<p><strong>ಉಯ್ಯಂಬಳ್ಳಿ(ಕನಕಪುರ):</strong> ಮನುಷ್ಯರಲ್ಲಿ ಶಿಸ್ತು, ಸಂಯಮ, ಜಾಗೃತಿ, ಸಂಸ್ಕಾರ ಮೂಡಿಸುವಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಪ್ರಮುಖ ಪಾತ್ರ ವಹಿಸುತ್ತದೆ. ಅಲ್ಲದೆ, ಗ್ರಾಮಗಳ ಅಭಿವೃದ್ಧಿಗೆ ಪೂರಕವಾಗಿದೆ ಎಂದು ಬೆಂಗಳೂರು ಕೆಎಸ್ಐಟಿ ಪ್ರಾಂಶುಪಾಲ ಡಾ.ಟಿ.ವಿ.ಗೋವಿಂದರಾಜು ತಿಳಿಸಿದರು.</p>.<p>ಇಲ್ಲಿನ ಉಯ್ಯಂಬಳ್ಳಿ ಹೋಬಳಿ ಐ.ಗೊಲ್ಲಹಳ್ಳಿ ಗ್ರಾಮ ಸ್ವರಾಜ್ಯ ಪ್ರೌಢಶಾಲೆಯಲ್ಲಿ ರಘುವನಹಳ್ಳಿ ಕೆ.ಎಸ್ ತಾಂತ್ರಿಕ ಮಹಾವಿದ್ಯಾಲಯದ ಎನ್ಎಸ್ಎಸ್ ವಿದ್ಯಾರ್ಥಿಗಳ ವಿಶೇಷ ವಾರ್ಷಿಕ ಶಿಬಿರದಲ್ಲಿ 'ಗ್ರಾಮಗಳ ಅಭಿವೃದ್ಧಿ ಕಡೆಗೆ ಯುವಶಕ್ತಿ ನಡಿಗೆ' ಎಂಬ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ರಾಷ್ಟ್ರೀಯ ಸೇವಾ ಯೋಜನೆ ಗ್ರಾಮಗಳ ಅಭಿವೃದ್ಧಿ ಕಡೆಗೆ ಹೆಚ್ಚು ಒಲವು ನೀಡುತ್ತದೆ. ಹಳ್ಳಿ ಜನರಿಗೆ ಸ್ವಚ್ಛತೆ ಪರಿಕಲ್ಪನೆ ಮೂಡಿಸುತ್ತದೆ. ಹೊಂದಾಣಿಕೆ ಮನೋಭಾವ, ಭಾಷಣ ಕಲೆ, ನಿರೂಪಣೆ, ಸಮಯ ಪಾಲನೆ ರೂಪಿಸುತ್ತದೆ ಎಂದರು.</p>.<p>ಶಾಲೆ ಮುಖ್ಯ ಶಿಕ್ಷಕ ಅಂಕಮಾದೇಗೌಡ ಮಾತನಾಡಿ, ವಿದ್ಯಾರ್ಥಿಗಳಲ್ಲಿ ರಾಷ್ಟ್ರೀಯ ಭಾವೈಕ್ಯ, ಸೇವಾ ಮನೋಭಾವ ಬೆಳೆಸುವಲ್ಲಿ ಎನ್ಎಸ್ಎಸ್ ಪ್ರಮುಖ ಪಾತ್ರ ರವಹಿಸುತ್ತದೆ. ಈ ಯೋಜನೆಯು ಯುವಕ-ಯುವತಿಯರಲ್ಲಿ ನಾಯಕತ್ವ ಗುಣ ಬೆಳೆಸುತ್ತದೆ. ಸಾಮಾಜಿಕ ಜೀವನದ ಪರಿಚಯ ಮಾಡಿಕೊಡುತ್ತದೆ ಎಂದರು.</p>.<p>ಉದ್ಯಮಿ ಎಲ್.ರಾಜು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ತಾಲ್ಲೂಕು ವಿಸ್ತರಣಾಧಿಕಾರಿ ಮಹೇಶ್.ಎಸ್.ಎಲ್, ಶಾಂತಲಾ ಚಾರಿಟಬಲ್ ಟ್ರಸ್ಟ್ ಸಂಸ್ಥಾಪಕ ಕಾರ್ಯದರ್ಶಿ ಕವಿತರಾವ್, ಕಮ್ಮವಾರಿ ಸಂಘದ ಖಜಾಂಚಿ ಡಿ.ರುಕ್ಮಾಂಗದ ಮಾತನಾಡಿದರು.</p>.<p>ಶಾಂತಲಾ ತಂಡದವರು ಮತ್ತು ಶಿಬಿರದ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು. ಶಂಭುಲಿಂಗೇಶ್ವರ ವಿದ್ಯಾಸಂಸ್ಥೆ ಕೋಶಾಧ್ಯಕ್ಷ ಕರಿಯಪ್ಪ, ಎನ್ಎಸ್ಎಸ್ ಅಧಿಕಾರಿ ಚೌಡಪ್ಪ ಎಂ.