<p><strong>ದೊಡ್ಡಬಳ್ಳಾಪುರ</strong>: ನಟ ಪ್ರಥಮ್ ಮೇಲಿನ ಹಲ್ಲೆ ಮತ್ತು ಕೊಲೆಯತ್ನ ಆರೋಪಿಗಳಾದ ಯಶಸ್ವಿನಿ, ಬೇಕರಿ ರಘು ಗುರುವಾರ ದೊಡ್ಡಬಳ್ಳಾಪುರನ್ಯಾಯಾಲಯಕ್ಕೆ ಹಾಜರಾಗಿ ನಿರೀಕ್ಷಣಾ ಜಾಮೀನು <br>ಪಡೆದುಕೊಂಡರು.</p>.<p>ನಗರದ ಜೆಎಂಎಫ್ ನ್ಯಾಯಾಲಯ ಇಬ್ಬರು ಆರೋಪಿಗಳಿಗೂ ತಲಾ ₹10 ಸಾವಿರ ಬಾಂಡ್, ಇಬ್ಬರ ಶ್ಯೂರಿಟಿ ಪಡೆದು ಜಾಮೀನು ಮಂಜೂರು ಮಾಡಿದೆ. ಪೊಲೀಸರು ವಿಚಾರಣೆಗೆ ಕರೆದಾಗ ತನಿಖಾಧಿಕಾರಿಯ ಮುಂದೆ ಹಾಜರಾಗಬೇಕು ಎಂದು ಷರತ್ತು ವಿಧಿಸಿದೆ.</p>.<p>ಜುಲೈ 22ರಂದು ತಾಲ್ಲೂಕಿನ ರಾಮಯ್ಯನಪಾಳ್ಯ ಸಮೀಪದ ಯಲ್ಲಮ್ಮ ದೇವಾಲಯ ವಾರ್ಷಿಕ ಪೂಜೆ ವೇಳೆ ತಮ್ಮ ಮೇಲೆ ಹಲ್ಲೆ, ಕೊಲೆ ಯತ್ನ ನಡೆದಿದೆ ಎಂದು ಪ್ರಥಮ್ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.</p>.<p>ಪ್ರಥಮ್ ಅವರಿಗೆ ಸ್ಥಳ ಮಹಜರ್ಗೆ ಹಾಜರಾಗುವಂತೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಗುರುವಾರ ಗ್ರಾಮಾಂತರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಸಾದಿಕ್ ಪಾಷಾ ಮುಂದೆ <br>ಹಾಜರಾದರು. </p>.<p>ಪ್ರಥಮ್ ಜೊತೆ ಘಟನೆ ನಡೆದ ಸ್ಥಳಕ್ಕೆ ತೆರಳಿದ ಪೊಲೀಸರು ಸ್ಥಳ ಮಹಜರು ನಡೆಸಿದರು. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾದ ದೂರಿನಲ್ಲಿರುವ ಮಾಹಿತಿಗೂ, ಘಟನಾ ಸ್ಥಳಕ್ಕೂ ಹೋಲಿಕೆ ಕಂಡು ಬಂದಿದ್ದು, ಯಲ್ಲಮ್ಮ ದೇವಾಲಯ ಸಮೀಪ ಪೊಲೀಸರು ವಿಡಿಯೋ ಚಿತ್ರೀಕರಣ ಮಾಡಿಕೊಂಡರು.</p>.<p>ಪತ್ರಕರ್ತರೊಂದಿಗೆ ಮಾತನಾಡಿದ ಪ್ರಥಮ್, ‘ದೂರಿನಲ್ಲಿ ತಿಳಿಸಿರುವ ಎಲ್ಲಾ ಮಾಹಿತಿ ಸತ್ಯ. ಹಲ್ಲೆ, ಕೊಲೆಯತ್ನ ನಡೆದ ಸ್ಥಳವನ್ನು ಪೊಲೀಸರಿಗೆ ತೋರಿಸಲಾಗಿದೆ. ಉಳಿದ ಕಾನೂನು ಕ್ರಮಗಳನ್ನು ಪೊಲೀಸರು ತೆಗೆದುಕೊಳ್ಳಲಿದ್ದಾರೆ ಎಂದರು.</p>.