ಕಾರ್ಯಕ್ರಮದ ಸಿದ್ಧತೆ ಕುರಿತು ಮಾಹಿತಿ ನೀಡಿದ ಅವರು, ‘ಜಿಲ್ಲಾಡಳಿತ ಭವನದಲ್ಲಿ ಈ ಹಿಂದೆ ಇಲಾಖಾವಾರು ಅಧಿಕಾರಿಗಳ ಸಭೆ ಕರೆದು ಚರ್ಚಿಸಲಾಗಿದೆ. ಈ ಬಾರಿ ಸ್ವಾತಂತ್ರ್ಯ ದಿನಾಚರಣೆಯನ್ನು ಮುಖ್ಯವಾಗಿ ಮಳೆ ನೀರು ಸಂಗ್ರಹ ವ್ಯವಸ್ಥೆ, ನೀಲಗಿರಿ ತೆರವುಗೊಳಿಸಿ ಅಂತರ್ಜಲ ಉಳಿಸಿ, ಜಲಮೂಲ ಸಂರಕ್ಷಣೆ ಕೆರೆ ಅಭಿವೃದ್ಧಿಗೆ ಸಹಕರಿಸಿ ಎಂಬ ಘೋಷ ವಾಕ್ಯದೊಂದಿಗೆ ಆಚರಿಸಲಾಗುತ್ತಿದೆ’ ಎಂದು ಹೇಳಿದರು.