ಚುನಾವಣೆ ಭದ್ರತೆ ಕುರಿತು ಮಾತನಾಡಿದ ಅವರು ‘ಗ್ರಾಮಾಂತರ ಜಿಲ್ಲೆಯಲ್ಲಿ ಭಯಮುಕ್ತ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ರಾಷ್ಟ್ರಿಕೃತ ಬ್ಯಾಂಕ್ಗಳ ಭದ್ರತಾ ಸಿಬ್ಬಂದಿ ಹೊರತು ಪಡಿಸಿ ಈ ಕ್ರಮ ಕೈಗೊಳ್ಳಲಾಗಿದೆ. ನಾಲ್ಕು ತಾಲ್ಲೂಕು ವ್ಯಾಪ್ತಿಯಲ್ಲಿ ಪರವಾನಗಿ ಪಡೆದಿರುವ ನಾಡ ಬಂದೂಕು, ರಿವಾಲ್ವಾರ್, ಎಲ್ಲ ಬಗೆಯ ಗನ್ಗಳನ್ನು ಹಿಂದಕ್ಕೆ ಪಡೆಯಲಾಗಿದೆ’ ಎಂದು ಅವರು ಹೇಳಿದರು.