ಆನೇಕಲ್: ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಸಲೂನ್ವೊಂದಕ್ಕೆ ಬೆಂಕಿ ಹಚ್ಚಿದ್ದ ಮೂವರು ಆರೋಪಿಗಳನ್ನು ಸೂರ್ಯಸಿಟಿ ಪೊಲೀಸರು ಬಂಧಿಸಿದ್ದು, ಪ್ರಕರಣದ ಪ್ರಮುಖ ಆರೋಪಿಗೆ ಹುಡುಕಾಟ ನಡೆಸಿದ್ದಾರೆ.
ಆನೇಕಲ್ನ ಶಿವಕುಮಾರ್, ತಮಿಳುನಾಡಿನ ಉಮೇಶ್, ಹರೀಶ್, ಮಣಿ ಬಂಧಿತರು. ಪ್ರಮುಖ ಆರೋಪಿ ಶಿವಕುಮಾರ್ ತಲೆ ಮರೆಯಿಸಿಕೊಂಡಿದ್ದಾನೆ.
ಡಿ.31ರ ರಾತ್ರಿ ಚಂದಾಪುರದ ವಿಷ್ ಫ್ಯಾಮಿಲಿ ಸಲೂನ್ಗೆ ಬೆಂಕಿ ಬಿದ್ದು ಲಕ್ಷಾಂತರ ಮೌಲ್ಯದ ಪರಿಕರಗಳು ನಾಶವಾಗಿದ್ದವು. ಅಗ್ನಿಶಾಮಕ ದಳ ಬೆಂಕಿಯನ್ನು ನಂದಿಸಿತ್ತು. ಸಲೂನ್ನ ಮಾಲೀಕರು ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಅವಘಟ ಸಂಭವಿಸಿದೆ ಎಂದು ಸೂರ್ಯನಗರ ಠಾಣೆಗೆ ದೂರು ದಾಖಲಿಸಿದ್ದರು.
ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡು ಸಿಸಿಟಿವಿ ಕ್ಯಾಮರ ಡಿವಿಆರ್ ಪರಿಶೀಲಿಸಿದಾಗ ಆರೋಪಿಗಳು ಸಲೂನ್ಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚುತ್ತಿರುವ ದೃಶ್ಯ ಕಂಡು ಬಂದಿದೆ. ಇದನ್ನು ಆಧಾರಿಸಿ ಕಾರ್ಯಾಚರಣೆ ಕೈಗೊಂಡ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಆರೋಪಿಗಳ ವಿಚಾರಣೆ ನಡೆಸಿದಾಗ ಸಲೂನ್ನ ಮಾಲೀಕರಾದ ಬೇಬಿ ರಾಣಿ ಮತ್ತು ಪುಷ್ಪ ಎಂಬುವವರ ನಡುವೆ ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿದಂತೆ ವಿವಾದವಿದ್ದು, ದ್ವೇಷದ ಹಿನ್ನೆಲೆಯಲ್ಲಿ ಪುಷ್ಪ ಅವರ ಸೂಚನೆಯಂತೆ ಶಿವಕುಮಾರ್ ಮತ್ತು ತಂಡದವರು ಬೆಂಕಿ ಹಚ್ಚಿದ್ದಾರೆ ಎಂದು ತಿಳಿದು ಬಂದಿದ್ದು ಪೊಲೀಸರು ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.