ಯುವ ಮುಖಂಡ ಪ್ರಸನ್ನಕುಮಾರ್ ಮಾತನಾಡಿ, ಹಳ್ಳಿಗಳಲ್ಲಿ ನರೇಗಾ ಯೋಜನೆಯಡಿಯಲ್ಲಿ ಸಸಿ ನೆಡಲು ಅವಕಾಶಗಳಿವೆ. ಸರ್ಕಾರದ ಎಲ್ಲ ಯೋಜನೆಗಳಲ್ಲೂ ಅವಕಾಶಗಳಿವೆ. ಅವುಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಸಸಿಗಳನ್ನು ನೆಡುವುದಷ್ಟೆ ಅಲ್ಲದೇ ಕೆರೆ ಕುಂಟೆಗಳಲ್ಲಿನ ಹೂಳು ತೆಗೆದು ಮಳೆಯ ನೀರನ್ನು ಸಂಗ್ರಹಿಸಿ ಅಂತರ್ಜಲದ ಮಟ್ಟವನ್ನು ಏರಿಕೆ ಮಾಡಬೇಕು. ಇದರಿಂದ ಭವಿಷ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಯಲಿದೆ ಎಂದರು. ಯುವ ಮುಖಂಡ ಪ್ರದೀಪ್ ಇದ್ದರು.