ದ್ರಾಕ್ಷಿ ಕಟಾವು ಮಾಡಲು ಟೆಂಪೊಗಳಲ್ಲಿ ಕೂಲಿ ಕಾರ್ಮಿಕರನ್ನು ಕರೆದುಕೊಂಡು ಹೋಗುವುದು, ಕ್ಯಾರೆಟ್ ಮೂಟೆಗಳ ಮೇಲೆ ಕಾರ್ಮಿಕರನ್ನು ಕೂರಿಸಿಕೊಂಡು ಹೋಗುವುದು, ಟಾಟಾ ಏಸ್ಗಳಲ್ಲಿ ಜನರನ್ನು ಕರೆದುಕೊಂಡು ಹೋಗುವುದನ್ನು ನಿಷೇಧ ಮಾಡಲಾಗಿದೆ. ಸಾಗಾಣಿಕೆ ಮಾಡುತ್ತಿರುವುದು ಕಂಡು ಬಂದರೆ ಅಂತಹ ವಾಹನಗಳ ಮಾಲೀಕರ ಮೇಲೆ ಪ್ರಕರಣ ದಾಖಲಿಸಿ ವಾಹನ ಚಾಲನಾ ಪರವಾನಗಿಯನ್ನು ರದ್ದುಗೊಳಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ ಎಂದರು.