<p><strong>ದೇವನಹಳ್ಳಿ:</strong> ಚನ್ನರಾಯಪಟ್ಟಣ ಹೋಬಳಿಯ ಬೆಟ್ಟಕೋಟೆ ಗ್ರಾಮ ಪಂಚಾಯತಿ ವ್ಯಾಪ್ತಿಯ ರಾಯಸಂದ್ರದಲ್ಲಿ ಒಂದೇ ಕಾಮಗಾರಿಗೆ ಎರಡು ಬಾರಿ ಹಣ ಪಾವತಿಸಿರುವ ಆರೋಪದ ಮೇಲೆ ಬೆಟ್ಟಕೋಟೆ ಗ್ರಾ.ಪಂ ಪಿಡಿಒ ಕೆಂಪರಾಜಯ್ಯ ಅವರನ್ನು ಗುರುವಾರ ಅಮಾನತು ಮಾಡಲಾಗಿದೆ. </p><p>ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕೆಂಪರಾಜಯ್ಯ ಮತ್ತು ಗುತ್ತಿಗೆದಾರರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿರುವ ಮೇಲಧಿಕಾರಿಗಳು, ಇಲಾಖಾ ವಿಚಾರಣೆ ಕಾಯ್ದಿರಿಸಿ ಕೆಂಪರಾಜಯ್ಯ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.</p><p>ರಾಯಸಂದ್ರ ಗ್ರಾಮದ ಮುನಿಕೃಷ್ಣಪ್ಪ ತೋಟದಿಂದ ಮುನಿರಾಜು ತೋಟದವರೆಗೂ ಮುಖ್ಯಮಂತ್ರಿ ವಿಶೇಷ ಅಭಿವೃದ್ಧಿ ಅನುದಾನದಲ್ಲಿ ₹10 ಲಕ್ಷ ವೆಚ್ಚದಲ್ಲಿ ನಿರ್ಮಿತಿ ಕೇಂದ್ರ ರಸ್ತೆ ಕಾಮಗಾರಿ ಕೈಗೊಂಡಿತ್ತು.</p><p>ನಿರ್ಮಿತಿ ಕೇಂದ್ರ ಕಾಮಗಾರಿ ಪೂರ್ಣಗೊಳಿಸಿ ಹಸ್ತಾಂತರ ಮಾಡಿರುವ ಪತ್ರಕ್ಕೂ ಸಹಿ ಮಾಡಿ, ಸಿಸಿ ರಸ್ತೆಯನ್ನು ಗ್ರಾಮ ಪಂಚಾಯಿತಿಯ ನಿರ್ವಹಣೆಗೆ ಪಡೆದುಕೊಂಡಿದ್ದರು. ಆದರೆ ಕೆಲ ದಿನಗಳ ನಂತರ ಇದೇ ಕಾಮಗಾರಿಯ ಪೋಟೊ ಬಳಸಿಕೊಂಡು ಬೆಟ್ಟಕೋಟೆ ಗ್ರಾ.ಪಂ ಸ್ವಂತ ಸಂಪನ್ಮೂಲ ನಿಧಿ ಅಡಿ ₹4.99 ಲಕ್ಷ ಅಂದಾಜು ಮೊತ್ತವನ್ನು ಗ್ರಾಮ ಪಂಚಾಯಿತಿಯಿಂದ ರಸ್ತೆ ನಿರ್ಮಾಣ ಮಾಡಲಾಗಿದೆ ಎಂದು ಬಿಲ್ ಪಾವತಿ ಮಾಡಿದ್ದರು.</p><p>ಮಾಹಿತಿ ಹಕ್ಕು ಕಾನೂನು ಅಡಿ ಪಡೆದ ಮಾಹಿತಿಯಲ್ಲಿ ಈ ಅಕ್ರಮ ಬಯಲಾಗಿತ್ತು. ದಲಿತ ಸಂಘಟನೆಗಳು ಇದರ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಗೆ ದೂರು ನೀಡಿದ್ದರು. ಪ್ರಾಥಮಿಕ ತನಿಖೆ ಆಧಾರದಲ್ಲಿ ಪಿಡಿಒ ಕೆಂಪರಾಜಯ್ಯ ಅವರನ್ನು ಅಮಾನತು ಮಾಡಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೇವನಹಳ್ಳಿ:</strong> ಚನ್ನರಾಯಪಟ್ಟಣ ಹೋಬಳಿಯ ಬೆಟ್ಟಕೋಟೆ ಗ್ರಾಮ ಪಂಚಾಯತಿ ವ್ಯಾಪ್ತಿಯ ರಾಯಸಂದ್ರದಲ್ಲಿ ಒಂದೇ ಕಾಮಗಾರಿಗೆ ಎರಡು ಬಾರಿ ಹಣ ಪಾವತಿಸಿರುವ ಆರೋಪದ ಮೇಲೆ ಬೆಟ್ಟಕೋಟೆ ಗ್ರಾ.