ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಗೌಸ್ ಖಾನ್ ಮಾತನಾಡಿ, ಸಂಕಷ್ಟದ ಸಮಯದಲ್ಲಿ ಹಬ್ಬ ಆಚರಣೆ ಮಾಡಿದ್ದೇವೆ. ಇಡೀ ಪ್ರಪಂಚ ಕೊರೊನಾ ಸೋಂಕಿನಿಂದ ತತ್ತರಿಸುತ್ತಿದ್ದು, ಎಲ್ಲಾ ದೇಶಗಳಲ್ಲಿ ಶಾಂತಿ ನೆಲೆಸಬೇಕು. ಈ ಸಾಂಕ್ರಾಮಿಕ ರೋಗ ತೊಲಗಬೇಕು ಎಂದು ವಿಶೇಷವಾಗಿ ಪ್ರಾರ್ಥಿಸಿದ್ದೇವೆ. ಕೊರೊನಾ ವಾರಿಯರ್ಸ್, ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಪೌರಕಾರ್ಮಿಕರು, ಆಶಾ ಕಾರ್ಯಕರ್ತೆಯರು, ಮಾಧ್ಯಮಗಳು, ವಿವಿಧ ಸಂಘಸಂಸ್ಥೆಗಳಿಗೆಒಳ್ಳೆಯದು ಮಾಡಲಿ ಎಂದು ಬೇಡಿಕೊಂಡಿದ್ದೇವೆ ಎಂದರು.