<p><strong>ಆನೇಕಲ್:</strong> ‘ಖಾಸಗಿ ನರ್ಸಿಂಗ್ ಹೋಂಗಳು ಸೇವಾ ಮನೋಭಾವದಿಂದ ಕೆಲಸ ಮಾಡುವ ಮೂಲಕ ಕೊರೊನಾ ಸಂದರ್ಭದಲ್ಲಿ ಸ್ಪಂದಿಸಬೇಕು. ಈ ಮೂಲಕ ಸಂಕಷ್ಟದ ಸಂದರ್ಭದಲ್ಲಿ ಸರ್ಕಾರದ ಜೊತೆಗೆ ಕೈಜೋಡಿಸಬೇಕು’ ಎಂದು<br />ಡಿವೈಎಸ್ಪಿ ಎಚ್.ಎಂ.ಮಹದೇವಯ್ಯ ತಿಳಿಸಿದರು.</p>.<p>ಅವರು ತಾಲ್ಲೂಕಿನ ಜಿಗಣಿಯಲ್ಲಿ ವೈದ್ಯರು ಮತ್ತು ಔಷಧಿ ವ್ಯಾಪಾರಿಗಳ ಸಭೆಯಲ್ಲಿ ಮಾತನಾಡಿದರು.</p>.<p>‘ಕೋವಿಡ್ ಕೇಂದ್ರಗಳಲ್ಲಿ ಖಾಸಗಿ ಆಸ್ಪತ್ರೆಗಳ ವೈದ್ಯರು ಹಾಗೂ ಸಿಬ್ಬಂದಿ ವಾರಕ್ಕೊಬ್ಬರಂತೆ ಸ್ವಯಂಸೇವೆ ಮಾಡುವ ಮೂಲಕ ಕೋವಿಡ್ ಕೇಂದ್ರ ಸುಗಮವಾಗಿ ನಡೆಯಲು ಸಹಕಾರ ನೀಡಬೇಕು. ಖಾಸಗಿ ಆಸ್ಪತ್ರೆಗಳ ವಿರುದ್ಧ ಹಲವಾರು ದೂರುಗಳು ಬರುತ್ತಿವೆ. ದೂರುಗಳು ಬಾರದಂತೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಉತ್ತಮ ಸೇವೆ ಮಾಡುವ ಮೂಲಕ ನೆರವಾಗಬೇಕು’ ಎಂದರು.</p>.<p>ಜಿಗಣಿ ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಲತಾ ಮಾತನಾಡಿ, ‘ಕೊರೊನಾ ಸೋಂಕು ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದೆ. ಇವುಗಳನ್ನು ತಡೆಯುವ ನಿಟ್ಟಿನಲ್ಲಿ ಸರ್ಕಾರಿ ಆಸ್ಪತ್ರೆಗಳ ಜೊತೆಗೆ ಖಾಸಗಿ ವೈದ್ಯರು ಮತ್ತು ಸಿಬ್ಬಂದಿ ಒಗ್ಗೂಡಿ ಕೆಲಸ ಮಾಡಬೇಕಾಗಿದೆ. ಚಿಕಿತ್ಸೆಗೆ ಬರುವ ರೋಗಿಗಳಲ್ಲಿ ಕೆಮ್ಮು, ನೆಗಡಿ, ಉಬಸ, ಅತಿಸಾರ, ಎದೆ ಉರಿ ಕಂಡುಬಂದಲ್ಲಿ ಕಡ್ಡಾಯವಾಗಿ ಕೊರೊನಾ ಪರೀಕ್ಷೆ ಮಾಡಿಸಬೇಕು. ವೃದ್ಧರು, ಮಧುಮೇಹ ಮತ್ತು ಡಯಾಲಿಸಿಸ್ ಮಾಡಿಸುವ ರೋಗಿಗಳ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು’ ಎಂದರು.