‘ಪಕ್ಷ ವಹಿಸಿದ ಕಮಲ ಜ್ಯೋತಿ, ಸದಸ್ಯತ್ವ ಅಭಿಯಾನ, ಸ್ವಚ್ಛ ಭಾರತ ಕಾರ್ಯಕ್ರಮ ಯಶಸ್ವಿಯಾಗಿ ಮಾಡಿದ್ದೇನೆ. ಪಕ್ಷದ ಶಿಸ್ತಿನ ಸಿಪಾಯಿಯಂತೆ ನಡೆದುಕೊಂಡಿದ್ದೇನೆ. ಆದರೆ, ಬೇರೆ ಪಕ್ಷದಿಂದ ವಲಸೆ ಬಂದವರಿಗೆ ಮಣೆ ಹಾಕುವ ಮೂಲಕ ದ್ರೋಹ ಬಗೆಯಲಾಗಿದೆ’ ಎಂದು ಪರೋಕ್ಷವಾಗಿ ಎಂಟಿಬಿ ನಾಗರಾಜ್ ವಿರುದ್ಧ ವಾಗ್ದಾಳಿ ನಡೆಸಿದರು.