‘ನಗರದಲ್ಲಿ ನಡೆಯುವಂತಹ ವಾರದ ಸಂತೆಯಂದು ಮಾತ್ರ ಚಿಕ್ಕಬಳ್ಳಾಪುರ ಕೋಲಾರ ಮುಖ್ಯರಸ್ತೆಯಲ್ಲಿ ಜನಸಂದಣಿ ಹೆಚ್ಚಾಗಿರುವ ಕಾರಣ ಸ್ವಲ್ಪಮಟ್ಟಿಗೆ ಟ್ರಾಫಿಕ್ ಇರುತ್ತದೆ. ಉಳಿದಂತೆ ವೆಂಕಟರಮಣಸ್ವಾಮಿ ದೇವಾಲಯದ ರಸ್ತೆ, ಹಳೇ ಪುರಸಭಾ ಕಾರ್ಯಾಲಯದ ರಸ್ತೆ, ಹಳೇ ಕೆನರಾ ಬ್ಯಾಂಕ್ ರಸ್ತೆ, ಸೇರಿದಂತೆ ವಾಹನ ಸಂಚಾರ ಹೆಚ್ಚಾಗಿರುವ ರಸ್ತೆಗಳಲ್ಲಿ ಅಂಗಡಿಗಳನ್ನು ಸಾರ್ವಜನಿಕರ ಸಂಚಾರಕ್ಕೆ ಅಡ್ಡಿಯಾಗದಂತೆ ಹಿಂದೆ ಇಟ್ಟುಕೊಂಡು ಸಹಕಾರ ನೀಡಬೇಕು’ ಎಂದರು.