ಕೆರೆಗಳು ಅಭಿವೃದ್ಧಿಯಾದರೆ ಮಾತ್ರ ಗ್ರಾಮಗಳ ಅಭಿವೃದ್ಧಿ, ಬತ್ತಿ ಹೋಗಿರುವ ಕೆರೆಗಳು ಪುನಶ್ಚೇತನ ಮಾಡಲೇಬೇಕಾದ ಅನಿರ್ವಾಯತೆ ಇದೆ. ಇಲ್ಲದಿದ್ದರೆ ಉಳಿಗಾಲವಿಲ್ಲ, ಪ್ರತಿ ಕ್ರಿಮಿ, ಕೀಟ, ಪ್ರಾಣಿ, ಪಕ್ಷಿ ಸೇರಿದಂತೆ ಪ್ರತಿಯೊಂದು ಜೀವರಾಶಿಗೆ ನೀರು ಬೇಕು. ಒಂದು ಕಡ್ಡಿ ಹುಲ್ಲು ಬೆಳೆಯಲು ನೀರು ಬೇಕು. ಕೆರೆ ಅಭಿವೃದ್ಧಿಗೆ ಎಲ್ಲರ ಸಹಕಾರ ಅಗತ್ಯ ಎಂದು ಹೇಳಿದರು.