ಪಂ ಪಿಡಿಒ ಕೆಂಪರಾಜಯ್ಯ ಅವರನ್ನು ಗುರುವಾರ ಅಮಾನತು ಮಾಡಲಾಗಿದೆ. </p><p>ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕೆಂಪರಾಜಯ್ಯ ಮತ್ತು ಗುತ್ತಿಗೆದಾರರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿರುವ ಮೇಲಧಿಕಾರಿಗಳು, ಇಲಾಖಾ ವಿಚಾರಣೆ ಕಾಯ್ದಿರಿಸಿ ಕೆಂಪರಾಜಯ್ಯ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.</p><p>ರಾಯಸಂದ್ರ ಗ್ರಾಮದ ಮುನಿಕೃಷ್ಣಪ್ಪ ತೋಟದಿಂದ ಮುನಿರಾಜು ತೋಟದವರೆಗೂ ಮುಖ್ಯಮಂತ್ರಿ ವಿಶೇಷ ಅಭಿವೃದ್ಧಿ ಅನುದಾನದಲ್ಲಿ ₹10 ಲಕ್ಷ ವೆಚ್ಚದಲ್ಲಿ ನಿರ್ಮಿತಿ ಕೇಂದ್ರ ರಸ್ತೆ ಕಾಮಗಾರಿ ಕೈಗೊಂಡಿತ್ತು.</p><p>ನಿರ್ಮಿತಿ ಕೇಂದ್ರ ಕಾಮಗಾರಿ ಪೂರ್ಣಗೊಳಿಸಿ ಹಸ್ತಾಂತರ ಮಾಡಿರುವ ಪತ್ರಕ್ಕೂ ಸಹಿ ಮಾಡಿ, ಸಿಸಿ ರಸ್ತೆಯನ್ನು ಗ್ರಾಮ ಪಂಚಾಯಿತಿಯ ನಿರ್ವಹಣೆಗೆ ಪಡೆದುಕೊಂಡಿದ್ದರು. ಆದರೆ ಕೆಲ ದಿನಗಳ ನಂತರ ಇದೇ ಕಾಮಗಾರಿಯ ಪೋಟೊ ಬಳಸಿಕೊಂಡು ಬೆಟ್ಟಕೋಟೆ ಗ್ರಾ.ಪಂ ಸ್ವಂತ ಸಂಪನ್ಮೂಲ ನಿಧಿ ಅಡಿ ₹4.99 ಲಕ್ಷ ಅಂದಾಜು ಮೊತ್ತವನ್ನು ಗ್ರಾಮ ಪಂಚಾಯಿತಿಯಿಂದ ರಸ್ತೆ ನಿರ್ಮಾಣ ಮಾಡಲಾಗಿದೆ ಎಂದು ಬಿಲ್ ಪಾವತಿ ಮಾಡಿದ್ದರು.</p><p>ಮಾಹಿತಿ ಹಕ್ಕು ಕಾನೂನು ಅಡಿ ಪಡೆದ ಮಾಹಿತಿಯಲ್ಲಿ ಈ ಅಕ್ರಮ ಬಯಲಾಗಿತ್ತು. ದಲಿತ ಸಂಘಟನೆಗಳು ಇದರ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಗೆ ದೂರು ನೀಡಿದ್ದರು. ಪ್ರಾಥಮಿಕ ತನಿಖೆ ಆಧಾರದಲ್ಲಿ ಪಿಡಿಒ ಕೆಂಪರಾಜಯ್ಯ ಅವರನ್ನು ಅಮಾನತು ಮಾಡಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>