ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಪಟ್ಟಣದ ಅಭಿವೃದ್ಧಿಗೆ ಶ್ರಮಿಸಿ’

Last Updated 20 ಸೆಪ್ಟೆಂಬರ್ 2019, 12:59 IST
ಅಕ್ಷರ ಗಾತ್ರ

ವಿಜಯಪುರ: ಪಟ್ಟಣದ ಸರ್ವತೋಮುಖ ಅಭಿವೃದ್ಧಿ ವಿಚಾರದಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಸಹಿಸುವುದಿಲ್ಲ ಎಂದು ಮುಖ್ಯಾಧಿಕಾರಿ ಎ.ಬಿ.ಪ್ರದೀಪ್‌ಕುಮಾರ್ ಎಚ್ಚರಿಕೆ ನೀಡಿದರು.

ಇಲ್ಲಿನ ಪುರಸಭೆ ಸಭಾಂಗಣದಲ್ಲಿ ಸಿಬ್ಬಂದಿಯೊಂದಿಗೆ ಸಭೆ ನಡೆಸಿದ ಅವರು, ವಿವಿಧ ಕೆಲಸ ಕಾರ್ಯಗಳಿಗಾಗಿ ಬರುವ ಸಾರ್ವಜನಿಕರು ವಿನಾಕಾರಣ ತೊಂದರೆಗೆ ಒಳಗಾಗುತ್ತಿದ್ದಾರೆ. ಜನರು ಪುರಸಭೆ ಮೇಲೆ ಇಟ್ಟಿರುವ ವಿಶ್ವಾಸ, ನಂಬಿಕೆ ಹೆಚ್ಚಿಸಬೇಕು ಎಂದು ತಾಕೀತು ಮಾಡಿದರು.

ಲಭ್ಯವಿರುವ ನೀರು ಸಮರ್ಪಕವಾಗಿ ಜನರಿಗೆ ಉಪಯೋಗವಾಗಬೇಕು. ಯಾವುದೇ ಸಮಸ್ಯೆಗಳಿದ್ದರೆ ಮುಕ್ತವಾಗಿ ಚರ್ಚೆ ನಡೆಸಿ ಪಾರದರ್ಶಕ ಆಡಳಿತಕ್ಕೆ ಸಹಕಾರ ನೀಡಬೇಕೆಂದು ಸೂಚನೆ ನೀಡಿದರು.

ಪುರಸಭಾ ವ್ಯವಸ್ಥಾಪಕ ಆಂಜನೇಯಲು, ಎಂಜಿನಿಯರ್ ಸುಪ್ರಿಯಾರಾಣಿ, ಕಂದಾಯ ಅಧಿಕಾರಿ ಜಯಕಿರಣ್, ಪರಿಸರ ಎಂಜಿನಿಯರ್‌ ಮಹೇಶ್‌ಕುಮಾರ್, ಅಜ್ಮತ್, ಗೋಪಾಲ್, ಲಕ್ಷ್ಮೀನಾರಾಯಣ, ನಾರಾಯಣಸ್ವಾಮಿ, ಸರಸ್ವತಮ್ಮ, ಪೂರ್ಣಿಮಾ, ಮಮತ, ಜ್ಯೋತಿ, ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT