ನಗರದ ಪ್ರವಾಸಿ ಮಂದಿರದಲ್ಲಿ ನಡೆದ ದಲಿತ ಸಂಘಟನೆ ಮುಖಂಡರ ಸಭೆಯಲ್ಲಿ ಮಾತನಾಡಿದ ಜಿ.ಲಕ್ಷ್ಮೀಪತಿ, ಮಾ.ಮುನಿರಾಜು, ಆದಿತ್ಯ ನಾಗೇಶ್, ಡಿ.ವಿ.ಅಶ್ವತ್ಥಪ್ಪ, ಬಾಲಕೃಷ್ಣ, ‘ಒಂದೇ ವೃತ್ತಕ್ಕೆ ಇಬ್ಬರು ವ್ಯಕ್ತಿಗಳ ಹೆಸರು ಅಥವಾ ಪ್ರತಿಮೆಗಳನ್ನು ಸ್ಥಾಪನೆ ಮಾಡಲು ಅನುಮತಿ ನೀಡಿರುವ ಕ್ರಮವೇ ಅವೈಜ್ಞಾನಿಕವಾಗಿದೆ. ಪ್ರವಾಸಿ ಮಂದಿರದ ಇಡೀ ವೃತ್ತಕ್ಕೆ ಡಾ.ಅಂಬೇಡ್ಕರ್ ಹೆಸರನ್ನು ನಾಮಕರಣ ಮಾಡಿರುವಾಗ ಇದೇ ವೃತ್ತದ ಅಂಚಿಗೆ ಕೆಂಪೇಗೌಡರ
ಪ್ರತಿಮೆ ಸ್ಥಾಪನೆ ಮಾಡಲು ಹೊರಟಿರುವುದು ಖಂಡನೀಯ. ಇದಕ್ಕೆ ನಮ್ಮ ವಿರೋಧ ಇದೆ. ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪ್ರಗತಿಯಲ್ಲಿ ಇರುವುದರಿಂದ ವೃತ್ತದಲ್ಲಿ ನಾಮಫಲಕ ಅಳವಡಿಸಿಲ್ಲ. ಆದರೆ ಇದನ್ನೇ ನೆಪಮಾಡಿಕೊಂಡು ಕೆಂಪೇಗೌಡ ಪ್ರತಿಮೆ ಸ್ಥಾಪನೆ ಮಾಡಲು ಮುಂದಾದರೆ ಉಗ್ರಪ್ರತಿಭಟನೆ ನಡೆಸಲಾಗುವುದು’ ಎಂದು ಎಚ್ಚರಿಕೆ ನೀಡಿದ್ದಾರೆ.