ಮಕ್ಕಳಿಗೆ ಆಲ್ ಬೆಂಡಾಜೋಲ್ ಜಂತು ಹುಳು ನಿವಾರಣಾ ಮಾತ್ರೆ ನೀಡಿ, ‘ಮಕ್ಕಳಲ್ಲಿನ ಅಪೌಷ್ಟಿಕತೆ ಹಾಗೂ ರಕ್ತ ಹೀನತೆ ತೊಡೆದು ಹಾಕಬಹುದು. ಇಡೀ ದೇಶದಲ್ಲಿ ಅಪೌಷ್ಟಿಕತೆ ಸಮಸ್ಯೆಯು ಹೆಚ್ಚಾಗಿದ್ದು, ಅದನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ರಾಷ್ಟ್ರೀಯ ಜಂತು ಹುಳು ನಿರ್ಮೂಲನ ದಿನದ ಆಚರಣೆ ಸಹಕಾರಿ. ಜಂತು ಹುಳು ನಿರ್ಮೂಲನೆಯಿಂದಾಗಿ ಮಕ್ಕಳು ಸೇವನೆ ಮಾಡುವ ಪೌಷ್ಟಿಕ ಆಹಾರ ಮಕ್ಕಳ ದೇಹಕ್ಕೆ ಸರಿಯಾದ ಪ್ರಮಾಣದಲ್ಲಿ ಲಭ್ಯವಾಗುತ್ತದೆ. ಜಂತು ಹುಳು ನಿರ್ಮೂಲನೆಗೆ ಮಾತ್ರೆ ಸೇವಿಸುವುದು ಮಾತ್ರವಲ್ಲದೇ ಶೌಚಾಲಯಕ್ಕೆ ಹೋಗಿ ಬಂದ ನಂತರ ಹಾಗೂ ಊಟಕ್ಕೆ ಮುನ್ನ ಚೆನ್ನಾಗಿ ಕೈ ತೊಳೆಯುವ ಹವ್ಯಾಸವನ್ನು ಮಕ್ಕಳು ಮೈಗೂಡಿಸಿಕೊಳ್ಳಬೇಕು’ ಎಂದರು.