‘ಲಾಕ್ಡೌನ್ ನಂತರ ತಾಲ್ಲೂಕಿನಲ್ಲಿ ಹಂತ ಹಂತವಾಗಿ ಸಾರಿಗೆ ವ್ಯವಸ್ಥೆ ಆರಂಭಿಸಲಾಗುತ್ತಿದ್ದು, 94 ಮಾರ್ಗಗಳ ಪೈಕಿ 80 ಮಾರ್ಗಗಳಲ್ಲಿ ಕಾರ್ಯಾರಂಭವಾಗಿದೆ. ಇಂದು ಬೆಳಿಗ್ಗೆ ಬೆಂಗಳೂರಿಗೆ ನಾಲ್ಕು ಬಸ್ಗಳು ಕಾರ್ಯಾರಂಭ ಮಾಡಲಾಗಿದ್ದು, ಉಳಿದ ಯಾವುದೇ ಚಾಲಕ, ನಿರ್ವಾಹಕರು ಕರ್ತವ್ಯಕ್ಕೆ ಹಾಜರಾಗಿಲ್ಲ. ನೌಕರರಿಗೆ ಕರೆ ಮಾಡಿ ಕರೆಸುವ ಪ್ರಯತ್ನ ಮಾಡಲಾಗುತ್ತಿದೆ’ ಎಂದು ಡಿಪೊ ವ್ಯವಸ್ಥಾಪಕ ಆನಂದ್ ತಿಳಿಸಿದರು.