೀರು ಹಿಂಗುವ ಗುಂಡಿಗಳ ನಿರ್ಮಾಣ ಸೇರಿದಂತೆ ಗ್ರಾಮೀಣ ಅಭಿವೃದ್ಧಿ ಕಾರ್ಯಗಳು ನಡೆದಿವೆ. ಆದರೆ, ಹೊಸ ಮಸೂದೆ ರಾಜ್ಯಗಳ ಮೇಲೆ ಶೇ 40ರಷ್ಟು ಹಣದ ಹೊರೆಯಾಗಿ, ಅನುದಾನ ಹಾಗೂ ಕಾಮಗಾರಿಗಳಿಗೆ ಅಡ್ಡಿಯಾಗಲಿದೆ ಎಂದರು.</p>.<p>ರಾಜ್ಯದಿಂದ ಕೇಂದ್ರಕ್ಕೆ ತೆರಿಗೆ ನೀಡುವ ಪ್ರಮಾಣ ಹೆಚ್ಚಿದ್ದರೂ, ವಿತರಣೆಯಲ್ಲಿ ಅನ್ಯಾಯವಾಗುತ್ತಿದೆ ಎಂದು ಹೇಳಿದರು.</p>.<p>ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಬಿ. ರಾಜಣ್ಣ, ತಾಲ್ಲೂಕು ಕಾಂಗ್ರೆಸ್ ಅಧ್ಯಕ್ಷ ಸಿ. ಜಗನ್ನಾಥ್, ದೇವನಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಸಿ. ಮಂಜುನಾಥ್ ಉಪಸ್ಥಿತರಿದ್ದರು.</p>.<p><strong>ಗಾಂಧೀಜಿಗೆ ಅವಮಾನ; ಜನಪರ ಯೋಜನೆ ದುರ್ಬಲ</strong></p><p> ನರೇಗಾ ಯೋಜನೆ ಹೆಸರನ್ನು ‘ವಿ.ಬಿ. ಜಿ ರಾಮ್ ಜೀ’ ಎಂದು ಮರುನಾಮಕರಣ ಮಾಡುವ ಕೇಂದ್ರ ಸರ್ಕಾರದ ಕ್ರಮಕ್ಕೆ ವಿರೋಧವಾಗಿ ಕಾಂಗ್ರೆಸ್ ಪಕ್ಷ ರಾಜ್ಯದಾದ್ಯಂತ ಹೋರಾಟ ಆರಂಭಿಸಲಿದೆ ಎಂದು ಎಐಸಿಸಿ ಕಾರ್ಯದರ್ಶಿ ಅಭಿಷೇಕ್ ದತ್ತ ತಿಳಿಸಿದರು. </p><p>ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಬಿಜೆಪಿಯ ಸಾಧನೆ ಎಂದರೆ ಕಾಂಗ್ರೆಸ್ ಜಾರಿಗೆ ತಂದ ಜನಪರ ಯೋಜನೆಗಳ ಹೆಸರನ್ನು ಬದಲಿಸುವುದಷ್ಟೇ. ರೈತರು ಕಾರ್ಮಿಕರ ಹಿತಕ್ಕೆ ರೂಪಿಸಿದ್ದ ನರೇಗಾ ಯೋಜನೆಯ ಸ್ವರೂಪ ಬದಲಿಸಿ ಗಾಂಧೀಜಿಯ ಹೆಸರಿಗೆ ಅವಮಾನ ಮಾಡಲಾಗಿದೆ. ಇದನ್ನು ಕಾಂಗ್ರೆಸ್ ಸಹಿಸುವುದಿಲ್ಲ ಎಂದು ಹೇಳಿದರು.</p>.<div><blockquote>ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡಿ ಜನರನ್ನು ಮೋಸಗೊಳಿಸಲಾಗುತ್ತಿದೆ. ರಾಮನ ಹೆಸರನ್ನು ಬಳಸಿಕೊಂಡು ಜನಪರ ಯೋಜನೆಗಳನ್ನು ದುರ್ಬಲಗೊಳಿಸುವುದು ಕ್ಷಮಾರ್ಹವಲ್ಲ. </blockquote><span class="attribution">–ಅಭಿಷೇಕ್ ದತ್ತ, ಎಐಸಿಸಿ ಕಾರ್ಯದರ್ಶಿ</span></div>.<div><blockquote>10 ಸಾವಿರ ಜನರೊಂದಿಗೆ 5 ಕಿ.ಮೀ ಪಾದಯಾತ್ರೆ ನಡೆಯಲಿದ್ದು ಮಸೂದೆ ಹಿಂಪಡೆಯುವವರೆಗೂ ಹೋರಾಟ ನಿಲ್ಲದು; ಗಾಂಧೀಜಿಯ ಹೆಸರಿಗೆ ಅವಮಾನ ಸಹಿಸುವುದಿಲ್ಲ. </blockquote><span class="attribution">–ಕೆ.ಎಚ್. ಮುನಿಯಪ್ಪ ಸಚಿವ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>