ಆರ್, ತಾಲ್ಲೂಕು ಪಂಚಾಯಿತಿ ಸದಸ್ಯೆ ಮಂಗಳಮ್ಮ ಶಿವರಾಜು, ಶಾಲೆ ಶಿಕ್ಷಕ ಹಾಗೂ ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಯ್ಯಂಬಳ್ಳಿ(ಕನಕಪುರ):</strong> ಮನುಷ್ಯರಲ್ಲಿ ಶಿಸ್ತು, ಸಂಯಮ, ಜಾಗೃತಿ, ಸಂಸ್ಕಾರ ಮೂಡಿಸುವಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಪ್ರಮುಖ ಪಾತ್ರ ವಹಿಸುತ್ತದೆ. ಅಲ್ಲದೆ, ಗ್ರಾಮಗಳ ಅಭಿವೃದ್ಧಿಗೆ ಪೂರಕವಾಗಿದೆ ಎಂದು ಬೆಂಗಳೂರು ಕೆಎಸ್ಐಟಿ ಪ್ರಾಂಶುಪಾಲ ಡಾ.ಟಿ.ವಿ.ಗೋವಿಂದರಾಜು ತಿಳಿಸಿದರು.</p>.<p>ಇಲ್ಲಿನ ಉಯ್ಯಂಬಳ್ಳಿ ಹೋಬಳಿ ಐ.ಗೊಲ್ಲಹಳ್ಳಿ ಗ್ರಾಮ ಸ್ವರಾಜ್ಯ ಪ್ರೌಢಶಾಲೆಯಲ್ಲಿ ರಘುವನಹಳ್ಳಿ ಕೆ.ಎಸ್ ತಾಂತ್ರಿಕ ಮಹಾವಿದ್ಯಾಲಯದ ಎನ್ಎಸ್ಎಸ್ ವಿದ್ಯಾರ್ಥಿಗಳ ವಿಶೇಷ ವಾರ್ಷಿಕ ಶಿಬಿರದಲ್ಲಿ 'ಗ್ರಾಮಗಳ ಅಭಿವೃದ್ಧಿ ಕಡೆಗೆ ಯುವಶಕ್ತಿ ನಡಿಗೆ' ಎಂಬ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ರಾಷ್ಟ್ರೀಯ ಸೇವಾ ಯೋಜನೆ ಗ್ರಾಮಗಳ ಅಭಿವೃದ್ಧಿ ಕಡೆಗೆ ಹೆಚ್ಚು ಒಲವು ನೀಡುತ್ತದೆ. ಹಳ್ಳಿ ಜನರಿಗೆ ಸ್ವಚ್ಛತೆ ಪರಿಕಲ್ಪನೆ ಮೂಡಿಸುತ್ತದೆ. ಹೊಂದಾಣಿಕೆ ಮನೋಭಾವ, ಭಾಷಣ ಕಲೆ, ನಿರೂಪಣೆ, ಸಮಯ ಪಾಲನೆ ರೂಪಿಸುತ್ತದೆ ಎಂದರು.</p>.<p>ಶಾಲೆ ಮುಖ್ಯ ಶಿಕ್ಷಕ ಅಂಕಮಾದೇಗೌಡ ಮಾತನಾಡಿ, ವಿದ್ಯಾರ್ಥಿಗಳಲ್ಲಿ ರಾಷ್ಟ್ರೀಯ ಭಾವೈಕ್ಯ, ಸೇವಾ ಮನೋಭಾವ ಬೆಳೆಸುವಲ್ಲಿ ಎನ್ಎಸ್ಎಸ್ ಪ್ರಮುಖ ಪಾತ್ರ ರವಹಿಸುತ್ತದೆ. ಈ ಯೋಜನೆಯು ಯುವಕ-ಯುವತಿಯರಲ್ಲಿ ನಾಯಕತ್ವ ಗುಣ ಬೆಳೆಸುತ್ತದೆ. ಸಾಮಾಜಿಕ ಜೀವನದ ಪರಿಚಯ ಮಾಡಿಕೊಡುತ್ತದೆ ಎಂದರು.</p>.<p>ಉದ್ಯಮಿ ಎಲ್.ರಾಜು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ತಾಲ್ಲೂಕು ವಿಸ್ತರಣಾಧಿಕಾರಿ ಮಹೇಶ್.ಎಸ್.ಎಲ್, ಶಾಂತಲಾ ಚಾರಿಟಬಲ್ ಟ್ರಸ್ಟ್ ಸಂಸ್ಥಾಪಕ ಕಾರ್ಯದರ್ಶಿ ಕವಿತರಾವ್, ಕಮ್ಮವಾರಿ ಸಂಘದ ಖಜಾಂಚಿ ಡಿ.ರುಕ್ಮಾಂಗದ ಮಾತನಾಡಿದರು.</p>.<p>ಶಾಂತಲಾ ತಂಡದವರು ಮತ್ತು ಶಿಬಿರದ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು. ಶಂಭುಲಿಂಗೇಶ್ವರ ವಿದ್ಯಾಸಂಸ್ಥೆ ಕೋಶಾಧ್ಯಕ್ಷ ಕರಿಯಪ್ಪ, ಎನ್ಎಸ್ಎಸ್ ಅಧಿಕಾರಿ ಚೌಡಪ್ಪ ಎಂ.ಆರ್, ತಾಲ್ಲೂಕು ಪಂಚಾಯಿತಿ ಸದಸ್ಯೆ ಮಂಗಳಮ್ಮ ಶಿವರಾಜು, ಶಾಲೆ ಶಿಕ್ಷಕ ಹಾಗೂ ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>