<p>ದೊಡ್ಡಬಳ್ಳಾಪುರ: ಕೊರೊನಾ ಸೋಂಕು ತಡೆಗೆ ರಾಜ್ಯ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಪೊಲೀಸರು ಹಲವಾರು ಕಾಯ್ದೆಗಳ ಅಡಿಯಲ್ಲಿ ದೂರುಗಳನ್ನು ದಾಖಲಿಸುವ, ದಂಡ ವಿಧಿಸುವ ಕೆಲಸವನ್ನು ಸೋಮವಾರದಿಂದಲೇ ತೀವ್ರಗೊಳಿಸಲಾಗಿದೆ ಎಂದು ಡಿವೈಎಸ್ಪಿ ಟಿ.ರಂಗಪ್ಪ ಹೇಳಿದರು.</p>.<p>ಅವರು ನಗರ ಪೊಲೀಸ್ ಠಾಣೆ ಆವರಣದಲ್ಲಿ ವಿವಿಧ ಸಂಘಟನೆಗಳ ಮುಖಂಡರು, ಬಾರ್, ಹೋಟೆಲ್ ಹಾಗೂ ಕಲ್ಯಾಣ ಮಂದಿರ ಮಾಲೀಕರ ಸಭೆಯಲ್ಲಿ ಮಾತನಾಡಿದರು.</p>.<p>ಕೋವಿಡ್ 2ನೇ ಅಲೆಯನ್ನು ತಡೆಯುವಲ್ಲಿ ಸಾರ್ವಜನಿಕರ ಸಹಕಾರ ಮುಖ್ಯವಾಗಿದೆ. ಸೋಂಕಿತರ ಸಂಖ್ಯೆ, ಸಾವುಗಳ ಸಂಖ್ಯೆಯು ವಿಶ್ವದ ಇತರೆ ದೇಶಗಳನ್ನು ಮೀರಿಸಿ ಭಾರತವು ಮುನ್ನಡೆಯುತ್ತಿರುವ ವರದಿಗಳು ಗಾಬರಿಗೊಳಿಸುತ್ತಿದೆ. ಈಹಿನ್ನೆಲೆಯಲ್ಲಿ ವಿವಾಹಕ್ಕೆ ಇನ್ನು ಸಿದ್ದತೆಗಳನ್ನು ಆರಂಭಿಸಿದವರು ವಿವಾಹ ದಿನಾಂಕವನ್ನು ಮುಂದೂಡುವುದು ಆರೋಗ್ಯದ ದೃಷ್ಟಿಯಿಂದ ಒಳ್ಳೆಯದು. ಸಾರ್ವಜನಿಕರ ಸಭೆ, ಸಮಾರಂಭ, ವಿವಾಹಗಳನ್ನು ನಡೆಸಲು ತಹಶೀಲ್ದಾರ್ ಅವರಿಂದ ಕಡ್ಡಾಯವಾಗಿ ಅನುಮತಿ ಪಡೆಯಲೇ ಬೇಕು. ತಹಶೀಲ್ದಾರ್ ಅವರು ವಿಧಿಸಿರುವ ನಿಯಮಗಳು ಪಾಲನೆಯಾಗುವಂತೆ ಪೊಲೀಸರು ನೋಡಿಕೊಳ್ಳಲಿದ್ದಾರೆ. ಕಲ್ಯಾಣ ಮಂದಿರ, ಬಾರ್, ಮಾರುಕಟ್ಟೆ ಪ್ರದೇಶಗಳು ಕೊರೊನಾ ಸೋಂಕು ಹೆಚ್ಚಾಗಲು ಇರುವ ಮುಖ್ಯ ಕೇಂದ್ರಗಳಾಗಿವೆ. ಹೀಗಾಗಿ ಸರ್ಕಾರದ ಮಾರ್ಗದರ್ಶಗಳನ್ನು ಎಲ್ಲರು ಕಡ್ಡಾಯವಾಗಿ ಪಾಲಿಸಬೇಕು<br />ಎಂದರು.</p>.<p>ಯಾವುದೇ ರೀತಿಯ ಸಮಾರಂಭ, ಧಾರ್ಮಿಕ ಕಾರ್ಯಕ್ರಮ ಸೇರಿದಂತೆ ಎಲ್ಲಕ್ಕೂ ತಹಶೀಲ್ದಾರ್ ಅವರಿಗೆ ಅಧಿಕೃತವಾಗಿ ಅರ್ಜಿಸಲ್ಲಿಸಿ ಅನುಮತಿ ಪಡೆಯಲೇ ಬೇಕು. ಇಲ್ಲವಾದಲ್ಲಿ ಕಾನೂನು ಕ್ರಮ ಅನಿವಾರ್ಯವಾಗಲಿದೆ ಎಂದರು.