<p><strong>ಸೂಲಿಬೆಲೆ: </strong>ಸಾರ್ವಜನಿಕರ ಅನುದಾನದಲ್ಲಿ ನಿರ್ಮಾಣವಾಗುವ ಕಾಮಗಾರಿಗಳು ಗುಣಮಟ್ಟದಿಂದ ಕೂಡಿರುವಂತೆ ಗುತ್ತಿಗೆದಾರರು ನೋಡಿಕೊಳ್ಳಬೇಕು ಎಂದು ಶಾಸಕ ಶರತ್ ಬಚ್ಚೇಗೌಡ ಹೇಳಿದರು.</p>.<p>ಸೂಲಿಬೆಲೆ ಹೋಬಳಿಯ ಕಂಬಳೀಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇ.ಮುತ್ಸಂದ್ರ ಗ್ರಾಮದಲ್ಲಿ ವಿವಿಧ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.</p>.<p>ಮುತ್ಸಂದ್ರ ಗ್ರಾಮದಲ್ಲಿ ₹ 10 ಲಕ್ಷ ಅಂದಾಜು ವೆಚ್ಚದಲ್ಲಿ ಕಟ್ಟಡ ಹಾಗೂ ಕಾಲೊನಿಯಲ್ಲಿ ₹ 10 ಲಕ್ಷ ಅಂದಾಜು ವೆಚ್ಚದಲ್ಲಿ ಚರಂಡಿ ಕಾಮಗಾರಿಯನ್ನು ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ಕೈಗೊಲ್ಲಲಾಗಿದೆ ಎಂದು ತಿಳಿಸಿದರು.</p>.<p>ಹೊಸಕೋಟೆ ತಾಲ್ಲೂಕನ್ನು ಅಭಿವೃದ್ಧಿಯತ್ತ ಕೊಂಡೊಯ್ಯುವುದೇ ಮೊದಲ ಆದ್ಯತೆಯಾಗಿದೆ. ಆ ದೆಸೆಯಲ್ಲಿ ಯೋಜನೆಗಳನ್ನು ಮಾಡಲಾಗುತ್ತಿದೆ. ಕೊರೊನಾ ಸಂಕಷ್ಟದಲ್ಲಿ ಜನತೆ ಜೊತೆಗಿದ್ದೇನೆ. ಈ ಸಂದರ್ಭದಲ್ಲಿ ಸುಮಾರು 45 ಸಾವಿರ ಆಹಾರ ಕಿಟ್ ನೀಡಲಾಗಿದೆ. ಇತ್ತೀಚೆಗೆ ಮಳೆ ಹಾನಿಗೊಳಗಾದ ಕುಟುಂಬಗಳ ನೆರವಿಗೆ ಧಾವಿಸಲಾಗಿದೆ ಎಂದು ಹೇಳಿದರು.</p>.<p>ಸಹಕಾರ ಬ್ಯಾಂಕ್ ಅಧ್ಯಕ್ಷ ಬಿ.ವಿ.ಸತೀಶಗೌಡ, ವೈ.ಎಸ್.ಎಂ.ಮಂಜುನಾಥ್, ತಾಲ್ಲೂಕು ಪಂಚಾಯಿತಿ ಸದಸ್ಯ ನಾಗರಾಜಪ್ಪ, ಹಸಿಗಾಳ ಸೋಮಶೇಖರ್, ಮುಖಂಡರಾದ ಆನಂದಪ್ಪ, ದೇವರಾಜ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸೂಲಿಬೆಲೆ: </strong>ಸಾರ್ವಜನಿಕರ ಅನುದಾನದಲ್ಲಿ ನಿರ್ಮಾಣವಾಗುವ ಕಾಮಗಾರಿಗಳು ಗುಣಮಟ್ಟದಿಂದ ಕೂಡಿರುವಂತೆ ಗುತ್ತಿಗೆದಾರರು ನೋಡಿಕೊಳ್ಳಬೇಕು ಎಂದು ಶಾಸಕ ಶರತ್ ಬಚ್ಚೇಗೌಡ ಹೇಳಿದರು.</p>.<p>ಸೂಲಿಬೆಲೆ ಹೋಬಳಿಯ ಕಂಬಳೀಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇ.ಮುತ್ಸಂದ್ರ ಗ್ರಾಮದಲ್ಲಿ ವಿವಿಧ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.</p>.<p>ಮುತ್ಸಂದ್ರ ಗ್ರಾಮದಲ್ಲಿ ₹ 10 ಲಕ್ಷ ಅಂದಾಜು ವೆಚ್ಚದಲ್ಲಿ ಕಟ್ಟಡ ಹಾಗೂ ಕಾಲೊನಿಯಲ್ಲಿ ₹ 10 ಲಕ್ಷ ಅಂದಾಜು ವೆಚ್ಚದಲ್ಲಿ ಚರಂಡಿ ಕಾಮಗಾರಿಯನ್ನು ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ಕೈಗೊಲ್ಲಲಾಗಿದೆ ಎಂದು ತಿಳಿಸಿದರು.</p>.<p>ಹೊಸಕೋಟೆ ತಾಲ್ಲೂಕನ್ನು ಅಭಿವೃದ್ಧಿಯತ್ತ ಕೊಂಡೊಯ್ಯುವುದೇ ಮೊದಲ ಆದ್ಯತೆಯಾಗಿದೆ. ಆ ದೆಸೆಯಲ್ಲಿ ಯೋಜನೆಗಳನ್ನು ಮಾಡಲಾಗುತ್ತಿದೆ. ಕೊರೊನಾ ಸಂಕಷ್ಟದಲ್ಲಿ ಜನತೆ ಜೊತೆಗಿದ್ದೇನೆ. ಈ ಸಂದರ್ಭದಲ್ಲಿ ಸುಮಾರು 45 ಸಾವಿರ ಆಹಾರ ಕಿಟ್ ನೀಡಲಾಗಿದೆ. ಇತ್ತೀಚೆಗೆ ಮಳೆ ಹಾನಿಗೊಳಗಾದ ಕುಟುಂಬಗಳ ನೆರವಿಗೆ ಧಾವಿಸಲಾಗಿದೆ ಎಂದು ಹೇಳಿದರು.</p>.<p>ಸಹಕಾರ ಬ್ಯಾಂಕ್ ಅಧ್ಯಕ್ಷ ಬಿ.ವಿ.ಸತೀಶಗೌಡ, ವೈ.ಎಸ್.ಎಂ.ಮಂಜುನಾಥ್, ತಾಲ್ಲೂಕು ಪಂಚಾಯಿತಿ ಸದಸ್ಯ ನಾಗರಾಜಪ್ಪ, ಹಸಿಗಾಳ ಸೋಮಶೇಖರ್, ಮುಖಂಡರಾದ ಆನಂದಪ್ಪ, ದೇವರಾಜ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>