<p><strong>ಚನ್ನರಾಯಪಟ್ಟಣ(ದೇವನಹಳ್ಳಿ):</strong> ತಾಲ್ಲೂಕಿನ ಪೋಲನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಆವರಣದಲ್ಲಿ ಭಾನುವಾರ ಶಾಲೆಯ ಶತಮಾನೋತ್ಸವ ಅಂಗವಾಗಿ ಹಳೆ ವಿದ್ಯಾರ್ಥಿಗಳ ರಜತ ಮಹೋತ್ಸವ, ಗುರುವಂದನೆ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮ ನಡೆಯಿತು.</p>.<p>ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಪ್ರಾಥಮಿಕ ಶಿಕ್ಷಣವೇ ಭವಿಷ್ಯದ ಭದ್ರ ತಳಹದಿ, ಶಾಲಾ ಹಂತದ ವಿದ್ಯಾಭ್ಯಾಸ ಜೀವನದ ದಿಕ್ಕನ್ನು ನಿರ್ಧರಿಸುತ್ತದೆ ಎಂದು ಶಿಕ್ಷಕ ಮಹೇಶ್ ಹೇಳಿದರು.</p>.<p>ಮಕ್ಕಳ ಉತ್ತಮ ವಿದ್ಯಾಭ್ಯಾಸದಿಂದ ದೇಶದ ಪ್ರಗತಿ ಸಾಧ್ಯ. ಮಕ್ಕಳು ಮೊದಲು ತಂದೆ–ತಾಯಿಯನ್ನು ಹಾಗೂ ಗುರುಹಿರಿಯರನ್ನು ಗೌರವಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ಗುರುವಂದನೆ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ಸಂಸ್ಕಾರ ಮತ್ತು ಕೃತಜ್ಞತೆಯನ್ನು ಬೆಳೆಸುತ್ತವೆ. ಶಾಲಾ ದಿನಗಳ ಸವಿ ನೆನಪುಗಳು ಇಂತಹ ಕಾರ್ಯಕ್ರಮಗಳಿಂದ ಮತ್ತೆ ಮರುಕಳಿಸುತ್ತವೆ ಎಂದರು.</p>.<p>ಶಾಲೆಯ ಶಿಕ್ಷಕರನ್ನು ಹಾಗೂ ಸೇವೆ ಸಲ್ಲಿಸಿದ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಸಿಬ್ಬಂದಿ ಮತ್ತು ಅಡುಗೆ ಸಹಾಯಕರನ್ನು ಸನ್ಮಾನಿಸಲಾಯಿತು.</p>.<p>ಹಳೆ ವಿದ್ಯಾರ್ಥಿಗಳು, ವಿದ್ಯಾರ್ಥಿನಿಯರು ಹಾಗೂ ಗ್ರಾಮದ ಮುಖಂಡರು ಮತ್ತು ಗ್ರಾಮಸ್ಥರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260512-15-259609863</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನರಾಯಪಟ್ಟಣ(ದೇವನಹಳ್ಳಿ):</strong> ತಾಲ್ಲೂಕಿನ ಪೋಲನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಆವರಣದಲ್ಲಿ ಭಾನುವಾರ ಶಾಲೆಯ ಶತಮಾನೋತ್ಸವ ಅಂಗವಾಗಿ ಹಳೆ ವಿದ್ಯಾರ್ಥಿಗಳ ರಜತ ಮಹೋತ್ಸವ, ಗುರುವಂದನೆ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮ ನಡೆಯಿತು.</p>.<p>ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಪ್ರಾಥಮಿಕ ಶಿಕ್ಷಣವೇ ಭವಿಷ್ಯದ ಭದ್ರ ತಳಹದಿ, ಶಾಲಾ ಹಂತದ ವಿದ್ಯಾಭ್ಯಾಸ ಜೀವನದ ದಿಕ್ಕನ್ನು ನಿರ್ಧರಿಸುತ್ತದೆ ಎಂದು ಶಿಕ್ಷಕ ಮಹೇಶ್ ಹೇಳಿದರು.</p>.<p>ಮಕ್ಕಳ ಉತ್ತಮ ವಿದ್ಯಾಭ್ಯಾಸದಿಂದ ದೇಶದ ಪ್ರಗತಿ ಸಾಧ್ಯ. ಮಕ್ಕಳು ಮೊದಲು ತಂದೆ–ತಾಯಿಯನ್ನು ಹಾಗೂ ಗುರುಹಿರಿಯರನ್ನು ಗೌರವಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ಗುರುವಂದನೆ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ಸಂಸ್ಕಾರ ಮತ್ತು ಕೃತಜ್ಞತೆಯನ್ನು ಬೆಳೆಸುತ್ತವೆ. ಶಾಲಾ ದಿನಗಳ ಸವಿ ನೆನಪುಗಳು ಇಂತಹ ಕಾರ್ಯಕ್ರಮಗಳಿಂದ ಮತ್ತೆ ಮರುಕಳಿಸುತ್ತವೆ ಎಂದರು.</p>.<p>ಶಾಲೆಯ ಶಿಕ್ಷಕರನ್ನು ಹಾಗೂ ಸೇವೆ ಸಲ್ಲಿಸಿದ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಸಿಬ್ಬಂದಿ ಮತ್ತು ಅಡುಗೆ ಸಹಾಯಕರನ್ನು ಸನ್ಮಾನಿಸಲಾಯಿತು.</p>.<p>ಹಳೆ ವಿದ್ಯಾರ್ಥಿಗಳು, ವಿದ್ಯಾರ್ಥಿನಿಯರು ಹಾಗೂ ಗ್ರಾಮದ ಮುಖಂಡರು ಮತ್ತು ಗ್ರಾಮಸ್ಥರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260512-15-259609863</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>