ಫೆ. 19ರಂದು ಬೆಳಿಗ್ಗೆ 8ಕ್ಕೆ ಬಸವ ಭವನದ ಆವರಣದಲ್ಲಿ ಧ್ವಜಾರೋಹಣದೊಂದಿಗೆ ಆರಂಭವಾಗುವ ಸಮ್ಮೇಳನದಲ್ಲಿ ನಗರದ ಡಾ.ರಾಜ್ಕುಮಾರ್ ಪ್ರತಿಮೆಗೆ ಪುಷ್ಪ ನಮನದ ಮೂಲಕ ಸಮ್ಮೇಳನಾಧ್ಯಕ್ಷರ ಮೆರವಣಿಗೆಯು ಚಾಲನೆಗೊಳ್ಳಲಿದೆ. ಮಧ್ಯಾಹ್ನ 2 ಗಂಟೆಯಿಂದ ನಾಡು, ನುಡಿ, ಸಂಸ್ಕೃತಿ ಕುರಿತು ವಿಚಾರಗೋಷ್ಠಿ, ಕನ್ನಡ, ಮಹಿಳೆ ಮತ್ತು ಮಕ್ಕಳು ಕುರಿತು ವಿಚಾರಗೋಷ್ಠಿ ನಡೆಯಲಿದೆ. ಸಂಜೆ 6 ಗಂಟೆಯ ನಂತರ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಫೆ. 20ರಂದು ಬೆಳಿಗ್ಗೆ 9 ಗಂಟೆಗೆ ಕೃಷಿ, ನೀರಾವರಿ, ನೇಕಾರಿಕೆ ಕುರಿತ ವಿಚಾರಗೋಷ್ಠಿ, ಬೆಳಿಗ್ಗೆ 11.30ಕ್ಕೆ ಸಮ್ಮೇಳನ ಅಧ್ಯಕ್ಷರೊಂದಿಗೆ ಸಂವಾದ, ಕವಿಗೋಷ್ಠಿ, ಸನ್ಮಾನ ಸಮಾರಂಭ, ಸಂಜೆ 5 ಗಂಟೆಗೆ ಸಮಾರೋಪ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ, ಪುಸ್ತಕ ಬಿಡುಗಡೆ ನಡೆಯಲಿದೆ ಎಂದು ವಿವರಿಸಿದರು.