ಸಿ.ಕೆ.ಮಲ್ಲಪ್ಪ ಮಾತನಾಡಿ, ‘ಪಾರಂಪರಿಕ ಜಲ ಮೂಲಗಳನ್ನು ರಕ್ಷಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಹಾಗಾಗಿ ಪ್ರಾಚೀನ ಕಾಲದಿಂದಲೂ ಕೆರೆ, ಕುಂಟೆ, ಬಾವಿಗಳು ಗ್ರಾಮೀಣ ಭಾಗದ ಜೀವನಾಡಿಗಳಾಗಿದ್ದವು. ಪ್ರತಿಯೊಂದು ಗ್ರಾಮದಲ್ಲಿಯೂ ಜನರು ಸಮಾಜದ ಆಸ್ತಿ ಎಂಬಂತೆ ಇವುಗಳನ್ನು ರಕ್ಷಿಸುತ್ತಿದ್ದರು. ಇತ್ತೀಚಿನ ದಿನಗಳಲ್ಲಿ ಕೆರೆ, ಕುಂಟೆಗಳನ್ನು ಕಲುಷಿತಗೊಳಿಸಲಾಗುತ್ತಿದೆ. ಹಾಗಾಗಿ ಜಲಮೂಲಗಳನ್ನು ರಕ್ಷಿಸಲು ಸರ್ಕಾರ ಅಮೃತ ಸರೋವರ ಯೋಜನೆ ಜಾರಿಗೊಳಿಸಿದ್ದು ಗ್ರಾಮಗಳಲ್ಲಿನ ಕುಂಟೆಗಳನ್ನು ಅಭಿವೃದ್ಧಿಪಡಿಸಿ ಅವುಗಳನ್ನು ಬಳಕೆ ಮಾಡಲು ಮತ್ತು ಜಲಮೂಲಗಳನ್ನು ಸಂರಕ್ಷಿಸಲು ಕ್ರಮ ಕೈಗೊಳ್ಳಲಾಗುತ್ತಿದೆ’ ಎಂದರು.