<p><strong>ದೊಡ್ಡಬಳ್ಳಾಪುರ:</strong> ತಾಲ್ಲೂಕಿನ ದೊಡ್ಡತುಮಕೂರು ಹಾಗೂ ದೊಂಬರಹಳ್ಳಿ ಗ್ರಾಮದ ಸರ್ಕಾರಿ ಗೋಮಾಳದ ಜಮೀನನ್ನು ತಾಲ್ಲೂಕು ಆಡಳಿತ ಹರಾಜು ಹಾಕಲು ಮುಂದಾಗಿರುವ ಕೈಬಿಡುವಂತೆ ಆಗ್ರಹಿಸಿ ದೊಡ್ಡತುಮಕೂರಿನಲ್ಲಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.</p>.<p>ಗ್ರಾಮದ ಮುಖಂಡರು ಮಾತನಾಡಿ, ‘ಮಧುರೆ ಹೋಬಳಿಗೆ ಸೇರಿರುವ ದೊಡ್ಡತುಮಕೂರು ಗ್ರಾಮದ ಸರ್ವೆ ನಂ.80ರಲ್ಲಿ 12 ಎಕರೆ ಮತ್ತು ದೊಂಬರಹಳ್ಳಿ ಗ್ರಾಮದ ಸರ್ಕಾರಿ ಗೋಮಾಳ ಸರ್ವೆ ನಂ 49ರಲ್ಲಿ 5 ಎಕರೆ 15 ಗುಂಟೆ ಸರ್ಕಾರಿ ಗೋಮಾಳವನ್ನು ಹರಾಜು ಹಾಕಲು ಮುಂದಾಗಿರುವುದು ಖಂಡನೀಯ’ ಎಂದರು.</p>.<p>‘ದೊಡ್ಡತುಮಕೂರು ಹಾಗೂ ದೊಂಬರಹಳ್ಳಿ ಗ್ರಾಮದಲ್ಲಿ ಸುಮಾರು 700ಕ್ಕೂ ಹೆಚ್ಚು ಕುಟುಂಬಗಳು ವ್ಯವಸಾಯ ಮೂಲ ಕಸುಬನ್ನಾಗಿಸಿಕೊಂಡು ಹಾಗೂ ಅಧಿಕ ಸಂಖ್ಯೆಯಲ್ಲಿ ಹೈನುಗಾರಿಕೆಯನ್ನು ನಡೆಸಿಕೊಂಡು ಜೀವನ ಸಾಗಿಸುತ್ತಿದ್ದಾರೆ. ಅಲ್ಲದೆ ಎರಡೂ ಗ್ರಾಮಗಳಲ್ಲಿ ಸಾವಿರಕ್ಕೂ ಹೆಚ್ಚು ಜಾನುವಾರುಗಳಿವೆ. ಇವುಗಳಿಗೆ ಈ ಗೋಮಾಳದಿಂದಲೇ ಮೇವು ದೊರೆ ಯುತ್ತಿದೆ. ಸರ್ಕಾರ ಈ ಜಮೀನುಗಳನ್ನು ಹರಾಜು ಹಾಕಿದಲ್ಲಿ ರೈತರು ಸಂಕಷ್ಟಕ್ಕೆ ಸಿಲುಕಲಿದ್ದಾರೆ’ ಎಂದರು.</p>.<p>‘ಸುಮಾರು 2,500ಕ್ಕೂ ಹೆಚ್ಚು ಜನಸಂಖ್ಯೆ ಇರುವ ಈ ಗ್ರಾಮಕ್ಕೆ ಜನವಸತಿಗೆ ಯೋಗ್ಯವಾದ ಭೂಮಿಯೂ ಆಗಿರುವುದರಿಂದ ಗ್ರಾಮ ಪಂಚಾಯಿತಿಯಿಂದ ನಿವೇಶನ ರಹಿತರಿಗೆ ಹಂಚಿಕೆ ಮಾಡಲು ಫಲಾನುಭವಿಗಳಿಂದ ಅರ್ಜಿಯನ್ನು ಸ್ವೀಕರಿಸಿ ಗ್ರಾಮಸಭೆಯಲ್ಲಿ ಅನುಮೋದನೆಗೊಂಡು ಸರ್ಕಾರಕ್ಕೆ ಪ್ರಸ್ತಾವ ಸಹ ಸಲ್ಲಿಕೆಯಾಗಿದೆ. ಈ ಜಮೀನುಗಳ ಹರಾಜು ಪ್ರಕ್ರಿಯೆಯನ್ನು ಕೈಬಿಡಬೇಕು. ಇಲ್ಲವಾದಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಗುವುದು’ ಎಂದರು.</p>.<p>ಪ್ರತಿಭಟನೆಯಲ್ಲಿ ಮುಖಂಡರಾದ ಮುಖಂಡರಾದ ವೆಂಕಟೇಶ್, ವಸಂತ್ಕುಮಾರ್, ಶಿವಕುಮಾರ್, ರಾಮಕೃಷ್ಣಪ್ಪ, ಅಜಯ್, ವೆಂಕಟೇಶ್, ಶ್ರೀರಾಮ್, ನಂಜಪ್ಪ, ಚಂದ್ರನ, ಅಂಜಿನಪ್ಪ, ರಾಘು, ಲೋಕೇಶ್, ಟಿ.ಎಲ್.