<p><strong>ಹೊಸಕೋಟೆ</strong>: ಸಂಚಾರ ದಟ್ಟಣೆ ನಿಯಂತ್ರಿಸಲು ಸಂಚಾರ ಠಾಣೆ ಪೊಲೀಸರು ನಗರದ ಪ್ರಮುಖ ರಸ್ತೆಗಳಲ್ಲಿ ಸೋಮವಾರದಿಂದಲೇ ಪ್ರಾಯೋಗಿಕವಾಗಿ ಏಕಮುಖ ಸಂಚಾರ ಜಾರಿಗೊಳಿಸಲಾಗಿದೆ. </p>.<p>ಹೊಸಕೋಟೆ ನಗರದ ಕೆಇಬಿ ವೃತ್ತದಲ್ಲಿ ಏಕಮುಖ ಸಂಚಾರಕ್ಕೆ ಚಾಲನೆ ನೀಡಿದ ಡಿವೈಎಸ್ಪಿ ಮಲ್ಲೇಶ್, ವಾಹನ ದಟ್ಟಣೆ ನಿಯಂತ್ರಿಸಲು ಪ್ರಾಯೋಗಿಕವಾಗಿ ಏಕಮುಖ ಸಂಚಾರಕ್ಕೆ ಚಾಲನೆ ನೀಡಲಾಗಿದೆ. ನಿಯಮ ಉಲ್ಲಂಘಿಸಿದರೆ ದಂಡ ವಿಧಿಸಲಾಗುವುದು. ಸಾರ್ವಜನಿಕರು, ವಾಹನ ಸವಾರರು ಸಹಕಾರ ನೀಡುವಂತೆ ಮನವಿ ಮಾಡಿದರು.</p>.<p>ರಾಜಧಾನಿಗೆ ಹತ್ತಿರವಿರುವ ಕಾರಣ ಜನಸಂಖ್ಯೆ, ವಾಹನಗಳ ಸಂಚಾರ ಬಡಾವಣೆ, ಅಪಾರ್ಟ್ಮೆಂಟ್ಗಳ ಸಂಖ್ಯೆ ಹೆಚ್ಚಾಗುತ್ತಿದೆ. ಹಾಗಾಗಿ ಸಂಚಾರ ದಟ್ಟನೆ ಹೆಚ್ಚಾಗಿದೆ. ಸುಗಮ ಸಂಚಾರ ವ್ಯವಸ್ಥೆಗೆ ಏಕಮುಖ ಸಂಚಾರ ಅನಿವಾರ್ಯವಾಗಿತ್ತು ಎಂದರು. </p>.<p><strong>ಲೈಸನ್ಸ್ ರದ್ದು : </strong>ಪಾದಚಾರಿ ಮಾರ್ಗ ಅತಿಕ್ರಮಿಸುವ ಅಂಗಡಿ, ಮುಗ್ಗಟ್ಟುಗಳ ಮಾಲೀಕರ ವಿರುದ್ಧ ಕ್ರಮ ಜರುಗಿಸಿ ಅಂಗಡಿ ಪರವಾನಿಗೆ ರದ್ದು ಮಾಡಲು ನಗರಸಭೆಗೆ ಸೂಚನೆ ನೀಡಲಾಗುತ್ತದೆ ಎಂದರು.</p>.<p>ನಗರದಲ್ಲಿ ಇತ್ತೀಚೆಗೆ ಅಪ್ರಾಪ್ತರು ದ್ವಿಚಕ್ರವಾಹನ ಚಲಾಯಿಸುತ್ತಿರುವುದು, ತ್ರಿಬಲ್ ರೈಡಿಂಗ್ ಮತ್ತು ಚಾಲನೆ ವೇಳೆ ಮೊಬೈಲ್ ಬಳಕೆ ಕಂಡುಬರುತ್ತಿದೆ. ಇದರಿಂದ ಅಪಘಾತಗಳು ಸಂಖ್ಯೆ ಹೆಚ್ಚಾಗುತ್ತಿದವೆ. ಇದು ಹೀಗೆ ಮುಂದುವರೆದರೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.</p>.<p>ಸಂಚಾರ ಠಾಣೆಯ ಸಿಪಿಐ ಶ್ರೀಕಂಠಯ್ಯ, ನಗರ ಠಾಣೆಯ ಸಿಪಿಐ ಗೋವಿಂದ್ ಹಾಗೂ ಸಿಬ್ಬಂದಿ ಇದ್ದರು.</p>.<p><strong>ಎಲ್ಲೆಲ್ಲಿ ಏಕಮುಖ ಸಂಚಾರ? </strong></p><p> * ಕೆಇಬಿ ವೃತ್ತದ ಎರಡು ಬದಿಯ ಸರ್ವೀಸ್ ರಸ್ತೆ </p><p>* ಟಿಜಿ ಬಡಾವಣೆಯ ಚಿಕ್ಕೇಗೌಡ ಕಲ್ಯಾಣ ಮಂಟಪದ ರಸ್ತೆ</p><p> * ಗಂಗಮ್ಮ ಗುಡಿ ರಸ್ತೆ </p><p>* ಚಿಂತಾಮಣಿ ಮತ್ತು ಮಾಲೂರು ರಸ್ತೆಯ ಸರ್ಕಾರಿ ಆಸ್ಪತ್ರೆ ಸರ್ವಿಸ್ ರಸ್ತೆ </p><p>* ಸಾಧನ ಥಿಯೇಟರ್ ರಸ್ತೆ </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಕೋಟೆ</strong>: ಸಂಚಾರ ದಟ್ಟಣೆ ನಿಯಂತ್ರಿಸಲು ಸಂಚಾರ ಠಾಣೆ ಪೊಲೀಸರು ನಗರದ ಪ್ರಮುಖ ರಸ್ತೆಗಳಲ್ಲಿ ಸೋಮವಾರದಿಂದಲೇ ಪ್ರಾಯೋಗಿಕವಾಗಿ ಏಕಮುಖ ಸಂಚಾರ ಜಾರಿಗೊಳಿಸಲಾಗಿದೆ. </p>.