ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಸ್ತೆಯಲ್ಲಿ ಪೈರು ನಾಟಿ: ಪ್ರತಿಭಟನೆ

Last Updated 12 ಅಕ್ಟೋಬರ್ 2021, 3:14 IST
ಅಕ್ಷರ ಗಾತ್ರ

ದೊಡ್ಡಬಳ್ಳಾಪುರ: ರಸ್ತೆಯನ್ನು ದುರಸ್ತಿ ಮಾಡದ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ವಿರುದ್ಧ ಸ್ಥಳೀಯ ನಿವಾಸಿಗಳು ರಸ್ತೆಯಲ್ಲಿ ಭತ್ತದ ಪೈರು ನಾಟಿ ಮಾಡುವ ಮೂಲಕ ಸೋಮವಾರ ಹಾದ್ರಿಪುರ-ಮುಪ್ಪಡಿಘಟ್ಟ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿದ ಕಾಡನೂರು ಗ್ರಾಮ ಪಂಚಾಯಿತಿ ಸದಸ್ಯ ಎನ್.ಆರ್.ಮನು,ಕಾಡನೂರು ಗ್ರಾಮಕ್ಕೆ ಹಾದ್ರಿಪುರ ಗ್ರಾಮದಿಂದ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆ ಇದಾಗಿದೆ. ಮಳೆ ಬಂದರೆ ಸಾಕು ಹಳ್ಳಕೊಳ್ಳದಂತಿರುವ ಈ ಕೆಸರಿನ ರಸ್ತೆಯಲ್ಲಿ ಓಡಾಡುವ ಪರಿಸ್ಥಿತಿ ಎದುರಾಗಿದೆ. ಮಕ್ಕಳು, ವೃದ್ಧರು, ಮಹಿಳೆಯರು ಕೆಸರು ತುಂಬಿದ ರಸ್ತೆಯಲ್ಲಿ ನಿತ್ಯ ಓಡಾಡುವ ಪರಿಸ್ಥಿತಿ ಉಂಟಾಗಿದೆ. ಈಗಾಗಲೇ ಸಾಕಷ್ಟು ಜನ ಸ್ಥಳೀಯರು ಶಾಸಕರ ಹಾಗೂ ಅಧಿಕಾರಿಗಳಿಗೆ ದೂರು ನೀಡಿದ್ದರು ಯಾವುದೇ ಪ್ರಯೋಜನವಾಗಿಲ್ಲ ಎಂದರು.

ಈ ರಸ್ತೆ ಅವ್ಯವಸ್ಥೆಯಿಂದ ಬೆಂಗಳೂರಿನಿಂದ ಬರುತ್ತಿದ್ದ ಸಾರಿಗೆ ಬಸ್ ಸಹ ನಿಂತುಹೋಗಿರುವುದರಿಂದ ಗ್ರಾಮಸ್ಥರು ಪರದಾಡುವಂತಾಗಿದೆ. ಸುಮಾರು 10ವರ್ಷಗಳ ಹಿಂದೆ ಈ ರಸ್ತೆ ಕಾಮಗಾರಿ ಕಂಡಿದೆ. ನಂತರ ಹಾಳುಬಿದ್ದಂತಾದ ಪರಿಣಾಮ ಹಾದ್ರಿಪುರ, ನರಸಯ್ಯನ ಅಗ್ರಹಾರ, ಮುಪ್ಪಡಿಗಟ್ಟ, ಕಾಡನೂರು ಗ್ರಾಮಸ್ಥರು ರಸ್ತೆ ಸರಿ ಇಲ್ಲದೆ ಕಷ್ಟ ಅನುಭವಿಸುವಂತಾಗಿದೆ ಎಂದರು.

ಈ ಸಂದರ್ಭದಲ್ಲಿ ಹಾದ್ರಿಪುರ ಗ್ರಾಮ ಪಂಚಾಯಿತಿ ಸದಸ್ಯ ಸತೀಶ್, ಮಾಜಿ ಸದಸ್ಯ ಸತ್ಯನಾರಾಯಣ, ಹಾದ್ರಿಪುರ, ನರಸಯ್ಯನ ಅಗ್ರಹಾರದ ಗ್ರಾಮಸ್ಥರಾದ ರಾಜಣ್ಣ, ಲೋಕೇಶ್, ವೆಂಕಟೇಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT