ಈ ವೇಳೆ ಆರೋಪಿಗಳಾದ ಹೇಮಂತ್ ಮತ್ತು ಸೋನು ಎಂಬುವವರು ರಾಜಾನುಕುಂಟೆ ಸಬ್ ಇನ್ಸ್ಪೆಕ್ಟರ್ ಶಂಕರಪ್ಪ ಮತ್ತು ದೊಡ್ಡಬೆಳವಂಗಲ ಪೊಲೀಸ್ ಕಾನ್ಸ್ಟೇಬಲ್ ಹುಸೇನ್ ಅವರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದಾಗ ರಾಘವ ಎಸ್.ಗೌಡ ಆರೋಪಿಗಳ ಕಾಲಿಗೆ ಗುಂಡು ಹಾರಿಸಿದ್ದಾರೆ. ಗಾಯಗೊಂಡಿರುವ ಆರೋಪಿಗಳಿಗೆ ಹಾಗೂ ಪೊಲೀಸ್ ಸಿಬ್ಬಂದಿಗೆ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಆರೋಪಿಗಳು ಯಲಹಂಕದವರು ಎಂದು ತಿಳಿದು ಬಂದಿದೆ.