<p>ಹೊಸಕೋಟೆ ನಗರದ ಕೆಇಬಿ ವೃತ್ತದಲ್ಲಿ ಏಕಮುಖ ಸಂಚಾರಕ್ಕೆ ಚಾಲನೆ ನೀಡಿದ ಡಿವೈಎಸ್ಪಿ ಮಲ್ಲೇಶ್, ವಾಹನ ದಟ್ಟಣೆ ನಿಯಂತ್ರಿಸಲು ಪ್ರಾಯೋಗಿಕವಾಗಿ ಏಕಮುಖ ಸಂಚಾರಕ್ಕೆ ಚಾಲನೆ ನೀಡಲಾಗಿದೆ. ನಿಯಮ ಉಲ್ಲಂಘಿಸಿದರೆ ದಂಡ ವಿಧಿಸಲಾಗುವುದು. ಸಾರ್ವಜನಿಕರು, ವಾಹನ ಸವಾರರು ಸಹಕಾರ ನೀಡುವಂತೆ ಮನವಿ ಮಾಡಿದರು.</p>.<p>ರಾಜಧಾನಿಗೆ ಹತ್ತಿರವಿರುವ ಕಾರಣ ಜನಸಂಖ್ಯೆ, ವಾಹನಗಳ ಸಂಚಾರ ಬಡಾವಣೆ, ಅಪಾರ್ಟ್ಮೆಂಟ್ಗಳ ಸಂಖ್ಯೆ ಹೆಚ್ಚಾಗುತ್ತಿದೆ. ಹಾಗಾಗಿ ಸಂಚಾರ ದಟ್ಟನೆ ಹೆಚ್ಚಾಗಿದೆ. ಸುಗಮ ಸಂಚಾರ ವ್ಯವಸ್ಥೆಗೆ ಏಕಮುಖ ಸಂಚಾರ ಅನಿವಾರ್ಯವಾಗಿತ್ತು ಎಂದರು. </p>.<p><strong>ಲೈಸನ್ಸ್ ರದ್ದು : </strong>ಪಾದಚಾರಿ ಮಾರ್ಗ ಅತಿಕ್ರಮಿಸುವ ಅಂಗಡಿ, ಮುಗ್ಗಟ್ಟುಗಳ ಮಾಲೀಕರ ವಿರುದ್ಧ ಕ್ರಮ ಜರುಗಿಸಿ ಅಂಗಡಿ ಪರವಾನಿಗೆ ರದ್ದು ಮಾಡಲು ನಗರಸಭೆಗೆ ಸೂಚನೆ ನೀಡಲಾಗುತ್ತದೆ ಎಂದರು.</p>.<p>ನಗರದಲ್ಲಿ ಇತ್ತೀಚೆಗೆ ಅಪ್ರಾಪ್ತರು ದ್ವಿಚಕ್ರವಾಹನ ಚಲಾಯಿಸುತ್ತಿರುವುದು, ತ್ರಿಬಲ್ ರೈಡಿಂಗ್ ಮತ್ತು ಚಾಲನೆ ವೇಳೆ ಮೊಬೈಲ್ ಬಳಕೆ ಕಂಡುಬರುತ್ತಿದೆ. ಇದರಿಂದ ಅಪಘಾತಗಳು ಸಂಖ್ಯೆ ಹೆಚ್ಚಾಗುತ್ತಿದವೆ. ಇದು ಹೀಗೆ ಮುಂದುವರೆದರೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.</p>.<p>ಸಂಚಾರ ಠಾಣೆಯ ಸಿಪಿಐ ಶ್ರೀಕಂಠಯ್ಯ, ನಗರ ಠಾಣೆಯ ಸಿಪಿಐ ಗೋವಿಂದ್ ಹಾಗೂ ಸಿಬ್ಬಂದಿ ಇದ್ದರು.</p>.<p><strong>ಎಲ್ಲೆಲ್ಲಿ ಏಕಮುಖ ಸಂಚಾರ? </strong></p><p> * ಕೆಇಬಿ ವೃತ್ತದ ಎರಡು ಬದಿಯ ಸರ್ವೀಸ್ ರಸ್ತೆ </p><p>* ಟಿಜಿ ಬಡಾವಣೆಯ ಚಿಕ್ಕೇಗೌಡ ಕಲ್ಯಾಣ ಮಂಟಪದ ರಸ್ತೆ</p><p> * ಗಂಗಮ್ಮ ಗುಡಿ ರಸ್ತೆ </p><p>* ಚಿಂತಾಮಣಿ ಮತ್ತು ಮಾಲೂರು ರಸ್ತೆಯ ಸರ್ಕಾರಿ ಆಸ್ಪತ್ರೆ ಸರ್ವಿಸ್ ರಸ್ತೆ </p><p>* ಸಾಧನ ಥಿಯೇಟರ್ ರಸ್ತೆ </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>