</p>.<p>ಪೊಲೀಸ್ ಠಾಣೆಗಳಿಗೆ ಸಾರ್ವಜನಿಕರು ಅನಾವಶಕವಾಗಿ ಬರುವುದನ್ನು ನಿಲ್ಲಿಸಬೇಕು. ಈಗಾಗಲೇ 8 ಜನ ಪೊಲೀಸ್ ಸಿಬ್ಬಂದಿಯಲ್ಲಿ ಕೋವಿಡ್-19 ಸೋಂಕು ದೃಢಪಟ್ಟಿದೆ ಎಂದರು.</p>.<p>1ನೇ ಅಲೆಯ ಕೋವಿಡ್ ಸಂದರ್ಭದಲ್ಲಿ ದೊಡ್ಡಬಳ್ಳಾಪುರದ ವಿವಿಧ ಸಂಘಟನೆಗಳ ಮುಖಂಡರು ಪೊಲೀಸರೊಂದಿಗೆ ಕೈ ಜೋಡಿಸಿದ್ದರಿಂದ ಸಾರ್ವಜನಿಕರಿಗೆ ಅಗತ್ಯ ಸೇವೆಗಳು ಸಕಾಲದಲ್ಲಿ ದೊರಕಿದ್ದವು. 2ನೇ ಅಲೆ ಹೆಚ್ಚುತ್ತಿರುವ ಈ ಸಂದರ್ಭದಲ್ಲೂ ದಿನದ 24 ಗಂಟೆಗಳ ಕಾಲವು ಸೇವೆ ದೊರೆಯುವಂತೆ ಮಾಡಲು ಮುಂದಕ್ಕೆ ಬರಬೇಕಿದೆ ಎಂದರು. ಸಭೆಯಲ್ಲಿ ಬಿಜೆಪಿ ಮುಖಂಡ ಕೆ. ಎಂ.ಹನುಮಂತರಾಯಪ್ಪ ಹಾಗೂ ವಿವಿಧ ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ದೊಡ್ಡಬಳ್ಳಾಪುರ: ಕೊರೊನಾ ಸೋಂಕು ತಡೆಗೆ ರಾಜ್ಯ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಪೊಲೀಸರು ಹಲವಾರು ಕಾಯ್ದೆಗಳ ಅಡಿಯಲ್ಲಿ ದೂರುಗಳನ್ನು ದಾಖಲಿಸುವ, ದಂಡ ವಿಧಿಸುವ ಕೆಲಸವನ್ನು ಸೋಮವಾರದಿಂದಲೇ ತೀವ್ರಗೊಳಿಸಲಾಗಿದೆ ಎಂದು ಡಿವೈಎಸ್ಪಿ ಟಿ.ರಂಗಪ್ಪ ಹೇಳಿದರು.</p>.<p>ಅವರು ನಗರ ಪೊಲೀಸ್ ಠಾಣೆ ಆವರಣದಲ್ಲಿ ವಿವಿಧ ಸಂಘಟನೆಗಳ ಮುಖಂಡರು, ಬಾರ್, ಹೋಟೆಲ್ ಹಾಗೂ ಕಲ್ಯಾಣ ಮಂದಿರ ಮಾಲೀಕರ ಸಭೆಯಲ್ಲಿ ಮಾತನಾಡಿದರು.</p>.<p>ಕೋವಿಡ್ 2ನೇ ಅಲೆಯನ್ನು ತಡೆಯುವಲ್ಲಿ ಸಾರ್ವಜನಿಕರ ಸಹಕಾರ ಮುಖ್ಯವಾಗಿದೆ. ಸೋಂಕಿತರ ಸಂಖ್ಯೆ, ಸಾವುಗಳ ಸಂಖ್ಯೆಯು ವಿಶ್ವದ ಇತರೆ ದೇಶಗಳನ್ನು ಮೀರಿಸಿ ಭಾರತವು ಮುನ್ನಡೆಯುತ್ತಿರುವ ವರದಿಗಳು ಗಾಬರಿಗೊಳಿಸುತ್ತಿದೆ. ಈಹಿನ್ನೆಲೆಯಲ್ಲಿ ವಿವಾಹಕ್ಕೆ ಇನ್ನು ಸಿದ್ದತೆಗಳನ್ನು ಆರಂಭಿಸಿದವರು ವಿವಾಹ ದಿನಾಂಕವನ್ನು ಮುಂದೂಡುವುದು ಆರೋಗ್ಯದ ದೃಷ್ಟಿಯಿಂದ ಒಳ್ಳೆಯದು. ಸಾರ್ವಜನಿಕರ ಸಭೆ, ಸಮಾರಂಭ, ವಿವಾಹಗಳನ್ನು ನಡೆಸಲು ತಹಶೀಲ್ದಾರ್ ಅವರಿಂದ ಕಡ್ಡಾಯವಾಗಿ ಅನುಮತಿ ಪಡೆಯಲೇ ಬೇಕು. ತಹಶೀಲ್ದಾರ್ ಅವರು ವಿಧಿಸಿರುವ ನಿಯಮಗಳು ಪಾಲನೆಯಾಗುವಂತೆ ಪೊಲೀಸರು ನೋಡಿಕೊಳ್ಳಲಿದ್ದಾರೆ. ಕಲ್ಯಾಣ ಮಂದಿರ, ಬಾರ್, ಮಾರುಕಟ್ಟೆ ಪ್ರದೇಶಗಳು ಕೊರೊನಾ ಸೋಂಕು ಹೆಚ್ಚಾಗಲು ಇರುವ ಮುಖ್ಯ ಕೇಂದ್ರಗಳಾಗಿವೆ. ಹೀಗಾಗಿ ಸರ್ಕಾರದ ಮಾರ್ಗದರ್ಶಗಳನ್ನು ಎಲ್ಲರು ಕಡ್ಡಾಯವಾಗಿ ಪಾಲಿಸಬೇಕು<br />ಎಂದರು.</p>.<p>ಯಾವುದೇ ರೀತಿಯ ಸಮಾರಂಭ, ಧಾರ್ಮಿಕ ಕಾರ್ಯಕ್ರಮ ಸೇರಿದಂತೆ ಎಲ್ಲಕ್ಕೂ ತಹಶೀಲ್ದಾರ್ ಅವರಿಗೆ ಅಧಿಕೃತವಾಗಿ ಅರ್ಜಿಸಲ್ಲಿಸಿ ಅನುಮತಿ ಪಡೆಯಲೇ ಬೇಕು. ಇಲ್ಲವಾದಲ್ಲಿ ಕಾನೂನು ಕ್ರಮ ಅನಿವಾರ್ಯವಾಗಲಿದೆ ಎಂದರು.</p>.<p>ಪೊಲೀಸ್ ಠಾಣೆಗಳಿಗೆ ಸಾರ್ವಜನಿಕರು ಅನಾವಶಕವಾಗಿ ಬರುವುದನ್ನು ನಿಲ್ಲಿಸಬೇಕು. ಈಗಾಗಲೇ 8 ಜನ ಪೊಲೀಸ್ ಸಿಬ್ಬಂದಿಯಲ್ಲಿ ಕೋವಿಡ್-19 ಸೋಂಕು ದೃಢಪಟ್ಟಿದೆ ಎಂದರು.</p>.<p>1ನೇ ಅಲೆಯ ಕೋವಿಡ್ ಸಂದರ್ಭದಲ್ಲಿ ದೊಡ್ಡಬಳ್ಳಾಪುರದ ವಿವಿಧ ಸಂಘಟನೆಗಳ ಮುಖಂಡರು ಪೊಲೀಸರೊಂದಿಗೆ ಕೈ ಜೋಡಿಸಿದ್ದರಿಂದ ಸಾರ್ವಜನಿಕರಿಗೆ ಅಗತ್ಯ ಸೇವೆಗಳು ಸಕಾಲದಲ್ಲಿ ದೊರಕಿದ್ದವು. 2ನೇ ಅಲೆ ಹೆಚ್ಚುತ್ತಿರುವ ಈ ಸಂದರ್ಭದಲ್ಲೂ ದಿನದ 24 ಗಂಟೆಗಳ ಕಾಲವು ಸೇವೆ ದೊರೆಯುವಂತೆ ಮಾಡಲು ಮುಂದಕ್ಕೆ ಬರಬೇಕಿದೆ ಎಂದರು. ಸಭೆಯಲ್ಲಿ ಬಿಜೆಪಿ ಮುಖಂಡ ಕೆ. ಎಂ.ಹನುಮಂತರಾಯಪ್ಪ ಹಾಗೂ ವಿವಿಧ ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>