ವಿಜಯಪುರ: ‘ಸಂಘಟನೆಗಳು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಿದಾಗ ಮಾತ್ರ ಸಮಾಜದಲ್ಲಿ ಅಸ್ಪೃಶ್ಯತೆ, ಭ್ರಷ್ಟಾಚಾರ ನಿರ್ಮೂಲನೆ ಮಾಡಲು ಸಾಧ್ಯ’ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಮುನಿಶಾಮಣ್ಣ ಹೇಳಿದರು.
ತೆನೆಯೂರು ಗ್ರಾಮದಲ್ಲಿ ಕರ್ನಾಟಕ ದಲಿತ ಸ್ವಾಭಿಮಾನಿ ಸಮಿತಿ ಗ್ರಾಮ ಶಾಖೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸಮಾಜದಲ್ಲಿ ನಡೆಯುವ ವಿದ್ಯಮಾನ ಕುರಿತು ಜನರಿಗೆ ತಿಳಿವಳಿಕೆ ಮೂಡಿಸುವುದು, ಹೋರಾಟ ಮಾಡುವುದು ಅಷ್ಟೇ ಅಲ್ಲದೆ ದಲಿತ ವಿರೋಧಿ ನೀತಿ ತರುವ ಸರ್ಕಾರವನ್ನು ಪ್ರಶ್ನಿಸುವಂತಹ ಹಕ್ಕು ಸಂಘಟನೆಗಳಿಗೆ ಇದೆ. ಹೋರಾಟ ಯಶಸ್ವಿಯಾಗಬೇಕಾದರೆ ದಲಿತ ಸಂಘಟನೆಗಳು ಒಗ್ಗೂಡಬೇಕು. ಕಾನೂನಿನ ಚೌಕಟ್ಟಿನಲ್ಲಿ ಹೋರಾಟ ನಡೆಸಬೇಕೆಂದು ಸಲಹೆ ನೀಡಿದರು.