ಕಳೆದ ಒಂದು ವರ್ಷದಲ್ಲಿ ದೇಶದಲ್ಲಿ ರೈತರ ಆತ್ಮಹತ್ಯೆ ಪ್ರಮಾಣ ಶೇಕಡ 26ರಷ್ಟು ಹೆಚ್ಚಳವಾಗಿದೆ. ಕೇಂದ್ರದ ಬಿಜೆಪಿ ಸರ್ಕಾರಕ್ಕೆ ಕೃಷಿ ಬಗ್ಗೆ ಗೊತ್ತಿಲ್ಲ. ದೇಶದ ದೊಡ್ಡ ಸಂಖ್ಯೆಯಲ್ಲಿರುವ ರೈತರನ್ನು ಕಡೆಗಣಿಸಿದೆ. ಸರ್ಕಾರದ ತಪ್ಪು ನೀತಿಗಳು ಹಾಗೂ ಯೋಜನೆಗಳ ಅನುಷ್ಠಾನದಲ್ಲಿನ ವೈಫಲ್ಯಗಳಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿವೆ ಎಂದರು.