</p>.<p>ಜಿಗಣಿ ಪೊಲೀಸ್ ವೃತ್ತ ನಿರೀಕ್ಷಕ ಕೆ.ವಿಶ್ವನಾಥ್ ಮಾತನಾಡಿ, ‘ನರ್ಸಿಂಗ್ ಹೋಂಗಳಲ್ಲಿ ಪ್ರತಿ ರೋಗಿಯ ಮೊಬೈಲ್ ಸಂಖ್ಯೆ ಮತ್ತು ಆಧಾರ್ ಸಂಖ್ಯೆಯನ್ನು ಕಡ್ಡಾಯವಾಗಿ ಪಡೆಯಬೇಕು. ಕಾರ್ಮಿಕರಾಗಿದ್ದಲ್ಲಿ ಕೈಗಾರಿಕೆಗಳು ನೀಡುವ ಗುರುತಿನ ಚೀಟಿ ಪ್ರತಿ ಪಡೆಯಬೇಕು. ವೈದ್ಯರ ಸೂಚನೆ ಚೀಟಿಯಿಲ್ಲದೇ ಔಷಧಿ ನೀಡಬಾರದು. ಕೆಮ್ಮು, ಜ್ವರಕ್ಕಾಗಿ ಮಾತ್ರೆಗಳನ್ನು ಔಷಧಿ ಅಂಗಡಿಗಳಲ್ಲಿ ಜನರು ಕೇಳಿದರೆವೈದ್ಯರ ತಪಾಸಣೆಗೆ ಕಳುಹಿಸಬೇಕು’ ಎಂದರು.</p>.<p>ಜಿಗಣಿ ಪುರಸಭಾ ಮುಖ್ಯಾಧಿಕಾರಿ ಅಮರನಾಥ್, ಮುಖಂಡರಾದ ಬಾಬು, ಪ್ರವೀಣ್, ಗಿರೀಶ್, ಸುರೇಶ್ರೆಡ್ಡಿ, ನಾಗರಾಜು, ಮುರಳಿ, ಧರ್ಮೇಂದ್ರ, ರಾಕೇಶ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆನೇಕಲ್:</strong> ‘ಖಾಸಗಿ ನರ್ಸಿಂಗ್ ಹೋಂಗಳು ಸೇವಾ ಮನೋಭಾವದಿಂದ ಕೆಲಸ ಮಾಡುವ ಮೂಲಕ ಕೊರೊನಾ ಸಂದರ್ಭದಲ್ಲಿ ಸ್ಪಂದಿಸಬೇಕು. ಈ ಮೂಲಕ ಸಂಕಷ್ಟದ ಸಂದರ್ಭದಲ್ಲಿ ಸರ್ಕಾರದ ಜೊತೆಗೆ ಕೈಜೋಡಿಸಬೇಕು’ ಎಂದು<br />ಡಿವೈಎಸ್ಪಿ ಎಚ್.ಎಂ.ಮಹದೇವಯ್ಯ ತಿಳಿಸಿದರು.</p>.<p>ಅವರು ತಾಲ್ಲೂಕಿನ ಜಿಗಣಿಯಲ್ಲಿ ವೈದ್ಯರು ಮತ್ತು ಔಷಧಿ ವ್ಯಾಪಾರಿಗಳ ಸಭೆಯಲ್ಲಿ ಮಾತನಾಡಿದರು.</p>.<p>‘ಕೋವಿಡ್ ಕೇಂದ್ರಗಳಲ್ಲಿ ಖಾಸಗಿ ಆಸ್ಪತ್ರೆಗಳ ವೈದ್ಯರು ಹಾಗೂ ಸಿಬ್ಬಂದಿ ವಾರಕ್ಕೊಬ್ಬರಂತೆ ಸ್ವಯಂಸೇವೆ ಮಾಡುವ ಮೂಲಕ ಕೋವಿಡ್ ಕೇಂದ್ರ ಸುಗಮವಾಗಿ ನಡೆಯಲು ಸಹಕಾರ ನೀಡಬೇಕು. ಖಾಸಗಿ ಆಸ್ಪತ್ರೆಗಳ ವಿರುದ್ಧ ಹಲವಾರು ದೂರುಗಳು ಬರುತ್ತಿವೆ. ದೂರುಗಳು ಬಾರದಂತೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಉತ್ತಮ ಸೇವೆ ಮಾಡುವ ಮೂಲಕ ನೆರವಾಗಬೇಕು’ ಎಂದರು.