<p><strong>ದೊಡ್ಡಬಳ್ಳಾಪುರ: </strong>ತಾಲ್ಲೂಕಿನ ಅರಳುಮಲ್ಲಿಗೆ ಕೆರೆ ಅಂಗಳದಲ್ಲಿ ನವಿಲು ಬೇಟೆಯಾಡಿದ್ದ ಇಬ್ಬರು ಬೇಟೆಗಾರನನ್ನು ಬಂಧಿಸಿ, ಒಂದು ನಾಡ ಬಂದೂಕು ಹಾಗೂ ಒಂದು ದ್ವಿಚಕ್ರ ವಾಹನವನ್ನು ಗ್ರಾಮಾಂತರ ಠಾಣೆ ಪೊಲೀಸರು ಮಂಗಳವಾರ ರಾತ್ರಿ ವಶ ಪಡಿಸಿಕೊಂಡಿದ್ದಾರೆ.</p>.<p>ಆಂಧ್ರಪ್ರದೇಶ ಮೂಲದ ಪುಟ್ಟಪರ್ತಿಯ ಶ್ರೀನಿವಾಸ್(42), ಬಾಲಾಜಿ (48) ಬಂಧಿತ ಆರೋಪಿಗಳು. ತೋಟವೊಂದಲ್ಲಿ ಕೆಲಸ ಮಾಡುತ್ತಿದ್ದ ಇವರು ಮಂಗಳವಾರ ರಾತ್ರಿ ಅರಳುಮಲ್ಲಿಗೆ ಕೆರೆ ಸಮೀಪ ನಾಡ ಬಂದೂಕು ಬಳಸಿ ಮೂರು ನವಿಲುಗಳನ್ನು ಬೇಟೆಯಾಡಿ ಕೊಂಡೊಯ್ಯುತ್ತಿದ್ದ ವೇಳೆ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ.</p>.<p>ರಾತ್ರಿ ಗಸ್ತಿನಲ್ಲಿದ್ದ ಗ್ರಾಮಾಂತರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಮುನಿಕೃಷ್ಣ, ಎಎಸ್ಐ ಶಿವರಾಜ್ ಆರೋಪಿಗಳನ್ನು ಬಂಧಿಸಿದ್ದಾರೆ.</p>.<p>ಬಂಧಿತ ಆರೋಪಿಗಳನ್ನು ವಶಕ್ಕೆ ಪಡೆದಿರುವ ವಲಯ ಅರಣ್ಯಾಧಿಕಾರಿ ಕೃಷ್ಣೇಗೌಡ ಅವರು ನವಿಲುಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗದೆ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೊಡ್ಡಬಳ್ಳಾಪುರ: </strong>ತಾಲ್ಲೂಕಿನ ಅರಳುಮಲ್ಲಿಗೆ ಕೆರೆ ಅಂಗಳದಲ್ಲಿ ನವಿಲು ಬೇಟೆಯಾಡಿದ್ದ ಇಬ್ಬರು ಬೇಟೆಗಾರನನ್ನು ಬಂಧಿಸಿ, ಒಂದು ನಾಡ ಬಂದೂಕು ಹಾಗೂ ಒಂದು ದ್ವಿಚಕ್ರ ವಾಹನವನ್ನು ಗ್ರಾಮಾಂತರ ಠಾಣೆ ಪೊಲೀಸರು ಮಂಗಳವಾರ ರಾತ್ರಿ ವಶ ಪಡಿಸಿಕೊಂಡಿದ್ದಾರೆ.</p>.<p>ಆಂಧ್ರಪ್ರದೇಶ ಮೂಲದ ಪುಟ್ಟಪರ್ತಿಯ ಶ್ರೀನಿವಾಸ್(42), ಬಾಲಾಜಿ (48) ಬಂಧಿತ ಆರೋಪಿಗಳು. ತೋಟವೊಂದಲ್ಲಿ ಕೆಲಸ ಮಾಡುತ್ತಿದ್ದ ಇವರು ಮಂಗಳವಾರ ರಾತ್ರಿ ಅರಳುಮಲ್ಲಿಗೆ ಕೆರೆ ಸಮೀಪ ನಾಡ ಬಂದೂಕು ಬಳಸಿ ಮೂರು ನವಿಲುಗಳನ್ನು ಬೇಟೆಯಾಡಿ ಕೊಂಡೊಯ್ಯುತ್ತಿದ್ದ ವೇಳೆ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ.</p>.<p>ರಾತ್ರಿ ಗಸ್ತಿನಲ್ಲಿದ್ದ ಗ್ರಾಮಾಂತರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಮುನಿಕೃಷ್ಣ, ಎಎಸ್ಐ ಶಿವರಾಜ್ ಆರೋಪಿಗಳನ್ನು ಬಂಧಿಸಿದ್ದಾರೆ.</p>.<p>ಬಂಧಿತ ಆರೋಪಿಗಳನ್ನು ವಶಕ್ಕೆ ಪಡೆದಿರುವ ವಲಯ ಅರಣ್ಯಾಧಿಕಾರಿ ಕೃಷ್ಣೇಗೌಡ ಅವರು ನವಿಲುಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗದೆ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>