ಹೊಸಕೋಟೆ: ನಗರದಲ್ಲಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳು ದ್ವಿಚಕ್ರವಾಹನ ಓಡಿಸುವುದು ಮತ್ತು ಬೈಕ್ನಲ್ಲಿ ಮೂವರು ಸವಾರರು ಸಂಚರಿಸುತ್ತಿರುವ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಮಂಜುನಾಥ್ ನೇತೃತ್ವದಲ್ಲಿ ಬುಧವಾರ ತಪಾಸಣೆ ನಡೆಯಿತು.
ಕಾಲೇಜು ಮುಗಿಸಿಕೊಂಡು ವಿದ್ಯಾರ್ಥಿಗಳು ಓಡಿಸುತ್ತಿದ್ದ 10ಕ್ಕೂ ಹೆಚ್ಚು ದ್ವಿಚಕ್ರವಾಹನಗಳನ್ನು ತಡೆದ ಪೊಲೀಸರು, ಪೋಷಕರನ್ನು ಸ್ಥಳಕ್ಕೆ ಕರೆಯಿಸಿ ಎಲ್ಲರಿಗೂ ಎಚ್ಚರಿಕೆ ನೀಡಿದರು.
ಈ ಬಾರಿ ಕೇವಲ ದಂಡ ಹಾಕಲಾಗುತ್ತದೆ. ಮತ್ತೆ ಮಕ್ಕಳು ಇದನ್ನೇ ಮುಂದುವರಿಸಿದರೆ ವಾಹನಗಳನ್ನು ಜಪ್ತಿ ಮಾಡಿ ಪೋಷಕರನ್ನು ನ್ಯಾಯಾಲಯದ ಕಟಕಟೆಯಲ್ಲಿ ನಿಲ್ಲಿಸಿ ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ತಿಳಿಸಿದರು.
ಪೊಲೀಸರು ನಿರಂತರವಾಗಿ ತಪಾಸಣಾ ಕಾರ್ಯ ನಡೆಸಿದರೆ ಅಪಘಾತಗಳು ಕಡಿಮೆಯಾಗುತ್ತವೆ. ಸಾರ್ವಜನಿಕರು ರಸ್ತೆಗಳಲ್ಲಿ ನಿರಾತಂಕವಾಗಿ ಓಡಾಡಬಹುದು. ಸಂಚಾರ ದಟ್ಟಣೆ ಕಿರಿಕಿರಿಯೂ ತಪ್ಪುತ್ತದೆ ಎಂದು ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.