<p>ರಾಮಯ್ಯನಪಾಳ್ಯ ಸಮೀಪದ ದೇಗುಲ ಪೂಜೆ ವೇಳೆ ಘಟನೆ ಹಲ್ಲೆ, ಕೊಲೆ ಆರೋಪ ಮಹಜರು ವಿಡಿಯೊ ಚಿತ್ರೀಕರಣ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೊಡ್ಡಬಳ್ಳಾಪುರ</strong>: ನಟ ಪ್ರಥಮ್ ಮೇಲಿನ ಹಲ್ಲೆ ಮತ್ತು ಕೊಲೆಯತ್ನ ಆರೋಪಿಗಳಾದ ಯಶಸ್ವಿನಿ, ಬೇಕರಿ ರಘು ಗುರುವಾರ ದೊಡ್ಡಬಳ್ಳಾಪುರನ್ಯಾಯಾಲಯಕ್ಕೆ ಹಾಜರಾಗಿ ನಿರೀಕ್ಷಣಾ ಜಾಮೀನು <br>ಪಡೆದುಕೊಂಡರು.</p>.<p>ನಗರದ ಜೆಎಂಎಫ್ ನ್ಯಾಯಾಲಯ ಇಬ್ಬರು ಆರೋಪಿಗಳಿಗೂ ತಲಾ ₹10 ಸಾವಿರ ಬಾಂಡ್, ಇಬ್ಬರ ಶ್ಯೂರಿಟಿ ಪಡೆದು ಜಾಮೀನು ಮಂಜೂರು ಮಾಡಿದೆ. ಪೊಲೀಸರು ವಿಚಾರಣೆಗೆ ಕರೆದಾಗ ತನಿಖಾಧಿಕಾರಿಯ ಮುಂದೆ ಹಾಜರಾಗಬೇಕು ಎಂದು ಷರತ್ತು ವಿಧಿಸಿದೆ.</p>.<p>ಜುಲೈ 22ರಂದು ತಾಲ್ಲೂಕಿನ ರಾಮಯ್ಯನಪಾಳ್ಯ ಸಮೀಪದ ಯಲ್ಲಮ್ಮ ದೇವಾಲಯ ವಾರ್ಷಿಕ ಪೂಜೆ ವೇಳೆ ತಮ್ಮ ಮೇಲೆ ಹಲ್ಲೆ, ಕೊಲೆ ಯತ್ನ ನಡೆದಿದೆ ಎಂದು ಪ್ರಥಮ್ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.</p>.<p>ಪ್ರಥಮ್ ಅವರಿಗೆ ಸ್ಥಳ ಮಹಜರ್ಗೆ ಹಾಜರಾಗುವಂತೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಗುರುವಾರ ಗ್ರಾಮಾಂತರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಸಾದಿಕ್ ಪಾಷಾ ಮುಂದೆ <br>ಹಾಜರಾದರು. </p>.<p>ಪ್ರಥಮ್ ಜೊತೆ ಘಟನೆ ನಡೆದ ಸ್ಥಳಕ್ಕೆ ತೆರಳಿದ ಪೊಲೀಸರು ಸ್ಥಳ ಮಹಜರು ನಡೆಸಿದರು. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾದ ದೂರಿನಲ್ಲಿರುವ ಮಾಹಿತಿಗೂ, ಘಟನಾ ಸ್ಥಳಕ್ಕೂ ಹೋಲಿಕೆ ಕಂಡು ಬಂದಿದ್ದು, ಯಲ್ಲಮ್ಮ ದೇವಾಲಯ ಸಮೀಪ ಪೊಲೀಸರು ವಿಡಿಯೋ ಚಿತ್ರೀಕರಣ ಮಾಡಿಕೊಂಡರು.</p>.<p>ಪತ್ರಕರ್ತರೊಂದಿಗೆ ಮಾತನಾಡಿದ ಪ್ರಥಮ್, ‘ದೂರಿನಲ್ಲಿ ತಿಳಿಸಿರುವ ಎಲ್ಲಾ ಮಾಹಿತಿ ಸತ್ಯ. ಹಲ್ಲೆ, ಕೊಲೆಯತ್ನ ನಡೆದ ಸ್ಥಳವನ್ನು ಪೊಲೀಸರಿಗೆ ತೋರಿಸಲಾಗಿದೆ. ಉಳಿದ ಕಾನೂನು ಕ್ರಮಗಳನ್ನು ಪೊಲೀಸರು ತೆಗೆದುಕೊಳ್ಳಲಿದ್ದಾರೆ ಎಂದರು.</p>.<p>ರಾಮಯ್ಯನಪಾಳ್ಯ ಸಮೀಪದ ದೇಗುಲ ಪೂಜೆ ವೇಳೆ ಘಟನೆ ಹಲ್ಲೆ, ಕೊಲೆ ಆರೋಪ ಮಹಜರು ವಿಡಿಯೊ ಚಿತ್ರೀಕರಣ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>