</p>.<p>ಜಿಗಣಿ ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಲತಾ ಮಾತನಾಡಿ, ‘ಕೊರೊನಾ ಸೋಂಕು ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದೆ. ಇವುಗಳನ್ನು ತಡೆಯುವ ನಿಟ್ಟಿನಲ್ಲಿ ಸರ್ಕಾರಿ ಆಸ್ಪತ್ರೆಗಳ ಜೊತೆಗೆ ಖಾಸಗಿ ವೈದ್ಯರು ಮತ್ತು ಸಿಬ್ಬಂದಿ ಒಗ್ಗೂಡಿ ಕೆಲಸ ಮಾಡಬೇಕಾಗಿದೆ. ಚಿಕಿತ್ಸೆಗೆ ಬರುವ ರೋಗಿಗಳಲ್ಲಿ ಕೆಮ್ಮು, ನೆಗಡಿ, ಉಬಸ, ಅತಿಸಾರ, ಎದೆ ಉರಿ ಕಂಡುಬಂದಲ್ಲಿ ಕಡ್ಡಾಯವಾಗಿ ಕೊರೊನಾ ಪರೀಕ್ಷೆ ಮಾಡಿಸಬೇಕು. ವೃದ್ಧರು, ಮಧುಮೇಹ ಮತ್ತು ಡಯಾಲಿಸಿಸ್ ಮಾಡಿಸುವ ರೋಗಿಗಳ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು’ ಎಂದರು.</p>.<p>ಜಿಗಣಿ ಪೊಲೀಸ್ ವೃತ್ತ ನಿರೀಕ್ಷಕ ಕೆ.ವಿಶ್ವನಾಥ್ ಮಾತನಾಡಿ, ‘ನರ್ಸಿಂಗ್ ಹೋಂಗಳಲ್ಲಿ ಪ್ರತಿ ರೋಗಿಯ ಮೊಬೈಲ್ ಸಂಖ್ಯೆ ಮತ್ತು ಆಧಾರ್ ಸಂಖ್ಯೆಯನ್ನು ಕಡ್ಡಾಯವಾಗಿ ಪಡೆಯಬೇಕು. ಕಾರ್ಮಿಕರಾಗಿದ್ದಲ್ಲಿ ಕೈಗಾರಿಕೆಗಳು ನೀಡುವ ಗುರುತಿನ ಚೀಟಿ ಪ್ರತಿ ಪಡೆಯಬೇಕು. ವೈದ್ಯರ ಸೂಚನೆ ಚೀಟಿಯಿಲ್ಲದೇ ಔಷಧಿ ನೀಡಬಾರದು. ಕೆಮ್ಮು, ಜ್ವರಕ್ಕಾಗಿ ಮಾತ್ರೆಗಳನ್ನು ಔಷಧಿ ಅಂಗಡಿಗಳಲ್ಲಿ ಜನರು ಕೇಳಿದರೆವೈದ್ಯರ ತಪಾಸಣೆಗೆ ಕಳುಹಿಸಬೇಕು’ ಎಂದರು.</p>.<p>ಜಿಗಣಿ ಪುರಸಭಾ ಮುಖ್ಯಾಧಿಕಾರಿ ಅಮರನಾಥ್, ಮುಖಂಡರಾದ ಬಾಬು, ಪ್ರವೀಣ್, ಗಿರೀಶ್, ಸುರೇಶ್ರೆಡ್ಡಿ, ನಾಗರಾಜು, ಮುರಳಿ, ಧರ್ಮೇಂದ್ರ, ರಾಕೇಶ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>