ವಸಂತ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೊಡ್ಡಬಳ್ಳಾಪುರ:</strong> ತಾಲ್ಲೂಕಿನ ದೊಡ್ಡತುಮಕೂರು ಹಾಗೂ ದೊಂಬರಹಳ್ಳಿ ಗ್ರಾಮದ ಸರ್ಕಾರಿ ಗೋಮಾಳದ ಜಮೀನನ್ನು ತಾಲ್ಲೂಕು ಆಡಳಿತ ಹರಾಜು ಹಾಕಲು ಮುಂದಾಗಿರುವ ಕೈಬಿಡುವಂತೆ ಆಗ್ರಹಿಸಿ ದೊಡ್ಡತುಮಕೂರಿನಲ್ಲಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.</p>.<p>ಗ್ರಾಮದ ಮುಖಂಡರು ಮಾತನಾಡಿ, ‘ಮಧುರೆ ಹೋಬಳಿಗೆ ಸೇರಿರುವ ದೊಡ್ಡತುಮಕೂರು ಗ್ರಾಮದ ಸರ್ವೆ ನಂ.80ರಲ್ಲಿ 12 ಎಕರೆ ಮತ್ತು ದೊಂಬರಹಳ್ಳಿ ಗ್ರಾಮದ ಸರ್ಕಾರಿ ಗೋಮಾಳ ಸರ್ವೆ ನಂ 49ರಲ್ಲಿ 5 ಎಕರೆ 15 ಗುಂಟೆ ಸರ್ಕಾರಿ ಗೋಮಾಳವನ್ನು ಹರಾಜು ಹಾಕಲು ಮುಂದಾಗಿರುವುದು ಖಂಡನೀಯ’ ಎಂದರು.</p>.<p>‘ದೊಡ್ಡತುಮಕೂರು ಹಾಗೂ ದೊಂಬರಹಳ್ಳಿ ಗ್ರಾಮದಲ್ಲಿ ಸುಮಾರು 700ಕ್ಕೂ ಹೆಚ್ಚು ಕುಟುಂಬಗಳು ವ್ಯವಸಾಯ ಮೂಲ ಕಸುಬನ್ನಾಗಿಸಿಕೊಂಡು ಹಾಗೂ ಅಧಿಕ ಸಂಖ್ಯೆಯಲ್ಲಿ ಹೈನುಗಾರಿಕೆಯನ್ನು ನಡೆಸಿಕೊಂಡು ಜೀವನ ಸಾಗಿಸುತ್ತಿದ್ದಾರೆ. ಅಲ್ಲದೆ ಎರಡೂ ಗ್ರಾಮಗಳಲ್ಲಿ ಸಾವಿರಕ್ಕೂ ಹೆಚ್ಚು ಜಾನುವಾರುಗಳಿವೆ. ಇವುಗಳಿಗೆ ಈ ಗೋಮಾಳದಿಂದಲೇ ಮೇವು ದೊರೆ ಯುತ್ತಿದೆ. ಸರ್ಕಾರ ಈ ಜಮೀನುಗಳನ್ನು ಹರಾಜು ಹಾಕಿದಲ್ಲಿ ರೈತರು ಸಂಕಷ್ಟಕ್ಕೆ ಸಿಲುಕಲಿದ್ದಾರೆ’ ಎಂದರು.</p>.<p>‘ಸುಮಾರು 2,500ಕ್ಕೂ ಹೆಚ್ಚು ಜನಸಂಖ್ಯೆ ಇರುವ ಈ ಗ್ರಾಮಕ್ಕೆ ಜನವಸತಿಗೆ ಯೋಗ್ಯವಾದ ಭೂಮಿಯೂ ಆಗಿರುವುದರಿಂದ ಗ್ರಾಮ ಪಂಚಾಯಿತಿಯಿಂದ ನಿವೇಶನ ರಹಿತರಿಗೆ ಹಂಚಿಕೆ ಮಾಡಲು ಫಲಾನುಭವಿಗಳಿಂದ ಅರ್ಜಿಯನ್ನು ಸ್ವೀಕರಿಸಿ ಗ್ರಾಮಸಭೆಯಲ್ಲಿ ಅನುಮೋದನೆಗೊಂಡು ಸರ್ಕಾರಕ್ಕೆ ಪ್ರಸ್ತಾವ ಸಹ ಸಲ್ಲಿಕೆಯಾಗಿದೆ. ಈ ಜಮೀನುಗಳ ಹರಾಜು ಪ್ರಕ್ರಿಯೆಯನ್ನು ಕೈಬಿಡಬೇಕು. ಇಲ್ಲವಾದಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಗುವುದು’ ಎಂದರು.</p>.<p>ಪ್ರತಿಭಟನೆಯಲ್ಲಿ ಮುಖಂಡರಾದ ಮುಖಂಡರಾದ ವೆಂಕಟೇಶ್, ವಸಂತ್ಕುಮಾರ್, ಶಿವಕುಮಾರ್, ರಾಮಕೃಷ್ಣಪ್ಪ, ಅಜಯ್, ವೆಂಕಟೇಶ್, ಶ್ರೀರಾಮ್, ನಂಜಪ್ಪ, ಚಂದ್ರನ, ಅಂಜಿನಪ್ಪ, ರಾಘು, ಲೋಕೇಶ್, ಟಿ.ಎಲ್.ವಸಂತ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>