‘ಇಲ್ಲಿನ ಅಂಡರ್ಪಾಸ್ ಕಾಮಗಾರಿ ಮುಗಿದು ಒಂದೂವರೆ ವರ್ಷ ಆಗಿದೆ ಅಷ್ಟೆ. ಬುಳ್ಳಹಳ್ಳಿ ಗೇಟ್, ಅತ್ತಿಬೆಲೆ ಗೇಟ್, ಯರ್ತಿಗಾನಹಳ್ಳಿ ಗೇಟ್, ಮೇಲಿನ ತೋಟದ ಗೇಟ್ ಬಳಿ ನಿರ್ಮಾಣ ಮಾಡಿರುವ ರೈಲ್ವೆ ಅಂಡರ್ಪಾಸ್ ಸೇತುವೆ ಬಳಿ ಸಂಗ್ರಹವಾಗುವ ಮಳೆ ನೀರು ತಿಂಗಳಾದರು ಹೊರಹೋಗುವುದಿಲ್ಲ. ಎಲ್ಲೆಡೆ ಕಳಪೆ ಕಾಮಗಾರಿ ನಡೆದಿದೆ. ಕಾಮಗಾರಿ ಗುಣಮಟ್ಟದ ಬಗ್ಗೆ ಸಮಗ್ರ ತನಿಖೆಯಾಗಬೇಕು’ ಎಂದು ಅತ್ತಿಬೆಲೆ ಗ್ರಾಮದ ಪಿ.ನರಸಪ್ಪ ಒತ್ತಾಯಿಸಿದ್ದಾರೆ.