ನಂಜಾವಧೂತ ಸ್ವಾಮೀಜಿ ಮಾತನಾಡಿ, ಸುಮಾರು 251 ವರ್ಷಗಳ ಹಿಂದೆ ಸ್ಥಾಪನೆಗೊಂಡ ಗುರಪ್ಪನಮಠ ಹಾಗೂ ಶಿರಾ ಪಟ್ಟನಾಯಕನಹಳ್ಳಿಯ ಗುರುಗುಂಡ ಬ್ರಹ್ಮೇಶ್ವರ ಸ್ವಾಮಿಗಳ ಮಠ, ಎರಡೂ ಕೂಡ ಅವಧೂತ ಪರಂಪರೆಯಲ್ಲಿ ಬಂದಿದ್ದು, ಎರಡೂ ಮಠಗಳು ಜನರಲ್ಲಿ ಸಾಮಾಜಿಕವಾಗಿ ಹಾಗೂ ಆಧ್ಯಾತ್ಮಿಕವಾಗಿ ಜ್ಞಾನವಂತರನ್ನು ಮಾಡುವತ್ತ ಶ್ರಮಿಸುತ್ತಿವೆ ಎಂದು ಹೇಳಿದರು.