ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ನಿರ್ಮಲಮ್ಮ ಮಾತನಾಡಿ, ಮಕ್ಕಳು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮೂಲಕ ಶಾಲೆ, ತಂದೆ ತಾಯಿಗಳಿಗೆ ಕೀರ್ತಿ ತರುವ ವ್ಯಕ್ತಿತ್ವಗಳನ್ನು ಬೆಳೆಸಿಕೊಳ್ಳಬೇಕು. ಅಂಜಿಕೆ, ಭಯ, ಹಿಂಜರಿಕೆಯನ್ನು ಮೈಗೂಡಿಸಿಕೊಂಡರೆ ಜೀವನದಲ್ಲಿ ಏನನ್ನೂ ಸಾಧಿಸಲಾಗುವುದಿಲ್ಲ. ಮಕ್ಕಳ ಸಾಧನೆಗೆ ಪೋಷಕರ ಬೆಂಬಲವೂ ಅಗತ್ಯವಾಗಿ ಬೇಕಾಗಿದೆ ಎಂದರು.